Homeಮುಖಪುಟತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

ತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

- Advertisement -
- Advertisement -

ವಯನಾಡ್ ಜಿಲ್ಲೆಯ ಸುಲ್ತಾನ್ ಬಾಥೆರಿಯಲ್ಲಿ ಒಂಬತ್ತು ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ತನ್ನ ತರಗತಿಯೊಳಗೆ ಹಾವು ಕಚ್ಚಿದ ಪರಿಣಾಮ ಇಂದು ಮೃತಪಟ್ಟಿದ್ದಾಳೆ.

ಆಕೆಯ ಸಹಪಾಠಿಗಳ ಪ್ರಕಾರ, ಐದನೇ ತರಗತಿಯ ವಿದ್ಯಾರ್ಥಿನಿ ಎಸ್ ಶೆಹಲಾ ತನ್ನ ತರಗತಿಯಲ್ಲಿ ಕುಳಿತಿದ್ದಾಗ ವಿಷಕಾರಿ ಹಾವು ಅವಳ ಕಾಲಿಗೆ ಕಚ್ಚಿದೆ. ಕೂಡಲೇ ಆ ವಿದ್ಯಾರ್ಥಿನಿ ಅದನ್ನು ತರಗತಿ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಆದರೆ ಶಿಕ್ಷಕಿ ಅದು ಸುಳ್ಳಿರಬೇಕೆಂದು ತಲೆಕೆಡಿಸಿಕೊಳ್ಳದೇ ಪಾಠ ಮುಂದುವರೆಸಿದ್ದಾರೆ.

ಸ್ವಲ್ಪ ಸಮಯದಲ್ಲಿಯೇ ಆ ಹುಡುಗಿಯ ಕಾಲು ನೀಲಿ ಬಣ್ಣಕ್ಕೆ ತಿರುಗಿದಾಗ ಎಚ್ಚರಗೊಂಡು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿ ಸಾಧ್ಯವಿಲ್ಲವೆಂದು ನಂತರ  ಕೋಳಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡ್ಯೋಯ್ಯುವಾಗ ಸಾವನ್ನಪ್ಪಿದಾಳೆ.

ಇದರಿಂದ ಕೋಪಗೊಂಡ ಸಂಬಂಧಿಕರು ಮತ್ತು ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.  ಶಾಲೆಯ ಕಚೇರಿ ಕೊಠಡಿಯನ್ನು ಧ್ವಂಸಗೊಳಿಸಿದ್ದಲ್ಲದೇ ಆ ಶಿಕ್ಷಕಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಸುಲ್ತಾನ್ ಬಾಥೆ ಸರ್ಕಾರಿ ಪ್ರೌಢಶಾಲಾ ತರಗತಿಗಳಲ್ಲಿ ಸಾಕಷ್ಟು ಬಿರುಕುಗಳು ಮತ್ತು ರಂಧ್ರಗಳಿವೆ. ಹಾಗಾಗಿ ಸರೀಸೃಪಗಳು ಅವುಗಳಲ್ಲಿ ನುಸುಳುತ್ತವೆ ಎಂದು ಪೋಷಕರು ಮತ್ತು ಇತರರು ದೂರಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ದೂರುಗಳನ್ನು ನೀಡಿದ್ದರೂ ಸಹ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಕೆಯ ಸಹಪಾಠಿಗಳ ಪ್ರಕಾರ, ಅವರು ಮಧ್ಯಾಹ್ನ 3.10 ಕ್ಕೆ ಹಾವು ಕಚ್ಚುವಿಕೆಯ ಬಗ್ಗೆ ದೂರು ನೀಡಿದರು ಮತ್ತು ಸಂಜೆ 4 ಗಂಟೆಯ ನಂತರ ಆಕೆಯ ಪೋಷಕರು ಬರುವವರೆಗೂ ಶಾಲಾ ಅಧಿಕಾರಿಗಳು ಕಾಯುತ್ತಿದ್ದರು. ಶಾಲೆಯು ಸಕಾಲಿಕ ವೈದ್ಯಕೀಯ ಸಹಾಯವನ್ನು ನೀಡಿದ್ದರೆ ಆಕೆಯ ಜೀವ ಉಳಿಸಬಹುದಿತ್ತು ಎಂದು ಹೇಳಿದ್ದಾರೆ.

ಆದರೆ ಶಾಲೆಯ ಕಡೆಯಿಂದ ಯಾವುದೇ ವಿಳಂಬವಾಗಿಲ್ಲ ಎಂದು ಶಾಲೆಯ ಮುಖ್ಯ ಶಿಕ್ಷಕ ಪಿ ಮೋಹನನ್ ಹೇಳಿದ್ದಾರೆ ಮತ್ತು ಅವರು ಸಾವಿಗೆ ತಾಲ್ಲೂಕು ಆಸ್ಪತ್ರೆಯನ್ನು ದೂಷಿಸಿದ್ದಾರೆ. ಘಟನೆಯ ನಂತರ ಜಿಲ್ಲಾ ಶಿಕ್ಷಣಾಧಿಕಾರಿಯು ತರಗತಿ ಶಿಕ್ಷಕಿ ಸಾಜಿಲ್ ಸಿ.ವಿ ಅವರನ್ನು ಅಮಾನತುಗೊಳಿಸಿದ್ದಾರೆ. ಕೇರಳ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ಅವರು ವಿದ್ಯಾರ್ಥಿಯ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...