Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...