Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...