Homeಮುಖಪುಟಕಾಶ್ಮೀರದಲ್ಲಿ ಕೇವಲ ತೋರಿಕೆಗಾಗಿ ಬಿಡಿಸಿ ಚುನಾವಣೆ: ಕಾಂಗ್ರೆಸ್, ಶೆಹ್ಲಾ ರಶೀದ್ ಚುನಾವಣಾ ಬಹಿಷ್ಕಾರ

ಕಾಶ್ಮೀರದಲ್ಲಿ ಕೇವಲ ತೋರಿಕೆಗಾಗಿ ಬಿಡಿಸಿ ಚುನಾವಣೆ: ಕಾಂಗ್ರೆಸ್, ಶೆಹ್ಲಾ ರಶೀದ್ ಚುನಾವಣಾ ಬಹಿಷ್ಕಾರ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಬೆಳಗ್ಗೆ 9ರಿಂದ ಸಾಯಂಕಾಲದವರೆಗೆ ಬ್ಲಾಕ್ ಡೆವಲಪ್ ಮೆಂಡ್ ಕೌನ್ಸಿಲ್ ಎಲೆಕ್ಷನ್ ನಡೆಯಲಿದೆ. ಅದೇ ದಿನ 3 ಗಂಟೆಗೆ ಕೌಂಟಿಂಗ್ ಕೂಡ ನಡೆಯಲಿದೆ. ಆದರೆ ಇದಕ್ಕೆ ಜೆಎ‌ನ್‌ಯು ಕಾಲೇಜಿನ ಮಾಜಿ ವಿದ್ಯಾರ್ಥಿನಿ ಹಾಗೂ ಹೋರಾಟಗಾರ್ತಿ ಶೆಹ್ಲಾ ರಷೀದ್ ವಿರೋಧ ವ್ಯಕ್ತಪಡಿಸಿದ್ದು, ಕಾಶ್ಮೀರದಲ್ಲಿ ಚುನಾವಣಾ ರಾಜಕೀಯ ತೊರೆಯುವುದಾಗಿ ಹೇಳಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಮಾಜಿ ಐಎಎಸ್ ಅಧಿಕಾರಿ ಶಾಹ್ ಫಸಲ್, ಮಾರ್ಚ್ ನಲ್ಲಿ ರಚಿಸಿದ್ದ ಪೀಪಲ್ಸ್ ಪಾರ್ಟಿಗೆ ಸೇರ್ಪಡೆಯಾಗಿದ್ದ ಶೆಹ್ಲಾ ರಷೀದ್, ಈಗ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಟೋಬರ್ 24ರಂದು ಕಾಶ್ಮೀರದಲ್ಲಿ ಬ್ಲಾಕ್ ಡೆವಲಪ್ ಮೆಂಟ್ ಕೌನ್ಸಿಲ್ ಚುನಾವಣೆ ನಿಗದಿಪಡಿಸಿದೆ. ಆದರೆ ಕಾಶ್ಮೀರದಲ್ಲಿ 65 ದಿನಗಳಿಂದ ಜನತೆಗೆ ಸರಿಯಾಗಿ ರಕ್ಷಣೆ ನೀಡಲಾಗುತ್ತಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯಲಾಗಿದೆ. ಅಲ್ಲದೇ ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಬಿಂಬಿಸಲು ಕೇಂದ್ರ ಸರ್ಕಾರ ಚುನಾವಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಶ್ಮೀರದಲ್ಲಿ ರಾಜಕೀಯಕ್ಕಾಗಿ ರಾಜಿ ಮಾಡಿಕೊಳ್ಳುವ ಸಂದಿಗ್ಥ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಹೋರಾಟಗಾರ್ತಿಯಾಗಿ ಕೆಲಸ ಮುಂದುವರೆಸುವುದಾಗಿ ಶೆಹ್ಲಾ ತಿಳಿಸಿದ್ದಾರೆ. ಅಲ್ಲದೇ ಕಾಶ್ಮೀರದಲ್ಲಿ ರಾಜಕೀಯ ನಾಯಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಜನತೆ ಮುನ್ನೆಲೆಗೆ ಬರಲು ಭಯಪಡುತ್ತಿದ್ದಾರೆ. ಆರ್ಟಿಕಲ್ 370 ಮತ್ತು ವಿಭಜನೆ ಬಗ್ಗೆ ಮಾತನಾಡದಂತೆ ತಡೆಯಲಾಗಿದೆ. ಕೆಲ ಕಾಯಿದೆ ಮೂಲಕ ಜನತೆಯನ್ನು ನಿಯಂತ್ರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಇತ್ತ ಕಾಂಗ್ರೆಸ್ ಕೂಡ ಕಾಶ್ಮೀರದಲ್ಲಿ ನಡೆಯಲಿರುವ ಬಿಡಿಸಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಹೇಳಿದೆ. ಪ್ರದೇಶ್ ಕಾಂಗ್ರೆಸ್ ಕಮಿಟಿ ಮುಖ್ಯ ವಕ್ತಾರ ರವೀಂದ್ರ ಶರ್ಮಾ ಮಾತನಾಡಿ, ಸರ್ಕಾರ ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಚಕಾರವೆತ್ತುತ್ತಿಲ್ಲ. ಈ ಬಗ್ಗೆ ಕೇಳಿದಾಗಲೂ ಯಾವುದೇ ಸಹಕಾರ ನೀಡುತ್ತಿಲ್ಲ ಎಂದಿದ್ದಾರೆ. ಇನ್ನು ಕೆಲ ರಾಜಕೀಯ ನಾಯಕರನ್ನು ಗೃಹಬಂಧನದಿಂದ ಮುಕ್ತಗೊಳಿಸಿಲ್ಲ. ಪ್ರಭಾವಿ ನಾಯಕರ ಮೇಲೆ ನಿಷೇಧ ಹೇರಲಾಗಿದೆ ಹಾಗಾಗಿ ನಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಮಾಜಿ ಸಿಎಂ ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರ ಪಕ್ಷಗಳು ಬಿಡಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿವೆ. ಆದರೂ ಸಹ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ರವೀಂದ್ರ ಹೇಳಿದ್ದು, ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...