Homeಕರ್ನಾಟಕಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

ಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

27ನೇ ವಯಸ್ಸಿನಲ್ಲಿ 'ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯ ಪ್ರಶಸ್ತಿಗಳನ್ನು ಶಂಕರ್‌ ನಾಗ್ ಬಾಚಿಕೊಂಡಿದ್ದರು.

- Advertisement -
- Advertisement -

ಇಂದು (ನವೆಂಬರ್ 9) ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ, ಅದ್ಬುತ ನಿರ್ದೇಶಕ, ನಿರ್ಮಾಪಕ ಶಂಕರ್‌ ನಾಗ್ ಅವರ ಜನ್ಮದಿನ. ಕನ್ನಡಿಗರ ನೆಚ್ಚಿನ ಆಟೋರಾಜ ನಮ್ಮಿಂದ ಭೌತಿಕವಾಗಿ ದೂರವಾಗಿ 31 ವರ್ಷಗಳು ಕಳೆದಿವೆ. ಆದರೆ, ಅವರ ಸಾಧನೆಯ ಮೂಲಕ ಜನಮಾನಸದಲ್ಲಿ ಮರೆಯದ ಛಾಪು ಮೂಡಿಸಿದ್ದಾರೆ.

ಶಂಕರ್‌ನಾಗ್ ಬದುಕಿದ್ದು 36 ವರ್ಷ, ಆದರೆ ಅವರ ಸಾಧನೆ ಇಂದಿಗೂ ಅಮರ. 12 ವರ್ಷಗಳಲ್ಲಿ ಶಂಕರ್​ನಾಗ್​, ಬರೋಬ್ಬರಿ 98 ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವುಗಳಲ್ಲಿ 90 ಸಿನಿಮಾಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ.

ಶಂಕರ್ ನಾಗ್ ನವೆಂಬರ್ 9, 1954ರಲ್ಲಿ ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿದರು. ಮುಂಬೈನಲ್ಲಿದ್ದ ಶಂಕರ್‌ನಾಗ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಮರಾಠಿ ಚಿತ್ರ ‘22 ಜೂನ್ 1897’ ಕ್ಕೆ ಚಿತ್ರಕಥೆ ಬರೆದಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

 

1978 ರಲ್ಲಿ ತೆರೆಕಂಡ ಗಿರೀಶ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶಂಕರ್‌ ನಾಗ್, ಹಿಂತಿರುಗಿ ನೋಡಿದ್ದೇ ಇಲ್ಲ. ನಟನಾಗಿ ಪದಾರ್ಪಣೆ ಮಾಡಿದ ಎರಡೇ ವರ್ಷಕ್ಕೆ 1980 ರಲ್ಲಿ ತಮ್ಮ 27ರ ವಯಸ್ಸಿನಲ್ಲಿ ‘ಮಿಂಚಿನ ಓಟ’ ಚಿತ್ರವನ್ನ ನಿರ್ದೇಶಿಸಿ, ನಿರ್ಮಾಣ ಮಾಡುವ ಮೂಲಕ ತಾನೊಬ್ಬ ಒಳ್ಳೆಯ ನಿರ್ದೇಶಕ ಅನ್ನೋದನ್ನ ನಿರೂಪಿಸಿದ್ದರು. ’ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯಪ್ರಶಸ್ತಿಗಳನ್ನು ಶಂಕರ್‌ನಾಗ್ ಬಾಚಿಕೊಂಡರು. ಬರೀ ಕನ್ನಡ ಚಿತ್ರರಂಗವಲ್ಲದೆ, ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ:  ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಂತರ ಸಂಗೀತ ಮಾಂತ್ರಿಕ ಇಳಯ ರಾಜಾರನ್ನು ಕರೆ ತಂದು ಸಂಗೀತ ಕೊಡಿಸಿದ ‘ಜನ್ಮ ಜನ್ಮದ ಅನುಬಂಧ’, ‘ಗೀತಾ’ದಂಥ ಸಿನಿಮಾಗಳ ಹಾಡುಗಳು ಇಂದಿಗೂ ಜನಪ್ರಿಯ. ಶಂಕರ್‌ ನಿರ್ದೇಶನಕ್ಕೆ ಮನಸೋತ ರಾಜ್‌ಕುಮಾರ್‌ ಕೂಡ  ತಮ್ಮ ಇಮೇಜಿನ ಹಂಗು ತೊರೆದು, ‘ಒಂದು ಮುತ್ತಿನ ಕಥೆ’ಯಲ್ಲಿ ಅಭಿನಯಿಸಿದ್ದರು.

ಸೀತಾರಾಮು, ಆಟೋರಾಜ, ಸಾಂಗ್ಲಿಯಾನ, ನೋಡಿ ಸ್ವಾಮಿ ನಾವಿರೋದೇ ಹೀಗೆ, ಆ್ಯಕ್ಸಿಡೆಂಟ್, ಸಿಬಿಐ ಶಂಕರ್‌, ಮೂಗನ ಸೇಡು, ತರ್ಕ, ಗೀತಾ, ನ್ಯಾಯಾ ಎಲ್ಲಿದೆ ಚಿತ್ರಗಳು ಸೇರಿ 90 ಚಿತ್ರಗಳ ಮೂಲಕ ಜನರ ಮನ ಗೆದ್ದವರು. ತಮ್ಮ ’ಮುನಿಯನ ಮಾದರಿ’ ಚಿತ್ರದ ಮೂಲಕ ರೈತರ, ಹಳ್ಳಿಗರ ಸಮಸ್ಯೆಗಳಿಗೆ ದನಿಯಾದರು.

PC: Mythical India

ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿದ್ದ ‘ಮಾಲ್ಗುಡಿ ಡೇಸ್‌’ನಂತಹ ಗಟ್ಟಿ ಧಾರಾವಾಹಿಯನ್ನು ನೀಡಿದ ಕೀರ್ತಿ ಶಂಕರ್‌ ನಾಗ್‌ ಅವರಿಗೆ ಸಲ್ಲುತ್ತದೆ. 1986ರಲ್ಲಿ ಪ್ರಸಾರವಾದ ಈ ಧಾರವಾಹಿಯ ಕ್ರೇಜ್ ಎಷ್ಟಿತ್ತು ಎಂಬುದಕ್ಕೆ  ಉದಾಹರಣೆಯೆಂದರೆ ಕಳೆದ ವರ್ಷ ಝೀ ಕನ್ನಡ ಇದರ ಕನ್ನಡ ಅವತರಣಿಕೆ ಪ್ರಸಾರ ಮಾಡಿತ್ತು.

The nostalgia inducing 'Malgudi Days': When Swami was my friend too | The News Minute

ನಟ ಶಂಕರ್‌ ನಾಗ್ ನಮ್ಮನಗಲಿದ್ದು ಸೆಪ್ಟೆಂಬರ್‌ 30, 1990 ರಂದು. ಅಂದು ಭಾರತೀಯ ಚಿತ್ರರಂಗವೇ ಆಘಾತಕ್ಕೆ ಒಳಗಾದ ದಿನ. ಇಡೀ ಚಿತ್ರರಂಗ ಒಬ್ಬ ಅಪ್ರತಿಮ ಕಲಾವಿದ, ನಟ, ನಿರ್ದೇಶಕ, ನಿರ್ಮಾಪಕ, ರಂಗಭೂಮಿ ಕಲಾವಿದ, ಕರಾಟೆ ಕಿಂಗ್ ಎಂದು ಖ್ಯಾತರಾಗಿದ್ದ ಶಂಕರ್‌ ನಾಗ್ ಅವ‌ರನ್ನು ಕಳೆದುಕೊಂಡಿತ್ತು.

ದಾವಣಗೆರೆ ಬಳಿಯ ಆನಗೋಡಿನ ಬಳಿ ಶಂಕರ್‌ನಾಗ್‌ ಕಾರು ಅಪಘಾತದಲ್ಲಿ ನಿಧನರಾದರು. ಜೋಕುಮಾರಸ್ವಾಮಿ ಚಿತ್ರದ ಚಿತ್ರೀಕರಣ ಸಮಯದಲ್ಲಿ ನಡೆದ ಈ ದುರ್ಘಟನೆಯಿಂದ ಇಡೀ ಕರುನಾಡೇ ಆಘಾತಕ್ಕೆ ಒಳಗಾಗಿತ್ತು.

ತಮ್ಮ 12 ವರ್ಷಗಳ ಸಿನಿ ಜೀವನದಲ್ಲಿ ಆಟೋ ಚಾಲಕರ ಹೀರೋ ಆಗಿ, ಯುವ ನಿರ್ದೇಶಕರ ಸ್ಪೂರ್ತಿಯಾಗಿ ಶಂಕರ್​ನಾಗ್​ ಇಂದಿಗೂ ರಾರಾಜಿಸುತ್ತಿದ್ದಾರೆ. ಇವರ ನೆನಪಲ್ಲಿ ಸ್ಥಾಪಿಸಲಾದ ‘ರಂಗಶಂಕರ’ ನಾಟಕ ರಂಗ, ಅದೆಷ್ಟೋ ಯುವ ಪ್ರತಿಭೆಗಳಿಗೆ ವೇದಿಕೆಯಾಗಿದೆ. ನಟ ಶಂಕರ್‌ ನಾಗ್ ಪತ್ನಿ ಅರುಂಧತಿ ನಾಗ್ ರಂಗಶಂಕರದ ಹೊಣೆ ಹೊತ್ತಿದ್ದಾರೆ.

ರಂಗಶಂಕರದ ಮೂಲಕ ತಮ್ಮ ರಂಗತಂಡದ ಕನಸು ಕಟ್ಟಿಕೊಂಡ ರಂಗಕರ್ಮಿ ರಾಜ್‌ಗುರು ನಾನುಗೌರಿ.ಕಾಂ ಜೊತೆ ಶಂಕರ್‌ ನಾಗ್ ಅವರು ಇವರಲ್ಲಿ ತುಂಬಿದ ಸ್ಪೂರ್ತಿ ಬಗ್ಗೆ ಹಂಚಿಕೊಂಡಿದ್ದು ಹೀಗೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” 

ರಾಜ್‌ಗುರು, ರಂಗಕರ್ಮಿ

“ಅವರ ಎಷ್ಟೋ ಸಮುದ್ರದಷ್ಟು ಕನಸುಗಳನ್ನು ನಾವು ನನಸು ಮಾಡಲಾಗದೆ ಇದ್ದರು ಸಾಸಿವೆಯಷ್ಟಾದರು ನೆರವೇರಿಸುವ ಕಾಯಕದಲ್ಲಿ ನಾವು ತೊಡಗಿದ್ದೇವೆ. ಮತ್ತು ಯಶಸ್ಸು ಕಂಡಿದ್ದೇವೆ. ಆ ಯಶಸ್ಸಿನ ಸಿಂಹಪಾಲು ಶಂಕ್ರಣ್ಣನಿಗೆ. ನಾವು ನಾಮಕಾವಸ್ತೆ ಅಷ್ಟೇ” ಎಂದು ಶಂಕರ್‌ ನಾಗ್ ಅವರಿಗೆ ನಮನ ಸಲ್ಲಿಸುತ್ತಾರೆ.

ನಮ್ಮ ಮೆಟ್ರೋ ಯೋಜನೆ ಶಂಕರ್‌ ನಾಗ್ ಅವರ ಕನಸಿನ ಕೂಸಾಗಿತ್ತು. ಒಬ್ಬ ವ್ಯಕ್ತಿ ತಮ್ಮ ಪೂರ್ತಿ ಜೀವನದಲ್ಲಿ ಸಾಧಿಸಲಾಗದ ಅಗಾಧ ಕೆಲಸಗಳನ್ನು ಶಂಕರ್‌ ನಾಗ್ 36 ವರ್ಷಗಳಲ್ಲಿ ಸಾಧಿಸಿದ್ದಾರೆ.

ಶಂಕರ್‌ ನಾಗ್ ಅವರ ಜನ್ಮದಿನದ ಹಿನ್ನೆಲೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ಗಣ್ಯರು ನಟನನ್ನು ನೆನಪಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ’ಇಂದು ಕನ್ನಡ ಚಿತ್ರರಂಗದ ಅಪೂರ್ವ ನಟ, ನಿರ್ದೇಶಕ, ಅಪ್ರತಿಮ ದೂರದೃಷ್ಟಿಯುಳ್ಳ ತಾಂತ್ರಿಕ ನಿಪುಣರಾಗಿದ್ದ ಶಂಕರ್‌ ನಾಗ್ ಅವರ ಜಯಂತಿ. ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು. ಸಿನಿಮಾ, ರಂಗಭೂಮಿಯಲ್ಲಿ ಬೆರಗು ಮೂಡಿಸುವ ಅನೇಕ ಪ್ರಯೋಗಗಳನ್ನು ನಡೆಸಿದ್ದ ಅವರು ಸದಾ ಚೈತನ್ಯ ಚಿಲುಮೆ ಆಗಿದ್ದರು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...