Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...