Homeಕರ್ನಾಟಕಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ

- Advertisement -
- Advertisement -

ತುಮಕೂರು ನಗರದ ಕನ್ನಡ ಭವನದಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿರುವ ಎರಡು ದಿನಗಳ ರಾಜ್ಯಮಟ್ಟದ ಯುವ ಬರಹಗಾರರ ಕಾರ್ಯಾಗಾರಕ್ಕೆ ಪ್ರಸಿದ್ಧ ಮಲೆಯಾಳಿ ಸಾಹಿತಿ ಹಾಗೂ ಸಿನೆಮಾ ವಿಮರ್ಶಕ ಜಿ.ಪಿ.ರಾಮಚಂದ್ರನ್ ಚಾಲನೆ ನೀಡಿದರು.

ಅವರು ಪ್ರಗತಿಪರ ಸಾಹಿತಿಗಳ ಮುಂದಿರುವ ಸವಾಲುಗಳು, ಜಾಗತೀಕರಣ, ಉದಾರೀಕರಣ, ಖಾಸಗೀಕರಣ, ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸದ ಕುರಿತು ಮಾತನಾಡಿ ಗಮನಸೆಳೆದರು.

ದೇಶದಲ್ಲಿ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ. ಸತ್ಯವನ್ನು ಹೇಳಲು ಕಷ್ಟವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಸವಾಲುಗಳು ಎದುರಾಗಿವೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಆಳ್ವಕೆ ಮಾಡುತ್ತಿದ್ದು, ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರ ತಮ್ಮ ಶತ್ರುಗಳು ಯಾರು ಎಂಬುದನ್ನು ಗುರುತಿಸಿಕೊಂಡಿದ್ದಾರೆ. ಪ್ರಗತಿಪರರ ಮೇಲೆ ಯುದ್ದವನ್ನು ಆರಂಭಿಸಿದ್ದಾರೆ. ಸರ್ಕಾರದ ನೀತಿಗಳನ್ನು ಪ್ರಶ್ನಿಸುವವರು ಮತ್ತು ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ತೀರ್ಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಗತಿಪರ ಬರಹಗಾರರು ಪರಂಪರೆಯನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಲೇ ಬರುತ್ತಿದ್ದಾರೆ. ಅವರು ಪರಂಪರೆಯನ್ನು ತಿರಸ್ಕರಿಸಿಲ್ಲ. ಸತ್ಯವನ್ನು ಹೇಳಿದ್ದಾರೆ. ಚಾರ್ವಾಕನನ್ನು ಕೊಂದುಹಾಕಿದರು. ವಿಚಾರ ಭಿನ್ನತೆ ಕಾರಣಕ್ಕಾಗಿ ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ, ಹಿರಿಯ ಪತ್ರಕರ್ತೆ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಿದರು. ಸಂಘಪರಿವಾರ ಮತ್ತು ಬಿಜೆಪಿ ತನಗೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದನ್ನು ಎದುರಿಸಲು ನಾವು ಒಗ್ಗೂಡಬೇಕಾಗಿದೆ ಎಂದರು.

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು. ಆ ಶಕ್ತಿಗಳು ನಮ್ಮ ಸಂವಿಧಾನವನ್ನು ಒಪ್ಪಿಕೊಳ್ಳುವುದಿಲ್ಲ. ಅವರಿಗೆ ಮನುಸ್ಮೃತಿ ಸಂವಿಧಾನ. ಅದಕ್ಕಾಗಿಯೇ ದೇಶದಲ್ಲಿ ಗುಂಪುಹತ್ಯೆ, ಹಲ್ಲೆ ಮೊದಲಾದವುಗಳು ನಡೆಯುತ್ತಿವೆ. ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ. ಆದರೆ ದೇಶದಲ್ಲಿ ಏನಾಗುತ್ತಿದೆ. ಇತ್ತೀಚಿನ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಯುವ ಸಮುದಾಯವನ್ನು ದೇಶದ್ರೋಹಿಗಳೆಂದು ಕರೆಯುತ್ತಿದ್ದಾರೆ. ಆದರೂ ಯುವಜನತೆ ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿದಿರುವುದು ಶ್ಲಾಘನೀಯ ಎಂದರು.

ನಾವು ಕಠಿಣ ಪರಿಸ್ಥಿಯಲ್ಲಿ ಜೀವಿಸುತ್ತಿದ್ದೇವೆ. ನಮ್ಮ ಮುಂದೆ ಹಲವು ಸವಾಲುಗಳು ನರ್ತನ ಮಾಡುತ್ತಿವೆ. ಫ್ಯಾಸಿಸ್ಟ್ ಶಕ್ತಿಗಳು ನಮ್ಮಿಂದ ನೆಮ್ಮದಿಯನ್ನು ಕಿತ್ತುಕೊಳ್ಳುತ್ತಿವೆ. ದೇಶವನ್ನು ಕಸಿದುಕೊಂಡಿವೆ. ಸ್ವಾತಂತ್ರ್ಯ ಹರಣವಾಗುತ್ತಿದೆ. ಮೌಲ್ಯಗಳಿಗೆ ಧಕ್ಕೆ ಒದಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಪ್ರಗತಿಪರ ಸಾಹಿತಿಗಳ ವೇದಿಕೆ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲದರಲ್ಲೂ ರಾಜಕೀಯವಿದೆ. ರಾಜಕೀಯವಿಲ್ಲದ ಕ್ಷೇತ್ರವೇ ಇಲ್ಲ. ಬರಹಗಾರರು ಯಾವುದಾದರೂ ಒಂದು ಕಡೆ ಗುರುತಿಸಿಕೊಳ್ಳಲೇಬೇಕು. ಅದು ಬಲಪಂಥೀಯವಾಗಿರಬಹುದು ಇಲ್ಲವೇ ಎಡ ಪಂಥೀಯವಾಗಿರಬಹುದು. ಇದರಿಂದ ಯಾರೂ ಹೊರತಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಪ್ರಗತಿಪರ ಬರಹಗಾರರು ಭಾರತದ ಸಂವಿಧಾನ ಉಳಿಸಲು, ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತಷ್ಟು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಜಿ.ಎಂ/ಶ್ರೀನಿವಾಸಯ್ಯ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅತಿಥಿಗಳಾಗಿ ಪ್ರೊ. ಬರಗೂರು ರಾಮಚಂದ್ರಪ್ಪ, ಸೋಮಶೇಖರ್, ಎಸ್. ರಮೇಶ್ ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ಆರು ಗೋಷ್ಠಿಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...