Homeಅಂತರಾಷ್ಟ್ರೀಯಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ನೋಬೆಲ್ ಪ್ರಶಸ್ತಿಗೆ ಲೇಖಕಿ ಓಲ್ಗಾ, ಬರಹಗಾರ ಪೀಟರ್ ಭಾಜನ

ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ನೋಬೆಲ್ ಪ್ರಶಸ್ತಿಗೆ ಲೇಖಕಿ ಓಲ್ಗಾ, ಬರಹಗಾರ ಪೀಟರ್ ಭಾಜನ

- Advertisement -
- Advertisement -

ಸಾಹಿತ್ಯ ಕ್ಷೇತ್ರದಲ್ಲಿ ನೀಡಲಾಗುವ ಅತ್ಯಂತ ಶ್ರೇಷ್ಠ ಹಾಗೂ ಪ್ರತಿಷ್ಠಿತ ಪ್ರಶಸ್ತಿ ಎಂದರೆ ನೋಬೆಲ್ ಪ್ರಶಸ್ತಿ. 2018 ಮತ್ತು 2019ನೇ ಸಾಲಿನ ಸಾಹಿತ್ಯ ಕ್ಷೇತ್ರದ ನೋಬೆಲ್ ಪ್ರಶಸ್ತಿಗೆ ಪೊಲೀಶ್ ಬರಹಗಾರ್ತಿ ಒಲ್ಗಾ ಟೋಕಾರ್ಕ್ ಜುಕ್ ಹಾಗೂ ಆಸ್ಟ್ರೇಲಿಯಾ ಲೇಖಕ ಪೀಟರ್ ಹಂಡ್ಕೆ ಭಾಜನರಾಗಿದ್ದಾರೆ. ಸ್ವಿಡೀಶ್ ಅಕಾಡೆಮಿ ಸಾಹಿತ್ಯ ಕ್ಷೇತ್ರದಲ್ಲಿ ನೋಬೆಲ್ ಪ್ರಶಸ್ತಿ ನೀಡಿರುವ ಬಗ್ಗೆ ಹೇಳಿದೆ.

ವಿಶ್ವಕೋಶ ಜೀವನದ ಒಂದು ರೂಪವಾಗಿ ಕಲ್ಪನಾತೀತವಾಗಿ ಹೇಗೆ ಜೀವನದ ಗಡಿ ದಾಟಿಸುತ್ತದೆ ಎಂಬ ಬಗ್ಗೆ ತೋರಿಸಿಕೊಟ್ಟ ಸಾಧನೆಗೆ ಓಲ್ಗಾ ನೋಬೆಲ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪೀಟರ್ ಅವರು, ಭಾಷಾ ಜಾಣ್ಮೆ, ಹಾಗೂ ಅದರ ಪರಿಧಿ ಮತ್ತು ಮಾನವ ಅನುಭವದ ನಿರ್ದಿಷ್ಟತೆಯನ್ನು ಅನ್ವೇಷಿಸಿದ ಪ್ರಭಾವಶಾಲಿ ಕೆಲಸಕ್ಕಾಗಿ ಪ್ರಶಸ್ತಿ ಪಡೆದಿದ್ದಾರೆ.

1901 ರಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ದಿಗ್ಗಜರಿಗೆ ನೋಬೆಲ್ ಪ್ರದಾನ ಮಾಡಲಾಗುತ್ತಿದೆ. ಇಲ್ಲಿಯವರೆಗೆ 114 ಲೇಖಕರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅದರಲ್ಲಿ 14 ಮಹಿಳಾ ಬರಹಗಾರರು ಇದುವರೆಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಂದ ಹಾಗೆ 70 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪ್ರದಾನ ಮಾಡುವುದನ್ನು ಮುಂದೂಡಲಾಗಿತ್ತು. ಕಳೆದ ವರ್ಷ ಸಾಹಿತ್ಯ ಕ್ಷೇತ್ರದಲ್ಲಿ ನೀಡಲಾಗುವ ನೋಬೆಲ್ ಪ್ರಶಸ್ತಿಯನ್ನು ಲೈಂಗಿಕ ದೌರ್ಜನ್ಯ ಹಗರಣ, ಮೀ ಟೂ (Me Too) ಆಂದೋಲನ ನಡೆಯುತ್ತಿದ್ದ ಕಾರಣದಿಂದ ಮುಂದೂಡಲಾಗಿತ್ತು.

ನವೆಂಬರ್ 2017ರಲ್ಲಿ ಲೈಂಗಿಕ ದೌರ್ಜನ್ಯ ಹಗರಣದ ವಿರುದ್ಧ ಸ್ವಿಡೀಶ್ ಕವಯತ್ರಿ ಕತಾರಿನಾ ಫ್ರೋಸ್ಟೆನ್ಸನ್ 18 ಅಕಾಡೆಮಿ ಸದಸ್ಯರಲ್ಲಿ ಜೀನ್ ಕ್ಲೌಡ್ ಅರ್ನಾಲ್ಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ರಾಜೀನಾಮೆ ನೀಡಿದ್ದರು. ನಂತರ ಅಕಾಡೆಮಿಯ ಮಹಿಳೆಯರು ಕತಾರಿನಾಗೆ ಬೆಂಬಲ ಸೂಚಿಸಿದ್ದರು. ಅತ್ಯಾಚಾರ ಆರೋಪದಡಿ ಜೀನ್ ಕ್ಲೌಡ್ ಅರ್ನಾಲ್ಟ್ ಗೆ ಎರಡು ವರ್ಷ ಜೈಲುಶಿಕ್ಷೆ ನಿಗಧಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...