Homeಕರ್ನಾಟಕಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು: ಬಂಡಾಯ ಸಾಹಿತ್ಯ ಕಾರ್ಯಗಾರದಲ್ಲಿ ಜಿ.ಪಿ ರಾಮಚಂದ್ರನ್‌..

ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ

- Advertisement -
- Advertisement -

ತುಮಕೂರು ನಗರದ ಕನ್ನಡ ಭವನದಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿರುವ ಎರಡು ದಿನಗಳ ರಾಜ್ಯಮಟ್ಟದ ಯುವ ಬರಹಗಾರರ ಕಾರ್ಯಾಗಾರಕ್ಕೆ ಪ್ರಸಿದ್ಧ ಮಲೆಯಾಳಿ ಸಾಹಿತಿ ಹಾಗೂ ಸಿನೆಮಾ ವಿಮರ್ಶಕ ಜಿ.ಪಿ.ರಾಮಚಂದ್ರನ್ ಚಾಲನೆ ನೀಡಿದರು.

ಅವರು ಪ್ರಗತಿಪರ ಸಾಹಿತಿಗಳ ಮುಂದಿರುವ ಸವಾಲುಗಳು, ಜಾಗತೀಕರಣ, ಉದಾರೀಕರಣ, ಖಾಸಗೀಕರಣ, ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸದ ಕುರಿತು ಮಾತನಾಡಿ ಗಮನಸೆಳೆದರು.

ದೇಶದಲ್ಲಿ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದೆ. ಸತ್ಯವನ್ನು ಹೇಳಲು ಕಷ್ಟವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಸವಾಲುಗಳು ಎದುರಾಗಿವೆ. ಫ್ಯಾಸಿಸ್ಟ್ ಶಕ್ತಿಗಳು ದೇಶವನ್ನು ಆಳ್ವಕೆ ಮಾಡುತ್ತಿದ್ದು, ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರ ತಮ್ಮ ಶತ್ರುಗಳು ಯಾರು ಎಂಬುದನ್ನು ಗುರುತಿಸಿಕೊಂಡಿದ್ದಾರೆ. ಪ್ರಗತಿಪರರ ಮೇಲೆ ಯುದ್ದವನ್ನು ಆರಂಭಿಸಿದ್ದಾರೆ. ಸರ್ಕಾರದ ನೀತಿಗಳನ್ನು ಪ್ರಶ್ನಿಸುವವರು ಮತ್ತು ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ತೀರ್ಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಗತಿಪರ ಬರಹಗಾರರು ಪರಂಪರೆಯನ್ನು ಎತ್ತಿಹಿಡಿಯುವ ಕೆಲಸ ಮಾಡುತ್ತಲೇ ಬರುತ್ತಿದ್ದಾರೆ. ಅವರು ಪರಂಪರೆಯನ್ನು ತಿರಸ್ಕರಿಸಿಲ್ಲ. ಸತ್ಯವನ್ನು ಹೇಳಿದ್ದಾರೆ. ಚಾರ್ವಾಕನನ್ನು ಕೊಂದುಹಾಕಿದರು. ವಿಚಾರ ಭಿನ್ನತೆ ಕಾರಣಕ್ಕಾಗಿ ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ, ಹಿರಿಯ ಪತ್ರಕರ್ತೆ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡಿದರು. ಸಂಘಪರಿವಾರ ಮತ್ತು ಬಿಜೆಪಿ ತನಗೆ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದನ್ನು ಎದುರಿಸಲು ನಾವು ಒಗ್ಗೂಡಬೇಕಾಗಿದೆ ಎಂದರು.

ಫ್ಯಾಸಿಸ್ಟ್ ಶಕ್ತಿಗಳು ವೈವಿಧ್ಯತೆಯನ್ನು ಸಹಿಸಲಾರವು. ಆ ಶಕ್ತಿಗಳು ನಮ್ಮ ಸಂವಿಧಾನವನ್ನು ಒಪ್ಪಿಕೊಳ್ಳುವುದಿಲ್ಲ. ಅವರಿಗೆ ಮನುಸ್ಮೃತಿ ಸಂವಿಧಾನ. ಅದಕ್ಕಾಗಿಯೇ ದೇಶದಲ್ಲಿ ಗುಂಪುಹತ್ಯೆ, ಹಲ್ಲೆ ಮೊದಲಾದವುಗಳು ನಡೆಯುತ್ತಿವೆ. ಹಿಂದಿ ಮಾತ್ರ ಶ್ರೇಷ್ಟವಲ್ಲ. ಕನ್ನಡ, ಮಲೆಯಾಳಂ, ತೆಲುಗು, ತಮಿಳು ಮೊದಲಾದ ಭಾಷೆಗಳು ಭಾರತದ ಸೌಂದರ್ಯವನ್ನು ಹೆಚ್ಚಿಸಿವೆ. ಆದರೆ ದೇಶದಲ್ಲಿ ಏನಾಗುತ್ತಿದೆ. ಇತ್ತೀಚಿನ ಸರ್ಕಾರದ ನೀತಿಗಳನ್ನು ಖಂಡಿಸಿ ಪ್ರತಿಭಟಿಸುತ್ತಿರುವ ಯುವ ಸಮುದಾಯವನ್ನು ದೇಶದ್ರೋಹಿಗಳೆಂದು ಕರೆಯುತ್ತಿದ್ದಾರೆ. ಆದರೂ ಯುವಜನತೆ ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿದಿರುವುದು ಶ್ಲಾಘನೀಯ ಎಂದರು.

ನಾವು ಕಠಿಣ ಪರಿಸ್ಥಿಯಲ್ಲಿ ಜೀವಿಸುತ್ತಿದ್ದೇವೆ. ನಮ್ಮ ಮುಂದೆ ಹಲವು ಸವಾಲುಗಳು ನರ್ತನ ಮಾಡುತ್ತಿವೆ. ಫ್ಯಾಸಿಸ್ಟ್ ಶಕ್ತಿಗಳು ನಮ್ಮಿಂದ ನೆಮ್ಮದಿಯನ್ನು ಕಿತ್ತುಕೊಳ್ಳುತ್ತಿವೆ. ದೇಶವನ್ನು ಕಸಿದುಕೊಂಡಿವೆ. ಸ್ವಾತಂತ್ರ್ಯ ಹರಣವಾಗುತ್ತಿದೆ. ಮೌಲ್ಯಗಳಿಗೆ ಧಕ್ಕೆ ಒದಗಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಪ್ರಗತಿಪರ ಸಾಹಿತಿಗಳ ವೇದಿಕೆ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಕಾರ್ಮಿಕ ಸಂಘಟನೆಗಳು ಜನವರಿ 8ರಂದು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಕಲೆ, ಸಾಹಿತ್ಯ, ಸಂಸ್ಕೃತಿ ಎಲ್ಲದರಲ್ಲೂ ರಾಜಕೀಯವಿದೆ. ರಾಜಕೀಯವಿಲ್ಲದ ಕ್ಷೇತ್ರವೇ ಇಲ್ಲ. ಬರಹಗಾರರು ಯಾವುದಾದರೂ ಒಂದು ಕಡೆ ಗುರುತಿಸಿಕೊಳ್ಳಲೇಬೇಕು. ಅದು ಬಲಪಂಥೀಯವಾಗಿರಬಹುದು ಇಲ್ಲವೇ ಎಡ ಪಂಥೀಯವಾಗಿರಬಹುದು. ಇದರಿಂದ ಯಾರೂ ಹೊರತಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಪ್ರಗತಿಪರ ಬರಹಗಾರರು ಭಾರತದ ಸಂವಿಧಾನ ಉಳಿಸಲು, ಪ್ರಜಾತಾಂತ್ರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತಷ್ಟು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಜಿ.ಎಂ/ಶ್ರೀನಿವಾಸಯ್ಯ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅತಿಥಿಗಳಾಗಿ ಪ್ರೊ. ಬರಗೂರು ರಾಮಚಂದ್ರಪ್ಪ, ಸೋಮಶೇಖರ್, ಎಸ್. ರಮೇಶ್ ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ವಿವಿಧ ವಿಷಯಗಳ ಕುರಿತು ಆರು ಗೋಷ್ಠಿಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...