Homeಮುಖಪುಟತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

ತರಗತಿಯಲ್ಲಿದ್ದ ಬಾಲಕಿಗೆ ಕಚ್ಚಿದ ಹಾವು: ತಲೆಕೆಡಿಸಿಕೊಳ್ಳದ ಶಿಕ್ಷಕಿ, ಬಾಲಕಿಯ ಧಾರುಣ ಸಾವು

- Advertisement -
- Advertisement -

ವಯನಾಡ್ ಜಿಲ್ಲೆಯ ಸುಲ್ತಾನ್ ಬಾಥೆರಿಯಲ್ಲಿ ಒಂಬತ್ತು ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು ತನ್ನ ತರಗತಿಯೊಳಗೆ ಹಾವು ಕಚ್ಚಿದ ಪರಿಣಾಮ ಇಂದು ಮೃತಪಟ್ಟಿದ್ದಾಳೆ.

ಆಕೆಯ ಸಹಪಾಠಿಗಳ ಪ್ರಕಾರ, ಐದನೇ ತರಗತಿಯ ವಿದ್ಯಾರ್ಥಿನಿ ಎಸ್ ಶೆಹಲಾ ತನ್ನ ತರಗತಿಯಲ್ಲಿ ಕುಳಿತಿದ್ದಾಗ ವಿಷಕಾರಿ ಹಾವು ಅವಳ ಕಾಲಿಗೆ ಕಚ್ಚಿದೆ. ಕೂಡಲೇ ಆ ವಿದ್ಯಾರ್ಥಿನಿ ಅದನ್ನು ತರಗತಿ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಆದರೆ ಶಿಕ್ಷಕಿ ಅದು ಸುಳ್ಳಿರಬೇಕೆಂದು ತಲೆಕೆಡಿಸಿಕೊಳ್ಳದೇ ಪಾಠ ಮುಂದುವರೆಸಿದ್ದಾರೆ.

ಸ್ವಲ್ಪ ಸಮಯದಲ್ಲಿಯೇ ಆ ಹುಡುಗಿಯ ಕಾಲು ನೀಲಿ ಬಣ್ಣಕ್ಕೆ ತಿರುಗಿದಾಗ ಎಚ್ಚರಗೊಂಡು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿ ಸಾಧ್ಯವಿಲ್ಲವೆಂದು ನಂತರ  ಕೋಳಿಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡ್ಯೋಯ್ಯುವಾಗ ಸಾವನ್ನಪ್ಪಿದಾಳೆ.

ಇದರಿಂದ ಕೋಪಗೊಂಡ ಸಂಬಂಧಿಕರು ಮತ್ತು ವಿದ್ಯಾರ್ಥಿಗಳು ಶಾಲಾ ಶಿಕ್ಷಕಿಯ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.  ಶಾಲೆಯ ಕಚೇರಿ ಕೊಠಡಿಯನ್ನು ಧ್ವಂಸಗೊಳಿಸಿದ್ದಲ್ಲದೇ ಆ ಶಿಕ್ಷಕಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಸುಲ್ತಾನ್ ಬಾಥೆ ಸರ್ಕಾರಿ ಪ್ರೌಢಶಾಲಾ ತರಗತಿಗಳಲ್ಲಿ ಸಾಕಷ್ಟು ಬಿರುಕುಗಳು ಮತ್ತು ರಂಧ್ರಗಳಿವೆ. ಹಾಗಾಗಿ ಸರೀಸೃಪಗಳು ಅವುಗಳಲ್ಲಿ ನುಸುಳುತ್ತವೆ ಎಂದು ಪೋಷಕರು ಮತ್ತು ಇತರರು ದೂರಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ದೂರುಗಳನ್ನು ನೀಡಿದ್ದರೂ ಸಹ ಯಾರೂ ಅವರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಕೆಯ ಸಹಪಾಠಿಗಳ ಪ್ರಕಾರ, ಅವರು ಮಧ್ಯಾಹ್ನ 3.10 ಕ್ಕೆ ಹಾವು ಕಚ್ಚುವಿಕೆಯ ಬಗ್ಗೆ ದೂರು ನೀಡಿದರು ಮತ್ತು ಸಂಜೆ 4 ಗಂಟೆಯ ನಂತರ ಆಕೆಯ ಪೋಷಕರು ಬರುವವರೆಗೂ ಶಾಲಾ ಅಧಿಕಾರಿಗಳು ಕಾಯುತ್ತಿದ್ದರು. ಶಾಲೆಯು ಸಕಾಲಿಕ ವೈದ್ಯಕೀಯ ಸಹಾಯವನ್ನು ನೀಡಿದ್ದರೆ ಆಕೆಯ ಜೀವ ಉಳಿಸಬಹುದಿತ್ತು ಎಂದು ಹೇಳಿದ್ದಾರೆ.

ಆದರೆ ಶಾಲೆಯ ಕಡೆಯಿಂದ ಯಾವುದೇ ವಿಳಂಬವಾಗಿಲ್ಲ ಎಂದು ಶಾಲೆಯ ಮುಖ್ಯ ಶಿಕ್ಷಕ ಪಿ ಮೋಹನನ್ ಹೇಳಿದ್ದಾರೆ ಮತ್ತು ಅವರು ಸಾವಿಗೆ ತಾಲ್ಲೂಕು ಆಸ್ಪತ್ರೆಯನ್ನು ದೂಷಿಸಿದ್ದಾರೆ. ಘಟನೆಯ ನಂತರ ಜಿಲ್ಲಾ ಶಿಕ್ಷಣಾಧಿಕಾರಿಯು ತರಗತಿ ಶಿಕ್ಷಕಿ ಸಾಜಿಲ್ ಸಿ.ವಿ ಅವರನ್ನು ಅಮಾನತುಗೊಳಿಸಿದ್ದಾರೆ. ಕೇರಳ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ಅವರು ವಿದ್ಯಾರ್ಥಿಯ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...