Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

- Advertisement -
- Advertisement -

‘ಕೇರಳದ ಮುಸ್ಲಿಮರು ಆರೆಸ್ಸೆಸ್‌ ಕಾರ್ಯಕರ್ತನ ಕತ್ತನ್ನು ಕೊಯ್ಯುತ್ತಿರುವ ದೃಶ್ಯ’ ಎಂದು ಪ್ರತಿಪಾದಿಸಿ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 50 ಸೆಕೆಂಡ್‌ ಇರುವ ವೈರಲ್ ವಿಡಿಯೊದಲ್ಲಿ, ಯುವಕನೊಬ್ಬನ ಮೇಲೆ ಮುಸ್ಲಿಮರ ಗುಂಪೊಂದು ದಾಳಿ ಮಾಡಿ ಎಳೆದುಕೊಂಡು ಹೋಗುತ್ತದೆ. ನಂತರ ಅದೇ ವಿಡಿಯೊ ಮುಂದುವರಿದಂತೆ, ಶರ್ಟ್‌ ಬಿಚ್ಚಿರುವ ಯುವಕನೊಬ್ಬನನ್ನು ಮಲಗಿಸಿ ಆತನ ಕತ್ತನ್ನು ಕೊಯ್ಯುತ್ತಿರುವ ಭಯಾನಕ ದೃಶ್ಯವಿದೆ.

ಈ ಭಯಾನಕ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಖ್ಯವಾಗಿ ವಾಟ್ಸಪ್‌‌ನಲ್ಲಿ ಇದು ಹರಿದಾಡುತ್ತಿದ್ದು, ಅದರ ಶಿರ್ಷಿಕೆ ಕೆಳಗಿನಂತಿದೆ.

ಅತಿ ಘೋರ, ಕ್ರೂರ, ನೋಡಲು ಅಸಾಧ್ಯ. ಇದು ಕೇರಳದ ಮುಸ್ಲಿಂ ಸಮುದಾಯದವರು RSS ಸ್ವಯಂ ಸೇವಕನನ್ನು ಕುತ್ತಿಗೆ ಕತ್ತರಿಸಿ ಹತ್ಯೆ ಮಾಡಲಾಯಿತು. ಯೋಚಿಸಿ! ಮುಂದೆ ಇವರು ಬಹುಸಂಖ್ಯಾತರಾದರೆ ಹಿಂದುಗಳ ಸ್ಥಿತಿ, ಗತಿ ಏನಾಗಬಹುದು? ನಿಜವಾಗಿ ಭಯಂಕರ ಭಯಾನಕ

ವಾಟ್ಸಪ್ ಮಾತ್ರವಲ್ಲದೆ ಟ್ವಿಟರ್‌ ಮತ್ತು ಫೇಸ್‌ಬುಕ್‌ನಲ್ಲೂ ಈ ವಿಡಿಯೊ ಹರಿದಾಡಿದೆ. ಅದನ್ನು ಇಲ್ಲಿ ನೋಡಬಹುದು. (ಎಚ್ಚರಿಕೆ: ವಿಡಿಯೊ ಭಯಾನಕವಾಗಿದೆ). ಫೇಸ್‌ಬುಕ್‌ನಲ್ಲೂ ಈ ವಿಡಿಯೊದ ಶೀರ್ಷಿಕೆ ಅಪ್ಲೋಡ್ ಆಗಿದ್ದು, ಅದನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಇಟಲಿಯಲ್ಲಿ ವಿಶ್ವನಾಯಕರನ್ನು ಭೇಟಿ ಮಾಡಲು ಮೋದಿ ಟ್ಯಾಕ್ಸಿಯಲ್ಲಿ ತೆರಳಿದ್ದರೆ?

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಈ ವಿಡಿಯೊವನ್ನು ಎರೆಡು ಬೇರೆ ಬೇರೆ ವಿಡಿಯೋಗಳನ್ನು ಸೇರಿಸಿ ಮಾಡಲಾಗಿದೆ. ಮೊದಲ ಭಾಗದಲ್ಲಿ ಜನ ಸಮೂಹವೊಂದು ಯುವಕನ ಮೇಲೆ ದಾಳಿ ಮಾಡುತ್ತದೆ. ಅದರಲ್ಲಿ ಸುದರ್ಶನ್ ನ್ಯೂಸ್‌ನ ಲೋಗೊ ಕಾಣಬಹುದು. ವಿಡಿಯೊದ ಎರಡನೇ ಭಾಗದಲ್ಲಿ ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಎರಡು ವಿಡಿಯೊವನ್ನು ಸೇರಿಸಿ ಈ ವಿಡಿಯೊ ಮಾಡಿರುವುದರಿಂದ ನಾವು ವಿಡಿಯೊವನ್ನು ಬೇರೆ ಬೇರೆಯಾಗಿ ಫ್ಯಾಕ್ಟ್‌ಚೆಕ್‌ ಮಾಡೋಣ.

ವಿಡಿಯೋದ ಮೊದಲನೇ ಭಾಗ

ಮೊದಲನೇ ಭಾಗದಲ್ಲಿ ನಾಲ್ಕೈದು ಜನ ಗುಂಪು ಯುವಕನ ಮೇಲೆ ದಾಳಿ ಮಾಡಿ, ಆತನನ್ನು ಎಳೆದೊಯ್ಯುತ್ತದೆ. ಈ ವಿಡಿಯೊವನ್ನು ನಾವು (ನಾನುಗೌರಿ.ಕಾಂ) ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದ್ದು, ಈ ವೇಳೆ ನಾವು ಕೆಲವು ಟ್ವೀಟ್‌ಗಳನ್ನು ಗಮನಿಸಿದೆವು. ಈ ಟ್ವೀಟ್‌ ಆಧಾರದಲ್ಲಿ ನಾವು ಇನ್ನಷ್ಟು ಹುಡುಕಾಡಿದ್ದು, ಈ ವೇಳೆ ಈ ಘಟನೆಯ ಬಗ್ಗೆ ವರದಿ ಮಾಡಿರುವ ಪತ್ರಿಕಾ ವರದಿಗಳು ನಮಗೆ ಸಿಕ್ಕಿವೆ.

ಅಮರ್‌‌ ಉಜಾಲ’ ಪತ್ರಿಕೆಯು 2021 ಮೇ 5ನೇ ತಾರೀಕಿನಂದು ವರದಿ ಮಾಡಿದೆ. ವರದಿಯ ಪ್ರಕಾರ, “ಲೈನ್‌ಮ್ಯಾನ್‌ನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಹಲ್ಲೆ” ಎಂದು ವರದಿ ಮಾಡಿದೆ. ಈ ವರದಿಯ ಪ್ರಕಾರ, “ಮುಜಫರ್‌ನಗರ, ಭೋಪಾ ಗ್ರಾಮದ ಸಿಕ್ರಿಯಲ್ಲಿ ವಿದ್ಯುತ್‌ ದೋಷವನ್ನು ಸರಿಪಡಿಸಲು ಬಂದ ಲೈನ್‌ಮ್ಯಾನ್‌ನನ್ನು ಗ್ರಾಮಸ್ಥರು ಒತ್ತೆಯಾಳಾಗಿಟ್ಟು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಲೈನ್‌ಮ್ಯಾನ್‌ನ ಸಹಚರರು ಅಲ್ಲಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ” ಎಂದು ಬರೆಯಲಾಗಿದೆ.

ಅಮರ್‌ ಉಜಾಲಾ ಪತ್ರಿಕೆಯ ಸುದ್ದಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಜೊತೆಗೆ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ವ್ಯಕ್ತಿಗಳಿಗೆ ಮುಜಾಫರ್‌ ನಗರ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರ ಪ್ರಕಾರ, “ಭೋಪಾ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ 07 ಜನರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಜೊತೆಗೆ 10-12 ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 10 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ” ಎಂದು ಮೇ ತಿಂಗಳ 5 ರಂದು ನೀಡಿದ್ದ ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ.

ವಿಡಿಯೋದ ಎರಡನೇ ಭಾಗ

ವಿಡಿಯೋದ ಎರಡನೇ ಭಾಗದಲ್ಲಿ ಭಯಾನಕ ದೃಶ್ಯವಿದ್ದು, ಅರೆ ಬೆತ್ತಲೆಯಾಗಿರುವ, ಬಾಯಿಗೆ ಬಟ್ಟೆ ತುರುಕಲ್ಪಟ್ಟ, ನೀಲಿ ಬಣ್ಣದ ಪ್ಯಾಂಟ್‌ಗೆ ಬೆಲ್ಟ್‌ ಧರಿಸಿರುವ ಯುವಕನ್ನು ಕುತ್ತಿಗೆಯನ್ನು ಕೊಯ್ಯಲಾಗುತ್ತದೆ. ಈ ದೃಶ್ಯವಂತೂ ಅಮಾನವೀಯವಾಗಿದ್ದು, ನೋಡಲು ಸಾಧ್ಯವಿಲ್ಲದಂತಿದೆ. ಈ ಚಿತ್ರವನ್ನೂ ನಾವು ರಿವರ್ಸ್ ಸರ್ಚ್ ಮಾಡಿದ್ದೇವೆ. ಈ ವೇಳೆ ನಮಗೆ ಆಸ್ಟ್ರೇಲಿಯಾದ ಸುದ್ದಿ ವೆಬ್‌‌ ಪೋರ್ಟಾಲ್‌ ಆಗಿರುವ news.com.auನಲ್ಲಿ 2018ರ ಫೆಬ್ರವರಿ ತಿಂಗಳ 6ರಂದು ಮಾಡಿರುವ ಸುದ್ದಿ ದೊರಕಿದೆ.

ವರದಿ ಪ್ರಕಾರ, “ಈ ಘಟನೆಯು ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ನಡೆದಿದೆ. ವಿಡಿಯೋದಲ್ಲಿ, ಹದಿಹರೆಯದ ಬಾಲಕನನ್ನು ಮಾದಕ ದ್ರವ್ಯ ಮಾಫಿಯಾವು ಕತ್ತು ಕೊಯ್ದು ಕೊಂದಿದೆ. ಬಾಲಕನು ಮಾದಕ ದ್ರವ್ಯ ಮಾಫಿಯಾದ ವಿರೋಧಿ ಗುಂಪಿನವನಾಗಿದ್ದರಿಂದ, ಆತನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಕತ್ತು ಕೊಯ್ದು ಕೊಂದಿತು. ಈ ವಿಡಿಯೊವನ್ನು ಆರೋಪಿ ಗುಂಪೇ ಚಿತ್ರೀಕರಿಸಿ, ದೃಶ್ಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ”

ಈ ಘಟನೆಯನ್ನು ‘ಮೈಲ್‌ ಆನ್‌ಲೈನ್‌’ ಸುದ್ದಿ ಪೋರ್ಟಲ್‌ ಕೂಡಾ ವರದಿ ಮಾಡಿದೆ. ಈ ಪತ್ರಿಕೆಯ ವರದಿಯ ಪ್ರಕಾರ, ಬಾಲಕನು 13 ವರ್ಷದವನಾಗಿದ್ದು, ಆತನ ಕತ್ತನ್ನು ಕೊಯ್ಯುವ ಮೊದಲು ಕಿವಿಯನ್ನು ಕೂಡಾ ಕತ್ತರಿಸಲಾಗಿತ್ತು.

ಒಟ್ಟಿನಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಎರಡು ಘಟನೆಗಳ ದೃಶ್ಯಗಳನ್ನು ಸೇರಿಸಿ ಮಾಡಲಾಗಿದೆ. ಮೊದಲನೇ ಘಟನೆಯು 2021ರ ಮೇ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಎರಡನೇ ಘಟನೆ 2018 ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಅಮೆರಿಕಾದ ವೆನೆಜುವಾಲದಲ್ಲಿ ನಡೆದಿದೆ. ಈ ಎರಡು ವಿಡಿಯೊಗೂ, ಕೇರಳಕ್ಕೂ, ಆರೆಸ್ಸೆಸ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಪತ್ರಿಕೆ ಅದೋಗತಿಗೆ ಹೋಗಲು ಇಂತ ನ್ಯೂಸ್ ಗಳೇ ಕಾರಣ ,ಜನರು ಪತ್ರಿಕೆ ಮೇಲೆ ನಂಬಿಕೆ ಕಳೆದು ಕೊಳ್ಳಲು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...