Homeಮುಖಪುಟಕಾಶ್ಮೀರದಲ್ಲಿ ಕೇವಲ ತೋರಿಕೆಗಾಗಿ ಬಿಡಿಸಿ ಚುನಾವಣೆ: ಕಾಂಗ್ರೆಸ್, ಶೆಹ್ಲಾ ರಶೀದ್ ಚುನಾವಣಾ ಬಹಿಷ್ಕಾರ

ಕಾಶ್ಮೀರದಲ್ಲಿ ಕೇವಲ ತೋರಿಕೆಗಾಗಿ ಬಿಡಿಸಿ ಚುನಾವಣೆ: ಕಾಂಗ್ರೆಸ್, ಶೆಹ್ಲಾ ರಶೀದ್ ಚುನಾವಣಾ ಬಹಿಷ್ಕಾರ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಬೆಳಗ್ಗೆ 9ರಿಂದ ಸಾಯಂಕಾಲದವರೆಗೆ ಬ್ಲಾಕ್ ಡೆವಲಪ್ ಮೆಂಡ್ ಕೌನ್ಸಿಲ್ ಎಲೆಕ್ಷನ್ ನಡೆಯಲಿದೆ. ಅದೇ ದಿನ 3 ಗಂಟೆಗೆ ಕೌಂಟಿಂಗ್ ಕೂಡ ನಡೆಯಲಿದೆ. ಆದರೆ ಇದಕ್ಕೆ ಜೆಎ‌ನ್‌ಯು ಕಾಲೇಜಿನ ಮಾಜಿ ವಿದ್ಯಾರ್ಥಿನಿ ಹಾಗೂ ಹೋರಾಟಗಾರ್ತಿ ಶೆಹ್ಲಾ ರಷೀದ್ ವಿರೋಧ ವ್ಯಕ್ತಪಡಿಸಿದ್ದು, ಕಾಶ್ಮೀರದಲ್ಲಿ ಚುನಾವಣಾ ರಾಜಕೀಯ ತೊರೆಯುವುದಾಗಿ ಹೇಳಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಮಾಜಿ ಐಎಎಸ್ ಅಧಿಕಾರಿ ಶಾಹ್ ಫಸಲ್, ಮಾರ್ಚ್ ನಲ್ಲಿ ರಚಿಸಿದ್ದ ಪೀಪಲ್ಸ್ ಪಾರ್ಟಿಗೆ ಸೇರ್ಪಡೆಯಾಗಿದ್ದ ಶೆಹ್ಲಾ ರಷೀದ್, ಈಗ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಕಾಶ್ಮೀರದಲ್ಲಿ ಬ್ಲಾಕ್ ಡೆವಲಪ್ ಮೆಂಟ್ ಕೌನ್ಸಿಲ್ ಚುನಾವಣೆ ನಿಗದಿಪಡಿಸಿದೆ. ಆದರೆ ಕಾಶ್ಮೀರದಲ್ಲಿ 65 ದಿನಗಳಿಂದ ಜನತೆಗೆ ಸರಿಯಾಗಿ ರಕ್ಷಣೆ ನೀಡಲಾಗುತ್ತಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯಲಾಗಿದೆ. ಅಲ್ಲದೇ ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಬಿಂಬಿಸಲು ಕೇಂದ್ರ ಸರ್ಕಾರ ಚುನಾವಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ರಾಜಕೀಯಕ್ಕಾಗಿ ರಾಜಿ ಮಾಡಿಕೊಳ್ಳುವ ಸಂದಿಗ್ಥ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹೋರಾಟಗಾರ್ತಿಯಾಗಿ ಕೆಲಸ ಮುಂದುವರೆಸುವುದಾಗಿ ಶೆಹ್ಲಾ ತಿಳಿಸಿದ್ದಾರೆ. ಅಲ್ಲದೇ ಕಾಶ್ಮೀರದಲ್ಲಿ ರಾಜಕೀಯ ನಾಯಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಜನತೆ ಮುನ್ನೆಲೆಗೆ ಬರಲು ಭಯಪಡುತ್ತಿದ್ದಾರೆ. ಆರ್ಟಿಕಲ್ 370 ಮತ್ತು ವಿಭಜನೆ ಬಗ್ಗೆ ಮಾತನಾಡದಂತೆ ತಡೆಯಲಾಗಿದೆ. ಕೆಲ ಕಾಯಿದೆ ಮೂಲಕ ಜನತೆಯನ್ನು ನಿಯಂತ್ರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಇತ್ತ ಕಾಂಗ್ರೆಸ್ ಕೂಡ ಕಾಶ್ಮೀರದಲ್ಲಿ ನಡೆಯಲಿರುವ ಬಿಡಿಸಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದೆ. ಪ್ರದೇಶ್ ಕಾಂಗ್ರೆಸ್ ಕಮಿಟಿ ಮುಖ್ಯ ವಕ್ತಾರ ರವೀಂದ್ರ ಶರ್ಮಾ ಮಾತನಾಡಿ, ಸರ್ಕಾರ ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ಬಗ್ಗೆ ಕೇಳಿದಾಗಲೂ ಯಾವುದೇ ಸಹಕಾರ ನೀಡುತ್ತಿಲ್ಲ ಎಂದಿದ್ದಾರೆ. ಇನ್ನು ಕೆಲ ರಾಜಕೀಯ ನಾಯಕರನ್ನು ಗೃಹಬಂಧನದಿಂದ ಮುಕ್ತಗೊಳಿಸಿಲ್ಲ. ಪ್ರಭಾವಿ ನಾಯಕರ ಮೇಲೆ ನಿಷೇಧ ಹೇರಲಾಗಿದೆ ಹಾಗಾಗಿ ನಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಮಾಜಿ ಸಿಎಂ ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರ ಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿವೆ. ಆದರೂ ಸಹ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ರವೀಂದ್ರ ಹೇಳಿದ್ದು, ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...