Homeಕರ್ನಾಟಕಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ

- Advertisement -
- Advertisement -

ತುಮಕೂರು ನಗರದ ಕನ್ನಡ ಭವನದಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿರುವ ಎರಡು ದಿನಗಳ ರಾಜ್ಯಮಟ್ಟದ ಯುವ ಬರಹಗಾರರ ಕಾರ್ಯಾಗಾರಕ್ಕೆ ಪ್ರಸಿದ್ಧ ಮಲೆಯಾಳಿ ಸಾಹಿತಿ ಹಾಗೂ ಸಿನೆಮಾ ವಿಮರ್ಶಕ ಜಿ.ಪಿ.ರಾಮಚಂದ್ರನ್ ಚಾಲನೆ ನೀಡಿದರು.

ಅವರು ಪ್ರಗತಿಪರ ಸಾಹಿತಿಗಳ ಮುಂದಿರುವ ಸವಾಲುಗಳು, ಜಾಗತೀಕರಣ, ಉದಾರೀಕರಣ, ಖಾಸಗೀಕರಣ, ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸದ ಕುರಿತು ಮಾತನಾಡಿ ಗಮನಸೆಳೆದರು.

ದೇಶದಲ್ಲಿ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ. ಸತ್ಯವನ್ನು ಹೇಳಲು ಕಷ್ಟವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಸವಾಲುಗಳು ಎದುರಾಗಿವೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಆಳ್ವಕೆ ಮಾಡುತ್ತಿದ್ದು, ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರ ತಮ್ಮ ಶತ್ರುಗಳು ಯಾರು ಎಂಬುದನ್ನು ಗುರುತಿಸಿಕೊಂಡಿದ್ದಾರೆ. ಪ್ರಗತಿಪರರ ಮೇಲೆ ಯುದ್ದವನ್ನು ಆರಂಭಿಸಿದ್ದಾರೆ. ಸರ್ಕಾರದ ನೀತಿಗಳನ್ನು ಪ್ರಶ್ನಿಸುವವರು ಮತ್ತು ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ತೀರ್ಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಗತಿಪರ ಬರಹಗಾರರು ಪರಂಪರೆಯನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಲೇ ಬರುತ್ತಿದ್ದಾರೆ. ಅವರು ಪರಂಪರೆಯನ್ನು ತಿರಸ್ಕರಿಸಿಲ್ಲ. ಸತ್ಯವನ್ನು ಹೇಳಿದ್ದಾರೆ. ಚಾರ್ವಾಕನನ್ನು ಕೊಂದುಹಾಕಿದರು. ವಿಚಾರ ಭಿನ್ನತೆ ಕಾರಣಕ್ಕಾಗಿ ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ, ಹಿರಿಯ ಪತ್ರಕರ್ತೆ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಿದರು. ಸಂಘಪರಿವಾರ ಮತ್ತು ಬಿಜೆಪಿ ತನಗೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದನ್ನು ಎದುರಿಸಲು ನಾವು ಒಗ್ಗೂಡಬೇಕಾಗಿದೆ ಎಂದರು.

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು. ಆ ಶಕ್ತಿಗಳು ನಮ್ಮ ಸಂವಿಧಾನವನ್ನು ಒಪ್ಪಿಕೊಳ್ಳುವುದಿಲ್ಲ. ಅವರಿಗೆ ಮನುಸ್ಮೃತಿ ಸಂವಿಧಾನ. ಅದಕ್ಕಾಗಿಯೇ ದೇಶದಲ್ಲಿ ಗುಂಪುಹತ್ಯೆ, ಹಲ್ಲೆ ಮೊದಲಾದವುಗಳು ನಡೆಯುತ್ತಿವೆ. ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ. ಆದರೆ ದೇಶದಲ್ಲಿ ಏನಾಗುತ್ತಿದೆ. ಇತ್ತೀಚಿನ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಯುವ ಸಮುದಾಯವನ್ನು ದೇಶದ್ರೋಹಿಗಳೆಂದು ಕರೆಯುತ್ತಿದ್ದಾರೆ. ಆದರೂ ಯುವಜನತೆ ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿದಿರುವುದು ಶ್ಲಾಘನೀಯ ಎಂದರು.

ನಾವು ಕಠಿಣ ಪರಿಸ್ಥಿಯಲ್ಲಿ ಜೀವಿಸುತ್ತಿದ್ದೇವೆ. ನಮ್ಮ ಮುಂದೆ ಹಲವು ಸವಾಲುಗಳು ನರ್ತನ ಮಾಡುತ್ತಿವೆ. ಫ್ಯಾಸಿಸ್ಟ್ ಶಕ್ತಿಗಳು ನಮ್ಮಿಂದ ನೆಮ್ಮದಿಯನ್ನು ಕಿತ್ತುಕೊಳ್ಳುತ್ತಿವೆ. ದೇಶವನ್ನು ಕಸಿದುಕೊಂಡಿವೆ. ಸ್ವಾತಂತ್ರ್ಯ ಹರಣವಾಗುತ್ತಿದೆ. ಮೌಲ್ಯಗಳಿಗೆ ಧಕ್ಕೆ ಒದಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಪ್ರಗತಿಪರ ಸಾಹಿತಿಗಳ ವೇದಿಕೆ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲದರಲ್ಲೂ ರಾಜಕೀಯವಿದೆ. ರಾಜಕೀಯವಿಲ್ಲದ ಕ್ಷೇತ್ರವೇ ಇಲ್ಲ. ಬರಹಗಾರರು ಯಾವುದಾದರೂ ಒಂದು ಕಡೆ ಗುರುತಿಸಿಕೊಳ್ಳಲೇಬೇಕು. ಅದು ಬಲಪಂಥೀಯವಾಗಿರಬಹುದು ಇಲ್ಲವೇ ಎಡ ಪಂಥೀಯವಾಗಿರಬಹುದು. ಇದರಿಂದ ಯಾರೂ ಹೊರತಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಪ್ರಗತಿಪರ ಬರಹಗಾರರು ಭಾರತದ ಸಂವಿಧಾನ ಉಳಿಸಲು, ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತಷ್ಟು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಜಿ.ಎಂ/ಶ್ರೀನಿವಾಸಯ್ಯ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅತಿಥಿಗಳಾಗಿ ಪ್ರೊ. ಬರಗೂರು ರಾಮಚಂದ್ರಪ್ಪ, ಸೋಮಶೇಖರ್, ಎಸ್. ರಮೇಶ್ ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ಆರು ಗೋಷ್ಠಿಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...