Homeಕರ್ನಾಟಕಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ

- Advertisement -
- Advertisement -

ತುಮಕೂರು ನಗರದ ಕನ್ನಡ ಭವನದಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿರುವ ಎರಡು ದಿನಗಳ ರಾಜ್ಯಮಟ್ಟದ ಯುವ ಬರಹಗಾರರ ಕಾರ್ಯಾಗಾರಕ್ಕೆ ಪ್ರಸಿದ್ಧ ಮಲೆಯಾಳಿ ಸಾಹಿತಿ ಹಾಗೂ ಸಿನೆಮಾ ವಿಮರ್ಶಕ ಜಿ.ಪಿ.ರಾಮಚಂದ್ರನ್ ಚಾಲನೆ ನೀಡಿದರು.

ಅವರು ಪ್ರಗತಿಪರ ಸಾಹಿತಿಗಳ ಮುಂದಿರುವ ಸವಾಲುಗಳು, ಜಾಗತೀಕರಣ, ಉದಾರೀಕರಣ, ಖಾಸಗೀಕರಣ, ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸದ ಕುರಿತು ಮಾತನಾಡಿ ಗಮನಸೆಳೆದರು.

ದೇಶದಲ್ಲಿ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ. ಸತ್ಯವನ್ನು ಹೇಳಲು ಕಷ್ಟವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಸವಾಲುಗಳು ಎದುರಾಗಿವೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಆಳ್ವಕೆ ಮಾಡುತ್ತಿದ್ದು, ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರ ತಮ್ಮ ಶತ್ರುಗಳು ಯಾರು ಎಂಬುದನ್ನು ಗುರುತಿಸಿಕೊಂಡಿದ್ದಾರೆ. ಪ್ರಗತಿಪರರ ಮೇಲೆ ಯುದ್ದವನ್ನು ಆರಂಭಿಸಿದ್ದಾರೆ. ಸರ್ಕಾರದ ನೀತಿಗಳನ್ನು ಪ್ರಶ್ನಿಸುವವರು ಮತ್ತು ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ತೀರ್ಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಗತಿಪರ ಬರಹಗಾರರು ಪರಂಪರೆಯನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಲೇ ಬರುತ್ತಿದ್ದಾರೆ. ಅವರು ಪರಂಪರೆಯನ್ನು ತಿರಸ್ಕರಿಸಿಲ್ಲ. ಸತ್ಯವನ್ನು ಹೇಳಿದ್ದಾರೆ. ಚಾರ್ವಾಕನನ್ನು ಕೊಂದುಹಾಕಿದರು. ವಿಚಾರ ಭಿನ್ನತೆ ಕಾರಣಕ್ಕಾಗಿ ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ, ಹಿರಿಯ ಪತ್ರಕರ್ತೆ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಿದರು. ಸಂಘಪರಿವಾರ ಮತ್ತು ಬಿಜೆಪಿ ತನಗೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದನ್ನು ಎದುರಿಸಲು ನಾವು ಒಗ್ಗೂಡಬೇಕಾಗಿದೆ ಎಂದರು.

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು. ಆ ಶಕ್ತಿಗಳು ನಮ್ಮ ಸಂವಿಧಾನವನ್ನು ಒಪ್ಪಿಕೊಳ್ಳುವುದಿಲ್ಲ. ಅವರಿಗೆ ಮನುಸ್ಮೃತಿ ಸಂವಿಧಾನ. ಅದಕ್ಕಾಗಿಯೇ ದೇಶದಲ್ಲಿ ಗುಂಪುಹತ್ಯೆ, ಹಲ್ಲೆ ಮೊದಲಾದವುಗಳು ನಡೆಯುತ್ತಿವೆ. ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ. ಆದರೆ ದೇಶದಲ್ಲಿ ಏನಾಗುತ್ತಿದೆ. ಇತ್ತೀಚಿನ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಯುವ ಸಮುದಾಯವನ್ನು ದೇಶದ್ರೋಹಿಗಳೆಂದು ಕರೆಯುತ್ತಿದ್ದಾರೆ. ಆದರೂ ಯುವಜನತೆ ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿದಿರುವುದು ಶ್ಲಾಘನೀಯ ಎಂದರು.

ನಾವು ಕಠಿಣ ಪರಿಸ್ಥಿಯಲ್ಲಿ ಜೀವಿಸುತ್ತಿದ್ದೇವೆ. ನಮ್ಮ ಮುಂದೆ ಹಲವು ಸವಾಲುಗಳು ನರ್ತನ ಮಾಡುತ್ತಿವೆ. ಫ್ಯಾಸಿಸ್ಟ್ ಶಕ್ತಿಗಳು ನಮ್ಮಿಂದ ನೆಮ್ಮದಿಯನ್ನು ಕಿತ್ತುಕೊಳ್ಳುತ್ತಿವೆ. ದೇಶವನ್ನು ಕಸಿದುಕೊಂಡಿವೆ. ಸ್ವಾತಂತ್ರ್ಯ ಹರಣವಾಗುತ್ತಿದೆ. ಮೌಲ್ಯಗಳಿಗೆ ಧಕ್ಕೆ ಒದಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಪ್ರಗತಿಪರ ಸಾಹಿತಿಗಳ ವೇದಿಕೆ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲದರಲ್ಲೂ ರಾಜಕೀಯವಿದೆ. ರಾಜಕೀಯವಿಲ್ಲದ ಕ್ಷೇತ್ರವೇ ಇಲ್ಲ. ಬರಹಗಾರರು ಯಾವುದಾದರೂ ಒಂದು ಕಡೆ ಗುರುತಿಸಿಕೊಳ್ಳಲೇಬೇಕು. ಅದು ಬಲಪಂಥೀಯವಾಗಿರಬಹುದು ಇಲ್ಲವೇ ಎಡ ಪಂಥೀಯವಾಗಿರಬಹುದು. ಇದರಿಂದ ಯಾರೂ ಹೊರತಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಪ್ರಗತಿಪರ ಬರಹಗಾರರು ಭಾರತದ ಸಂವಿಧಾನ ಉಳಿಸಲು, ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತಷ್ಟು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಜಿ.ಎಂ/ಶ್ರೀನಿವಾಸಯ್ಯ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅತಿಥಿಗಳಾಗಿ ಪ್ರೊ. ಬರಗೂರು ರಾಮಚಂದ್ರಪ್ಪ, ಸೋಮಶೇಖರ್, ಎಸ್. ರಮೇಶ್ ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ಆರು ಗೋಷ್ಠಿಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...