Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

- Advertisement -
- Advertisement -

‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 50 ಸೆಕೆಂಡ್‌ ಇರುವ ವೈರಲ್ ವಿಡಿಯೊದಲ್ಲಿ, ಯುವಕನೊಬ್ಬನ ಮೇಲೆ ಮುಸ್ಲಿಮರ ಗುಂಪೊಂದು ದಾಳಿ ಮಾಡಿ ಎಳೆದುಕೊಂಡು ಹೋಗುತ್ತದೆ. ನಂತರ ಅದೇ ವಿಡಿಯೊ ಮುಂದುವರಿದಂತೆ, ಶರ್ಟ್‌ ಬಿಚ್ಚಿರುವ ಯುವಕನೊಬ್ಬನನ್ನು ಮಲಗಿಸಿ ಆತನ ಕತ್ತನ್ನು ಕೊಯ್ಯುತ್ತಿರುವ ಭಯಾನಕ ದೃಶ್ಯವಿದೆ.

ಈ ಭಯಾನಕ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ವಾಟ್ಸಪ್‌‌ನಲ್ಲಿ ಇದು ಹರಿದಾಡುತ್ತಿದ್ದು, ಅದರ ಶಿರ್ಷಿಕೆ ಕೆಳಗಿನಂತಿದೆ.

ಅತಿ ಘೋರ, ಕ್ರೂರ, ನೋಡಲು ಅಸಾಧ್ಯ. ಇದು ಕೇರಳದ ಮುಸ್ಲಿಂ ಸಮುದಾಯದವರು RSS ಸ್ವಯಂ ಸೇವಕನನ್ನು ಕುತ್ತಿಗೆ ಕತ್ತರಿಸಿ ಹತ್ಯೆ ಮಾಡಲಾಯಿತು. ಯೋಚಿಸಿ! ಮುಂದೆ ಇವರು ಬಹುಸಂಖ್ಯಾತರಾದರೆ ಹಿಂದುಗಳ ಸ್ಥಿತಿ, ಗತಿ ಏನಾಗಬಹುದು? ನಿಜವಾಗಿ ಭಯಂಕರ ಭಯಾನಕ

ವಾಟ್ಸಪ್ ಮಾತ್ರವಲ್ಲದೆ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲೂ ಈ ವಿಡಿಯೊ ಹರಿದಾಡಿದೆ. ಅದನ್ನು ಇಲ್ಲಿ ನೋಡಬಹುದು. (ಎಚ್ಚರಿಕೆ: ವಿಡಿಯೊ ಭಯಾನಕವಾಗಿದೆ). ಫೇಸ್‌ಬುಕ್‌ನಲ್ಲೂ ಈ ವಿಡಿಯೊದ ಶೀರ್ಷಿಕೆ ಅಪ್ಲೋಡ್ ಆಗಿದ್ದು, ಅದನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ವಿಡಿಯೊವನ್ನು ಎರೆಡು ಬೇರೆ ಬೇರೆ ವಿಡಿಯೋಗಳನ್ನು ಸೇರಿಸಿ ಮಾಡಲಾಗಿದೆ. ಮೊದಲ ಭಾಗದಲ್ಲಿ ಜನ ಸಮೂಹವೊಂದು ಯುವಕನ ಮೇಲೆ ದಾಳಿ ಮಾಡುತ್ತದೆ. ಅದರಲ್ಲಿ ಸುದರ್ಶನ್ ನ್ಯೂಸ್‌ನ ಲೋಗೊ ಕಾಣಬಹುದು. ವಿಡಿಯೊದ ಎರಡನೇ ಭಾಗದಲ್ಲಿ ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಎರಡು ವಿಡಿಯೊವನ್ನು ಸೇರಿಸಿ ಈ ವಿಡಿಯೊ ಮಾಡಿರುವುದರಿಂದ ನಾವು ವಿಡಿಯೊವನ್ನು ಬೇರೆ ಬೇರೆಯಾಗಿ ಫ್ಯಾಕ್ಟ್‌ಚೆಕ್‌ ಮಾಡೋಣ.

ವಿಡಿಯೋದ ಮೊದಲನೇ ಭಾಗ

ಮೊದಲನೇ ಭಾಗದಲ್ಲಿ ನಾಲ್ಕೈದು ಜನ ಗುಂಪು ಯುವಕನ ಮೇಲೆ ದಾಳಿ ಮಾಡಿ, ಆತನನ್ನು ಎಳೆದೊಯ್ಯುತ್ತದೆ. ಈ ವಿಡಿಯೊವನ್ನು ನಾವು (ನಾನುಗೌರಿ.ಕಾಂ) ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದ್ದು, ಈ ವೇಳೆ ನಾವು ಕೆಲವು ಟ್ವೀಟ್‌ಗಳನ್ನು ಗಮನಿಸಿದೆವು. ಈ ಟ್ವೀಟ್‌ ಆಧಾರದಲ್ಲಿ ನಾವು ಇನ್ನಷ್ಟು ಹುಡುಕಾಡಿದ್ದು, ಈ ವೇಳೆ ಈ ಘಟನೆಯ ಬಗ್ಗೆ ವರದಿ ಮಾಡಿರುವ ಪತ್ರಿಕಾ ವರದಿಗಳು ನಮಗೆ ಸಿಕ್ಕಿವೆ.

ಅಮರ್‌‌ ಉಜಾಲ’ ಪತ್ರಿಕೆಯು 2021 ಮೇ 5ನೇ ತಾರೀಕಿನಂದು ವರದಿ ಮಾಡಿದೆ. ವರದಿಯ ಪ್ರಕಾರ, “ಲೈನ್‌ಮ್ಯಾನ್‌ನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಹಲ್ಲೆ” ಎಂದು ವರದಿ ಮಾಡಿದೆ. ಈ ವರದಿಯ ಪ್ರಕಾರ, “ಮುಜಫರ್‌ನಗರ, ಭೋಪಾ ಗ್ರಾಮದ ಸಿಕ್ರಿಯಲ್ಲಿ ವಿದ್ಯುತ್‌ ದೋಷವನ್ನು ಸರಿಪಡಿಸಲು ಬಂದ ಲೈನ್‌ಮ್ಯಾನ್‌ನನ್ನು ಗ್ರಾಮಸ್ಥರು ಒತ್ತೆಯಾಳಾಗಿಟ್ಟು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಲೈನ್‌ಮ್ಯಾನ್‌ನ ಸಹಚರರು ಅಲ್ಲಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ” ಎಂದು ಬರೆಯಲಾಗಿದೆ.

ಅಮರ್‌ ಉಜಾಲಾ ಪತ್ರಿಕೆಯ ಸುದ್ದಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಜೊತೆಗೆ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ವ್ಯಕ್ತಿಗಳಿಗೆ ಮುಜಾಫರ್‌ ನಗರ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರ ಪ್ರಕಾರ, “ಭೋಪಾ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 07 ಜನರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಜೊತೆಗೆ 10-12 ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಮೇ ತಿಂಗಳ 5 ರಂದು ನೀಡಿದ್ದ ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ.

ವಿಡಿಯೋದ ಎರಡನೇ ಭಾಗ

ವಿಡಿಯೋದ ಎರಡನೇ ಭಾಗದಲ್ಲಿ ಭಯಾನಕ ದೃಶ್ಯವಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಾಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6ರಂದು ಮಾಡಿರುವ ಸುದ್ದಿ ದೊರಕಿದೆ.

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಂದಿತು. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಎರಡು ಘಟನೆಗಳ ದೃಶ್ಯಗಳನ್ನು ಸೇರಿಸಿ ಮಾಡಲಾಗಿದೆ. ಮೊದಲನೇ ಘಟನೆಯು 2021ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಎರಡನೇ ಘಟನೆ 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ಎರಡು ವಿಡಿಯೊಗೂ, ಕೇರಳಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಪತ್ರಿಕೆ ಅದೋಗತಿಗೆ ಹೋಗಲು ಇಂತ ನ್ಯೂಸ್ ಗಳೇ ಕಾರಣ ,ಜನರು ಪತ್ರಿಕೆ ಮೇಲೆ ನಂಬಿಕೆ ಕಳೆದು ಕೊಳ್ಳಲು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...