Homeಕರ್ನಾಟಕಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

ಶಂಕರ್ ‌ನಾಗ್‌ ಜನ್ಮದಿನ: ಕನ್ನಡಿಗರ ಮನದಲ್ಲಿ ಎಂದಿಗೂ ’ಆಟೋರಾಜ’ ಅಮರ

27ನೇ ವಯಸ್ಸಿನಲ್ಲಿ 'ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯ ಪ್ರಶಸ್ತಿಗಳನ್ನು ಶಂಕರ್‌ ನಾಗ್ ಬಾಚಿಕೊಂಡಿದ್ದರು.

- Advertisement -
- Advertisement -

ಇಂದು (ನವೆಂಬರ್ 9) ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ, ಅದ್ಬುತ ನಿರ್ದೇಶಕ, ನಿರ್ಮಾಪಕ ಶಂಕರ್‌ ನಾಗ್ ಅವರ ಜನ್ಮದಿನ. ಕನ್ನಡಿಗರ ನೆಚ್ಚಿನ ಆಟೋರಾಜ ನಮ್ಮಿಂದ ಭೌತಿಕವಾಗಿ ದೂರವಾಗಿ 31 ವರ್ಷಗಳು ಕಳೆದಿವೆ. ಆದರೆ, ಅವರ ಸಾಧನೆಯ ಮೂಲಕ ಜನಮಾನಸದಲ್ಲಿ ಮರೆಯದ ಛಾಪು ಮೂಡಿಸಿದ್ದಾರೆ.

ಶಂಕರ್‌ನಾಗ್ ಬದುಕಿದ್ದು 36 ವರ್ಷ, ಆದರೆ ಅವರ ಸಾಧನೆ ಇಂದಿಗೂ ಅಮರ. 12 ವರ್ಷಗಳಲ್ಲಿ ಶಂಕರ್​ನಾಗ್​, ಬರೋಬ್ಬರಿ 98 ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಅವುಗಳಲ್ಲಿ 90 ಸಿನಿಮಾಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ.

ಶಂಕರ್ ನಾಗ್ ನವೆಂಬರ್ 9, 1954ರಲ್ಲಿ ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿದರು. ಮುಂಬೈನಲ್ಲಿದ್ದ ಶಂಕರ್‌ನಾಗ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ಭಾರತೀಯ ರಾಷ್ಟ್ರೀಯ ಪ್ರಶಸ್ತಿ ವಿಜೇತ ಮರಾಠಿ ಚಿತ್ರ ‘22 ಜೂನ್ 1897’ ಕ್ಕೆ ಚಿತ್ರಕಥೆ ಬರೆದಿದ್ದರು.

ಇದನ್ನೂ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

 

1978 ರಲ್ಲಿ ತೆರೆಕಂಡ ಗಿರೀಶ ಕಾರ್ನಾಡ್ ನಿರ್ದೇಶನದ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶಂಕರ್‌ ನಾಗ್, ಹಿಂತಿರುಗಿ ನೋಡಿದ್ದೇ ಇಲ್ಲ. ನಟನಾಗಿ ಪದಾರ್ಪಣೆ ಮಾಡಿದ ಎರಡೇ ವರ್ಷಕ್ಕೆ 1980 ರಲ್ಲಿ ತಮ್ಮ 27ರ ವಯಸ್ಸಿನಲ್ಲಿ ‘ಮಿಂಚಿನ ಓಟ’ ಚಿತ್ರವನ್ನ ನಿರ್ದೇಶಿಸಿ, ನಿರ್ಮಾಣ ಮಾಡುವ ಮೂಲಕ ತಾನೊಬ್ಬ ಒಳ್ಳೆಯ ನಿರ್ದೇಶಕ ಅನ್ನೋದನ್ನ ನಿರೂಪಿಸಿದ್ದರು. ’ಮಿಂಚಿನ ಓಟ ’ದಂಥ ದರೋಡೆಕೋರರ ಸಿನಿಮಾ ನಿರ್ದೇಶಿಸಿ, ಏಳು ರಾಜ್ಯಪ್ರಶಸ್ತಿಗಳನ್ನು ಶಂಕರ್‌ನಾಗ್ ಬಾಚಿಕೊಂಡರು. ಬರೀ ಕನ್ನಡ ಚಿತ್ರರಂಗವಲ್ಲದೆ, ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ:  ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ನಂತರ ಸಂಗೀತ ಮಾಂತ್ರಿಕ ಇಳಯ ರಾಜಾರನ್ನು ಕರೆ ತಂದು ಸಂಗೀತ ಕೊಡಿಸಿದ ‘ಜನ್ಮ ಜನ್ಮದ ಅನುಬಂಧ’, ‘ಗೀತಾ’ದಂಥ ಸಿನಿಮಾಗಳ ಹಾಡುಗಳು ಇಂದಿಗೂ ಜನಪ್ರಿಯ. ಶಂಕರ್‌ ನಿರ್ದೇಶನಕ್ಕೆ ಮನಸೋತ ರಾಜ್‌ಕುಮಾರ್‌ ಕೂಡ  ತಮ್ಮ ಇಮೇಜಿನ ಹಂಗು ತೊರೆದು, ‘ಒಂದು ಮುತ್ತಿನ ಕಥೆ’ಯಲ್ಲಿ ಅಭಿನಯಿಸಿದ್ದರು.

ಸೀತಾರಾಮು, ಆಟೋರಾಜ, ಸಾಂಗ್ಲಿಯಾನ, ನೋಡಿ ಸ್ವಾಮಿ ನಾವಿರೋದೇ ಹೀಗೆ, ಆ್ಯಕ್ಸಿಡೆಂಟ್, ಸಿಬಿಐ ಶಂಕರ್‌, ಮೂಗನ ಸೇಡು, ತರ್ಕ, ಗೀತಾ, ನ್ಯಾಯಾ ಎಲ್ಲಿದೆ ಚಿತ್ರಗಳು ಸೇರಿ 90 ಚಿತ್ರಗಳ ಮೂಲಕ ಜನರ ಮನ ಗೆದ್ದವರು. ತಮ್ಮ ’ಮುನಿಯನ ಮಾದರಿ’ ಚಿತ್ರದ ಮೂಲಕ ರೈತರ, ಹಳ್ಳಿಗರ ಸಮಸ್ಯೆಗಳಿಗೆ ದನಿಯಾದರು.

PC: Mythical India

ಕಿರುತೆರೆಯಲ್ಲಿ ತನ್ನದೆ ಛಾಪು ಮೂಡಿಸಿದ್ದ ‘ಮಾಲ್ಗುಡಿ ಡೇಸ್‌’ನಂತಹ ಗಟ್ಟಿ ಧಾರಾವಾಹಿಯನ್ನು ನೀಡಿದ ಕೀರ್ತಿ ಶಂಕರ್‌ ನಾಗ್‌ ಅವರಿಗೆ ಸಲ್ಲುತ್ತದೆ. 1986ರಲ್ಲಿ ಪ್ರಸಾರವಾದ ಈ ಧಾರವಾಹಿಯ ಕ್ರೇಜ್ ಎಷ್ಟಿತ್ತು ಎಂಬುದಕ್ಕೆ  ಉದಾಹರಣೆಯೆಂದರೆ ಕಳೆದ ವರ್ಷ ಝೀ ಕನ್ನಡ ಇದರ ಕನ್ನಡ ಅವತರಣಿಕೆ ಪ್ರಸಾರ ಮಾಡಿತ್ತು.

The nostalgia inducing 'Malgudi Days': When Swami was my friend too | The News Minute

ನಟ ಶಂಕರ್‌ ನಾಗ್ ನಮ್ಮನಗಲಿದ್ದು ಸೆಪ್ಟೆಂಬರ್‌ 30, 1990 ರಂದು. ಅಂದು ಭಾರತೀಯ ಚಿತ್ರರಂಗವೇ ಆಘಾತಕ್ಕೆ ಒಳಗಾದ ದಿನ. ಇಡೀ ಚಿತ್ರರಂಗ ಒಬ್ಬ ಅಪ್ರತಿಮ ಕಲಾವಿದ, ನಟ, ನಿರ್ದೇಶಕ, ನಿರ್ಮಾಪಕ, ರಂಗಭೂಮಿ ಕಲಾವಿದ, ಕರಾಟೆ ಕಿಂಗ್ ಎಂದು ಖ್ಯಾತರಾಗಿದ್ದ ಶಂಕರ್‌ ನಾಗ್ ಅವ‌ರನ್ನು ಕಳೆದುಕೊಂಡಿತ್ತು.

ದಾವಣಗೆರೆ ಬಳಿಯ ಆನಗೋಡಿನ ಬಳಿ ಶಂಕರ್‌ನಾಗ್‌ ಕಾರು ಅಪಘಾತದಲ್ಲಿ ನಿಧನರಾದರು. ಜೋಕುಮಾರಸ್ವಾಮಿ ಚಿತ್ರದ ಚಿತ್ರೀಕರಣ ಸಮಯದಲ್ಲಿ ನಡೆದ ಈ ದುರ್ಘಟನೆಯಿಂದ ಇಡೀ ಕರುನಾಡೇ ಆಘಾತಕ್ಕೆ ಒಳಗಾಗಿತ್ತು.

ತಮ್ಮ 12 ವರ್ಷಗಳ ಸಿನಿ ಜೀವನದಲ್ಲಿ ಆಟೋ ಚಾಲಕರ ಹೀರೋ ಆಗಿ, ಯುವ ನಿರ್ದೇಶಕರ ಸ್ಪೂರ್ತಿಯಾಗಿ ಶಂಕರ್​ನಾಗ್​ ಇಂದಿಗೂ ರಾರಾಜಿಸುತ್ತಿದ್ದಾರೆ. ಇವರ ನೆನಪಲ್ಲಿ ಸ್ಥಾಪಿಸಲಾದ ‘ರಂಗಶಂಕರ’ ನಾಟಕ ರಂಗ, ಅದೆಷ್ಟೋ ಯುವ ಪ್ರತಿಭೆಗಳಿಗೆ ವೇದಿಕೆಯಾಗಿದೆ. ನಟ ಶಂಕರ್‌ ನಾಗ್ ಪತ್ನಿ ಅರುಂಧತಿ ನಾಗ್ ರಂಗಶಂಕರದ ಹೊಣೆ ಹೊತ್ತಿದ್ದಾರೆ.

ರಂಗಶಂಕರದ ಮೂಲಕ ತಮ್ಮ ರಂಗತಂಡದ ಕನಸು ಕಟ್ಟಿಕೊಂಡ ರಂಗಕರ್ಮಿ ರಾಜ್‌ಗುರು ನಾನುಗೌರಿ.ಕಾಂ ಜೊತೆ ಶಂಕರ್‌ ನಾಗ್ ಅವರು ಇವರಲ್ಲಿ ತುಂಬಿದ ಸ್ಪೂರ್ತಿ ಬಗ್ಗೆ ಹಂಚಿಕೊಂಡಿದ್ದು ಹೀಗೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” 

ರಾಜ್‌ಗುರು, ರಂಗಕರ್ಮಿ

“ಅವರ ಎಷ್ಟೋ ಸಮುದ್ರದಷ್ಟು ಕನಸುಗಳನ್ನು ನಾವು ನನಸು ಮಾಡಲಾಗದೆ ಇದ್ದರು ಸಾಸಿವೆಯಷ್ಟಾದರು ನೆರವೇರಿಸುವ ಕಾಯಕದಲ್ಲಿ ನಾವು ತೊಡಗಿದ್ದೇವೆ. ಮತ್ತು ಯಶಸ್ಸು ಕಂಡಿದ್ದೇವೆ. ಆ ಯಶಸ್ಸಿನ ಸಿಂಹಪಾಲು ಶಂಕ್ರಣ್ಣನಿಗೆ. ನಾವು ನಾಮಕಾವಸ್ತೆ ಅಷ್ಟೇ” ಎಂದು ಶಂಕರ್‌ ನಾಗ್ ಅವರಿಗೆ ನಮನ ಸಲ್ಲಿಸುತ್ತಾರೆ.

ನಮ್ಮ ಮೆಟ್ರೋ ಯೋಜನೆ ಶಂಕರ್‌ ನಾಗ್ ಅವರ ಕನಸಿನ ಕೂಸಾಗಿತ್ತು. ಒಬ್ಬ ವ್ಯಕ್ತಿ ತಮ್ಮ ಪೂರ್ತಿ ಜೀವನದಲ್ಲಿ ಸಾಧಿಸಲಾಗದ ಅಗಾಧ ಕೆಲಸಗಳನ್ನು ಶಂಕರ್‌ ನಾಗ್ 36 ವರ್ಷಗಳಲ್ಲಿ ಸಾಧಿಸಿದ್ದಾರೆ.

ಶಂಕರ್‌ ನಾಗ್ ಅವರ ಜನ್ಮದಿನದ ಹಿನ್ನೆಲೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ಗಣ್ಯರು ನಟನನ್ನು ನೆನಪಿಸಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ’ಇಂದು ಕನ್ನಡ ಚಿತ್ರರಂಗದ ಅಪೂರ್ವ ನಟ, ನಿರ್ದೇಶಕ, ಅಪ್ರತಿಮ ದೂರದೃಷ್ಟಿಯುಳ್ಳ ತಾಂತ್ರಿಕ ನಿಪುಣರಾಗಿದ್ದ ಶಂಕರ್‌ ನಾಗ್ ಅವರ ಜಯಂತಿ. ಅವರಿಗೆ ನನ್ನ ಶ್ರದ್ಧಾಪೂರ್ವಕ ನಮನಗಳು. ಸಿನಿಮಾ, ರಂಗಭೂಮಿಯಲ್ಲಿ ಬೆರಗು ಮೂಡಿಸುವ ಅನೇಕ ಪ್ರಯೋಗಗಳನ್ನು ನಡೆಸಿದ್ದ ಅವರು ಸದಾ ಚೈತನ್ಯ ಚಿಲುಮೆ ಆಗಿದ್ದರು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...