Homeಕರ್ನಾಟಕಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕುಳಿತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಎಂದು ಅವರು ಕೇಳಿದರು.

- Advertisement -
- Advertisement -

ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್, ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಅವರು ಶನಿವಾರ(ಇಂದು) ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆಯುತ್ತಿದ್ದ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರೈತರ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಮಹಾತ್ಮ ಗಾಂಧಿ ಹತ್ಯೆಯಾದ ದಿನವನ್ನು ನಾವು ಹುತಾತ್ಮ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮ ಗಾಂಧಿ ಯಾರ ವಿರುದ್ಧ ಹೋರಾಟ ಮಾಡಿದರೋ ಅವರ ಕೈಯಿಂದ ಹತ್ಯೆಯಾಗಲಿಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಗಾಂಧೀಜಿಯನ್ನು ಬ್ರಿಟಿಷರು ಕೊಂದಿಲ್ಲ. ಅವರನ್ನು ಕೊಂದಿದ್ದು ಮತಾಂಧ ನಾಥೂರಾಮ್ ಗೂಡ್ಸೆ ಮತ್ತು ಅವರ ಸ್ನೇಹಿತರು” ಎಂದು ಹೇಳಿದರು.

ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

“ಗಾಂಧೀಜಿ ಸ್ವಾತಂತ್ರ್ಯ ಚಳುವಳಿ ಜೊತೆಗೆ ಕಾರ್ಮಿಕ, ವಿದ್ಯಾರ್ಥಿ, ರೈತರ ಪರವಾಗಿಯು ಹೋರಾಟ ಮಾಡಿದ್ದರು. ಸ್ವಾತಂತ್ಯ್ರ ಹೋರಾಟದಲ್ಲಿ ಭಾಗಿಯಾದ ಯಾರಾದರು ಒಬ್ಬರು ಆರೆಸ್ಸೆಸ್ಸ್‌‌ನಲ್ಲಿ ಇದ್ದಾರೆಯೆ? ಬಿಜೆಪಿ ಸಂವಿಧಾನ ರಚನೆ ನಂತರ ಹುಟ್ಟಿದ ಪಕ್ಷವಾಗಿದೆ. ಇವರು ನಮಗೆ ದೇಶ ಭಕ್ತಿ ಹೇಳಿ‌ಕೊಡ್ತಾರೆ. ಕೋಮು ಗಲಭೆಯನ್ನು ಸೃಷ್ಟಿಸೋದು ದೇಶ ಭಕ್ತಿಯೆ? ಜಾತಿ ಜಾತಿಗಳ ನಡುವೆ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವುದು ದೇಶ ಭಕ್ತಿಯೆ? ಇವರು ಬಂದು ನಮಗೆ ದೇಶ ಭಕ್ತಿ ಹೇಳಿಕೊಡಬೇಕೆ?” ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ಲೈವ್ ವಿಡಿಯೋ ನೋಡಿ

“ಎಲ್ಲ ಜಾತಿ, ಧರ್ಮಗಳಿರುವ ದೇಶವಿದು. ಬಿಜೆಪಿ ಹಿಂದುತ್ವದ ಹೆಸರಿನಲ್ಲಿ ದೇಶವನ್ನ ಒಡೆಯುತ್ತಿದೆ. ಮಹಾತ್ಮ ಗಾಂಧೀಜಿ ಹಿಂದೂ ಆಗಿರಲಿಲ್ಲವೆ? ಇಲ್ಲಿ ಕೂತಿರುವ ರೈತ ಮುಖಂಡರು ಹಿಂದೂಗಳಲ್ಲವೆ? ಬಿಜೆಪಿಯವರು ಗೋಮಾತೆ ಎಂದು ಹೇಳುತ್ತಾ ಇಲ್ಲಿ‌ ಬೀಫ್ ತಿನ್ನಬಾರದೆನ್ನುತ್ತಾರೆ. ಆದರೆ ನ್ಯೂಜಿಲೆಂಡ್ ಆಸ್ಟ್ರೇಲಿಯಾದಿಂದ ಬರುವ ಬೀಫ್ ತಿನ್ನಿ ಎನ್ನುತ್ತಾರೆ. ಅದು ಗೋಮಾತೆ ಅಲ್ಲವೆ? ಗೋವಾ, ಕೇರಳದ್ದು ಗೋಮಾತೆಯಲ್ಲವೆ?. ಗೋರಕ್ಷಣಾ ಕಾಯ್ದೆ ನೆಹರೂ ಕಾಲದಲ್ಲೇ ಇತ್ತು. ವಯಸ್ಸಾದ ರಾಸುಗಳನ್ನು ಮಾರಬಹುದೆಂದು ಆಗಲೆ ಕಾನೂನು ತರಲಾಗಿತ್ತು. ಬಿಜೆಪಿಯ ಈ ಕಾನೂನಿನಿಂದ ಹೋರಿ ಕರುಗಳನ್ನು ರೈತರು ಏನು ಮಾಡಬೇಕು? ರೈತರನ್ನು ಹಾಳು ಮಾಡುವ ಕಾನೂನನ್ನು ತಂದಿದ್ದಾರೆ. ಇದರಿಂದ ನಮ್ಮ ರೈತರು ನಿರುದ್ಯೋಗಿಗಳಾಗುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ರೈತರ ಪ್ರತಿಭಟನೆ: ಯುಪಿ ಸರ್ಕಾರದ ಕ್ರಮಕ್ಕೆ ಖಂಡನೆ – ಬಿಜೆಪಿ ನಾಯಕರಲ್ಲಿ ಅಸಮಾಧಾನ

“ಮೋದಿ ಕಾರ್ಪೊರೇಟ್ ಕಂಪನಿಯವರು ಏನು ಹೇಳುತ್ತಾರೋ ಅದನ್ನೆ ಕಾರ್ಯರೂಪಕ್ಕೆ ತರುತ್ತಾರೆ. ಈ ಬಾರಿ ಮೈನಸ್ ಜಿಡಿಪಿಯಿದೆ. ಆದರೆ ಅವರು ಮುಂದಿನ‌ ವರ್ಷಕ್ಕೆ ಶೇ. ‌11ಕ್ಕೆ ಹೋಗುತ್ತದೆ ಎಂದು ಲೆಕ್ಕ ಹಾಕುತ್ತಿದ್ದಾರೆ. ಇವರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಜಿಡಿಪಿ ಮನಮೋಹನ್ ಸಿಂಗ್ ಕಾಲದಲ್ಲೇ 11% ಆಗಿತ್ತು. ಬಿಜೆಪಿಯಿಂದಾಗಿ ಅದು 4%ಕ್ಕೆ ಇಳಿದಿದೆ” ಎಂದು ಹೇಳಿದರು.

“ಕೊರೊನಾ ಸಮಯದಲ್ಲಿ ದೀಪ‌ ಹಚ್ಚಿ, ಚಪ್ಪಾಳೆ ತಟ್ಟಿ, ಜಾಗಟೆ ಬಾರಿಸಿ ಎಂದು ಹೇಳಿರುವ ಪ್ರಧಾನಿಯನ್ನು ಜಗತ್ತಿನಲ್ಲಿ ಎಲ್ಲಾದರು ನೋಡಿದ್ದೀರಾ?. ಜನರನ್ನು ಹೇಗೆ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ನೋಡಿ, ಇವರ ಮಾತು ಕೇಳಿ ಎಲ್ಲರೂ ದೀಪ ಹಚ್ಚಿದರು. ನಮ್ಮ ಪಕ್ಷದ ಕೆಲವರು ದೀಪ ಹಚ್ಚಿದರು. ನಾನು ಅದನ್ನೆಲ್ಲಾ ಮಾಡುವುದಿಲ್ಲ, ಮೌಢ್ಯ ಎಂದು ಅವತ್ತೆ ಹೇಳಿದ್ದೆ. ಪ್ರಧಾನಿ ಎಂತಾ ಸಲಹೆ ಕೊಟ್ಟಿದ್ದಾರೆ ನೋಡಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ಕಾರ್ಯಕ್ರಮದ ನಡುವೆ ತೊಂದರೆ ಕೊಡಲು ಬಂದ ಸುವರ್ಣ ನ್ಯೂಸ್ ಚಾನೆಲ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಹೋರಾಟಗಾರರು- ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...