Homeಮುಖಪುಟಕಾಶ್ಮೀರದಲ್ಲಿ ಕೇವಲ ತೋರಿಕೆಗಾಗಿ ಬಿಡಿಸಿ ಚುನಾವಣೆ: ಕಾಂಗ್ರೆಸ್, ಶೆಹ್ಲಾ ರಶೀದ್ ಚುನಾವಣಾ ಬಹಿಷ್ಕಾರ

ಕಾಶ್ಮೀರದಲ್ಲಿ ಕೇವಲ ತೋರಿಕೆಗಾಗಿ ಬಿಡಿಸಿ ಚುನಾವಣೆ: ಕಾಂಗ್ರೆಸ್, ಶೆಹ್ಲಾ ರಶೀದ್ ಚುನಾವಣಾ ಬಹಿಷ್ಕಾರ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಬೆಳಗ್ಗೆ 9ರಿಂದ ಸಾಯಂಕಾಲದವರೆಗೆ ಬ್ಲಾಕ್ ಡೆವಲಪ್ ಮೆಂಡ್ ಕೌನ್ಸಿಲ್ ಎಲೆಕ್ಷನ್ ನಡೆಯಲಿದೆ. ಅದೇ ದಿನ 3 ಗಂಟೆಗೆ ಕೌಂಟಿಂಗ್ ಕೂಡ ನಡೆಯಲಿದೆ. ಆದರೆ ಇದಕ್ಕೆ ಜೆಎ‌ನ್‌ಯು ಕಾಲೇಜಿನ ಮಾಜಿ ವಿದ್ಯಾರ್ಥಿನಿ ಹಾಗೂ ಹೋರಾಟಗಾರ್ತಿ ಶೆಹ್ಲಾ ರಷೀದ್ ವಿರೋಧ ವ್ಯಕ್ತಪಡಿಸಿದ್ದು, ಕಾಶ್ಮೀರದಲ್ಲಿ ಚುನಾವಣಾ ರಾಜಕೀಯ ತೊರೆಯುವುದಾಗಿ ಹೇಳಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಮಾಜಿ ಐಎಎಸ್ ಅಧಿಕಾರಿ ಶಾಹ್ ಫಸಲ್, ಮಾರ್ಚ್ ನಲ್ಲಿ ರಚಿಸಿದ್ದ ಪೀಪಲ್ಸ್ ಪಾರ್ಟಿಗೆ ಸೇರ್ಪಡೆಯಾಗಿದ್ದ ಶೆಹ್ಲಾ ರಷೀದ್, ಈಗ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಕಾಶ್ಮೀರದಲ್ಲಿ ಬ್ಲಾಕ್ ಡೆವಲಪ್ ಮೆಂಟ್ ಕೌನ್ಸಿಲ್ ಚುನಾವಣೆ ನಿಗದಿಪಡಿಸಿದೆ. ಆದರೆ ಕಾಶ್ಮೀರದಲ್ಲಿ 65 ದಿನಗಳಿಂದ ಜನತೆಗೆ ಸರಿಯಾಗಿ ರಕ್ಷಣೆ ನೀಡಲಾಗುತ್ತಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯಲಾಗಿದೆ. ಅಲ್ಲದೇ ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಬಿಂಬಿಸಲು ಕೇಂದ್ರ ಸರ್ಕಾರ ಚುನಾವಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ರಾಜಕೀಯಕ್ಕಾಗಿ ರಾಜಿ ಮಾಡಿಕೊಳ್ಳುವ ಸಂದಿಗ್ಥ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹೋರಾಟಗಾರ್ತಿಯಾಗಿ ಕೆಲಸ ಮುಂದುವರೆಸುವುದಾಗಿ ಶೆಹ್ಲಾ ತಿಳಿಸಿದ್ದಾರೆ. ಅಲ್ಲದೇ ಕಾಶ್ಮೀರದಲ್ಲಿ ರಾಜಕೀಯ ನಾಯಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಜನತೆ ಮುನ್ನೆಲೆಗೆ ಬರಲು ಭಯಪಡುತ್ತಿದ್ದಾರೆ. ಆರ್ಟಿಕಲ್ 370 ಮತ್ತು ವಿಭಜನೆ ಬಗ್ಗೆ ಮಾತನಾಡದಂತೆ ತಡೆಯಲಾಗಿದೆ. ಕೆಲ ಕಾಯಿದೆ ಮೂಲಕ ಜನತೆಯನ್ನು ನಿಯಂತ್ರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಇತ್ತ ಕಾಂಗ್ರೆಸ್ ಕೂಡ ಕಾಶ್ಮೀರದಲ್ಲಿ ನಡೆಯಲಿರುವ ಬಿಡಿಸಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದೆ. ಪ್ರದೇಶ್ ಕಾಂಗ್ರೆಸ್ ಕಮಿಟಿ ಮುಖ್ಯ ವಕ್ತಾರ ರವೀಂದ್ರ ಶರ್ಮಾ ಮಾತನಾಡಿ, ಸರ್ಕಾರ ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ಬಗ್ಗೆ ಕೇಳಿದಾಗಲೂ ಯಾವುದೇ ಸಹಕಾರ ನೀಡುತ್ತಿಲ್ಲ ಎಂದಿದ್ದಾರೆ. ಇನ್ನು ಕೆಲ ರಾಜಕೀಯ ನಾಯಕರನ್ನು ಗೃಹಬಂಧನದಿಂದ ಮುಕ್ತಗೊಳಿಸಿಲ್ಲ. ಪ್ರಭಾವಿ ನಾಯಕರ ಮೇಲೆ ನಿಷೇಧ ಹೇರಲಾಗಿದೆ ಹಾಗಾಗಿ ನಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಮಾಜಿ ಸಿಎಂ ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರ ಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿವೆ. ಆದರೂ ಸಹ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ರವೀಂದ್ರ ಹೇಳಿದ್ದು, ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...