Homeಕರ್ನಾಟಕಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

ಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

27ನೇ ವಯಸ್ಸಿನಲ್ಲಿ 'ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯ ಪ್ರಶಸ್ತಿಗಳನ್ನು ಶಂಕರ್‌ ನಾಗ್ ಬಾಚಿಕೊಂಡಿದ್ದರು.

- Advertisement -
- Advertisement -

ಇಂದು (ನವೆಂಬರ್ 9) ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ, ಅದ್ಬುತ ನಿರ್ದೇಶಕ, ನಿರ್ಮಾಪಕ ಶಂಕರ್‌ ನಾಗ್ ಅವರ ಜನ್ಮದಿನ. ಕನ್ನಡಿಗರ ನೆಚ್ಚಿನ ಆಟೋರಾಜ ನಮ್ಮಿಂದ ಭೌತಿಕವಾಗಿ ದೂರವಾಗಿ 31 ವರ್ಷಗಳು ಕಳೆದಿವೆ. ಆದರೆ, ಅವರ ಸಾಧನೆಯ ಮೂಲಕ ಜನಮಾನಸದಲ್ಲಿ ಮರೆಯದ ಛಾಪು ಮೂಡಿಸಿದ್ದಾರೆ.

ಶಂಕರ್‌ನಾಗ್ ಬದುಕಿದ್ದು 36 ವರ್ಷ, ಆದರೆ ಅವರ ಸಾಧನೆ ಇಂದಿಗೂ ಅಮರ. 12 ವರ್ಷಗಳಲ್ಲಿ ಶಂಕರ್​ನಾಗ್​, ಬರೋಬ್ಬರಿ 98 ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವುಗಳಲ್ಲಿ 90 ಸಿನಿಮಾಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ.

ಶಂಕರ್ ನಾಗ್ ನವೆಂಬರ್ 9, 1954ರಲ್ಲಿ ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿದರು. ಮುಂಬೈನಲ್ಲಿದ್ದ ಶಂಕರ್‌ನಾಗ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಮರಾಠಿ ಚಿತ್ರ ‘22 ಜೂನ್ 1897’ ಕ್ಕೆ ಚಿತ್ರಕಥೆ ಬರೆದಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

 

1978 ರಲ್ಲಿ ತೆರೆಕಂಡ ಗಿರೀಶ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶಂಕರ್‌ ನಾಗ್, ಹಿಂತಿರುಗಿ ನೋಡಿದ್ದೇ ಇಲ್ಲ. ನಟನಾಗಿ ಪದಾರ್ಪಣೆ ಮಾಡಿದ ಎರಡೇ ವರ್ಷಕ್ಕೆ 1980 ರಲ್ಲಿ ತಮ್ಮ 27ರ ವಯಸ್ಸಿನಲ್ಲಿ ‘ಮಿಂಚಿನ ಓಟ’ ಚಿತ್ರವನ್ನ ನಿರ್ದೇಶಿಸಿ, ನಿರ್ಮಾಣ ಮಾಡುವ ಮೂಲಕ ತಾನೊಬ್ಬ ಒಳ್ಳೆಯ ನಿರ್ದೇಶಕ ಅನ್ನೋದನ್ನ ನಿರೂಪಿಸಿದ್ದರು. ’ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯಪ್ರಶಸ್ತಿಗಳನ್ನು ಶಂಕರ್‌ನಾಗ್ ಬಾಚಿಕೊಂಡರು. ಬರೀ ಕನ್ನಡ ಚಿತ್ರರಂಗವಲ್ಲದೆ, ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ:  ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಂತರ ಸಂಗೀತ ಮಾಂತ್ರಿಕ ಇಳಯ ರಾಜಾರನ್ನು ಕರೆ ತಂದು ಸಂಗೀತ ಕೊಡಿಸಿದ ‘ಜನ್ಮ ಜನ್ಮದ ಅನುಬಂಧ’, ‘ಗೀತಾ’ದಂಥ ಸಿನಿಮಾಗಳ ಹಾಡುಗಳು ಇಂದಿಗೂ ಜನಪ್ರಿಯ. ಶಂಕರ್‌ ನಿರ್ದೇಶನಕ್ಕೆ ಮನಸೋತ ರಾಜ್‌ಕುಮಾರ್‌ ಕೂಡ  ತಮ್ಮ ಇಮೇಜಿನ ಹಂಗು ತೊರೆದು, ‘ಒಂದು ಮುತ್ತಿನ ಕಥೆ’ಯಲ್ಲಿ ಅಭಿನಯಿಸಿದ್ದರು.

ಸೀತಾರಾಮು, ಆಟೋರಾಜ, ಸಾಂಗ್ಲಿಯಾನ, ನೋಡಿ ಸ್ವಾಮಿ ನಾವಿರೋದೇ ಹೀಗೆ, ಆ್ಯಕ್ಸಿಡೆಂಟ್, ಸಿಬಿಐ ಶಂಕರ್‌, ಮೂಗನ ಸೇಡು, ತರ್ಕ, ಗೀತಾ, ನ್ಯಾಯಾ ಎಲ್ಲಿದೆ ಚಿತ್ರಗಳು ಸೇರಿ 90 ಚಿತ್ರಗಳ ಮೂಲಕ ಜನರ ಮನ ಗೆದ್ದವರು. ತಮ್ಮ ’ಮುನಿಯನ ಮಾದರಿ’ ಚಿತ್ರದ ಮೂಲಕ ರೈತರ, ಹಳ್ಳಿಗರ ಸಮಸ್ಯೆಗಳಿಗೆ ದನಿಯಾದರು.

PC: Mythical India

ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿದ್ದ ‘ಮಾಲ್ಗುಡಿ ಡೇಸ್‌’ನಂತಹ ಗಟ್ಟಿ ಧಾರಾವಾಹಿಯನ್ನು ನೀಡಿದ ಕೀರ್ತಿ ಶಂಕರ್‌ ನಾಗ್‌ ಅವರಿಗೆ ಸಲ್ಲುತ್ತದೆ. 1986ರಲ್ಲಿ ಪ್ರಸಾರವಾದ ಈ ಧಾರವಾಹಿಯ ಕ್ರೇಜ್ ಎಷ್ಟಿತ್ತು ಎಂಬುದಕ್ಕೆ  ಉದಾಹರಣೆಯೆಂದರೆ ಕಳೆದ ವರ್ಷ ಝೀ ಕನ್ನಡ ಇದರ ಕನ್ನಡ ಅವತರಣಿಕೆ ಪ್ರಸಾರ ಮಾಡಿತ್ತು.

The nostalgia inducing 'Malgudi Days': When Swami was my friend too | The News Minute

ನಟ ಶಂಕರ್‌ ನಾಗ್ ನಮ್ಮನಗಲಿದ್ದು ಸೆಪ್ಟೆಂಬರ್‌ 30, 1990 ರಂದು. ಅಂದು ಭಾರತೀಯ ಚಿತ್ರರಂಗವೇ ಆಘಾತಕ್ಕೆ ಒಳಗಾದ ದಿನ. ಇಡೀ ಚಿತ್ರರಂಗ ಒಬ್ಬ ಅಪ್ರತಿಮ ಕಲಾವಿದ, ನಟ, ನಿರ್ದೇಶಕ, ನಿರ್ಮಾಪಕ, ರಂಗಭೂಮಿ ಕಲಾವಿದ, ಕರಾಟೆ ಕಿಂಗ್ ಎಂದು ಖ್ಯಾತರಾಗಿದ್ದ ಶಂಕರ್‌ ನಾಗ್ ಅವ‌ರನ್ನು ಕಳೆದುಕೊಂಡಿತ್ತು.

ದಾವಣಗೆರೆ ಬಳಿಯ ಆನಗೋಡಿನ ಬಳಿ ಶಂಕರ್‌ನಾಗ್‌ ಕಾರು ಅಪಘಾತದಲ್ಲಿ ನಿಧನರಾದರು. ಜೋಕುಮಾರಸ್ವಾಮಿ ಚಿತ್ರದ ಚಿತ್ರೀಕರಣ ಸಮಯದಲ್ಲಿ ನಡೆದ ಈ ದುರ್ಘಟನೆಯಿಂದ ಇಡೀ ಕರುನಾಡೇ ಆಘಾತಕ್ಕೆ ಒಳಗಾಗಿತ್ತು.

ತಮ್ಮ 12 ವರ್ಷಗಳ ಸಿನಿ ಜೀವನದಲ್ಲಿ ಆಟೋ ಚಾಲಕರ ಹೀರೋ ಆಗಿ, ಯುವ ನಿರ್ದೇಶಕರ ಸ್ಪೂರ್ತಿಯಾಗಿ ಶಂಕರ್​ನಾಗ್​ ಇಂದಿಗೂ ರಾರಾಜಿಸುತ್ತಿದ್ದಾರೆ. ಇವರ ನೆನಪಲ್ಲಿ ಸ್ಥಾಪಿಸಲಾದ ‘ರಂಗಶಂಕರ’ ನಾಟಕ ರಂಗ, ಅದೆಷ್ಟೋ ಯುವ ಪ್ರತಿಭೆಗಳಿಗೆ ವೇದಿಕೆಯಾಗಿದೆ. ನಟ ಶಂಕರ್‌ ನಾಗ್ ಪತ್ನಿ ಅರುಂಧತಿ ನಾಗ್ ರಂಗಶಂಕರದ ಹೊಣೆ ಹೊತ್ತಿದ್ದಾರೆ.

ರಂಗಶಂಕರದ ಮೂಲಕ ತಮ್ಮ ರಂಗತಂಡದ ಕನಸು ಕಟ್ಟಿಕೊಂಡ ರಂಗಕರ್ಮಿ ರಾಜ್‌ಗುರು ನಾನುಗೌರಿ.ಕಾಂ ಜೊತೆ ಶಂಕರ್‌ ನಾಗ್ ಅವರು ಇವರಲ್ಲಿ ತುಂಬಿದ ಸ್ಪೂರ್ತಿ ಬಗ್ಗೆ ಹಂಚಿಕೊಂಡಿದ್ದು ಹೀಗೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” 

ರಾಜ್‌ಗುರು, ರಂಗಕರ್ಮಿ

“ಅವರ ಎಷ್ಟೋ ಸಮುದ್ರದಷ್ಟು ಕನಸುಗಳನ್ನು ನಾವು ನನಸು ಮಾಡಲಾಗದೆ ಇದ್ದರು ಸಾಸಿವೆಯಷ್ಟಾದರು ನೆರವೇರಿಸುವ ಕಾಯಕದಲ್ಲಿ ನಾವು ತೊಡಗಿದ್ದೇವೆ. ಮತ್ತು ಯಶಸ್ಸು ಕಂಡಿದ್ದೇವೆ. ಆ ಯಶಸ್ಸಿನ ಸಿಂಹಪಾಲು ಶಂಕ್ರಣ್ಣನಿಗೆ. ನಾವು ನಾಮಕಾವಸ್ತೆ ಅಷ್ಟೇ” ಎಂದು ಶಂಕರ್‌ ನಾಗ್ ಅವರಿಗೆ ನಮನ ಸಲ್ಲಿಸುತ್ತಾರೆ.

ನಮ್ಮ ಮೆಟ್ರೋ ಯೋಜನೆ ಶಂಕರ್‌ ನಾಗ್ ಅವರ ಕನಸಿನ ಕೂಸಾಗಿತ್ತು. ಒಬ್ಬ ವ್ಯಕ್ತಿ ತಮ್ಮ ಪೂರ್ತಿ ಜೀವನದಲ್ಲಿ ಸಾಧಿಸಲಾಗದ ಅಗಾಧ ಕೆಲಸಗಳನ್ನು ಶಂಕರ್‌ ನಾಗ್ 36 ವರ್ಷಗಳಲ್ಲಿ ಸಾಧಿಸಿದ್ದಾರೆ.

ಶಂಕರ್‌ ನಾಗ್ ಅವರ ಜನ್ಮದಿನದ ಹಿನ್ನೆಲೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ಗಣ್ಯರು ನಟನನ್ನು ನೆನಪಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ’ಇಂದು ಕನ್ನಡ ಚಿತ್ರರಂಗದ ಅಪೂರ್ವ ನಟ, ನಿರ್ದೇಶಕ, ಅಪ್ರತಿಮ ದೂರದೃಷ್ಟಿಯುಳ್ಳ ತಾಂತ್ರಿಕ ನಿಪುಣರಾಗಿದ್ದ ಶಂಕರ್‌ ನಾಗ್ ಅವರ ಜಯಂತಿ. ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು. ಸಿನಿಮಾ, ರಂಗಭೂಮಿಯಲ್ಲಿ ಬೆರಗು ಮೂಡಿಸುವ ಅನೇಕ ಪ್ರಯೋಗಗಳನ್ನು ನಡೆಸಿದ್ದ ಅವರು ಸದಾ ಚೈತನ್ಯ ಚಿಲುಮೆ ಆಗಿದ್ದರು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...