Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...