Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...