Homeಮುಖಪುಟಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

- Advertisement -
- Advertisement -

ಭಾರತದಲ್ಲಿ ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ ನೀಡಲಾಗುತ್ತಿದೆ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಉಂಟಾಗಿದೆ ಎಂದು ಫೈನಾನ್ಶಿಯಲ್ ಟೈಮ್ಸ್‌ ವರದಿಯು ಉಲ್ಲೇಖಿಸಿದೆ. ವಿರೋಧ ಪಕ್ಷಗಳ ಮೇಲಿನ ದಾಳಿ ಮತ್ತು ಲೋಕಸಭೆ ಚುನಾವಣೆಗೆ ಅದರ ಪರಿಣಾಮಗಳನ್ನು ಉಲ್ಲೇಖಿಸಿ, ನಿನ್ನೆ ಫೈನಾನ್ಶಿಯಲ್ ಟೈಮ್ಸ್‌ ಸಂಪಾದಕೀಯವನ್ನು ಬರೆದಿದ್ದು, ಅದರಲ್ಲಿ ಭಾರತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು “ಪ್ರಜಾಪ್ರಭುತ್ವದ ತಾಯಿ” ಎಂದು ಕರೆಯಬಹುದು, ಆದರೆ ದೇಶದ ಪ್ರಜಾಪ್ರಭುತ್ವವು “ಅನಾರೋಗ್ಯ”ದಲ್ಲಿದೆ ಎಂದು ಸಂಪಾದಕೀಯ ಹೇಳಿದೆ. ಇದು “ಮೋದಿಯವರ ಬಿಜೆಪಿಯ ಆಡಳಿತ” ಮತ್ತು ‘ಸ್ವಾತಂತ್ರ್ಯ ಅಭಿವ್ಯಕ್ತಿ’ ಮತ್ತು ವಿರೋಧ ಪಕ್ಷಗಳ ಮೇಲಿನ ದಾಳಿ ಅದರಲ್ಲೂ ಮೋದಿಯ ಎರಡನೇ ಅಧಿಕಾರಾವಧಿಯಲ್ಲಿ ಹೆಚ್ಚಳವಾಗಿರುವುದನ್ನು ಫೈನಾನ್ಶಿಯಲ್ ಟೈಮ್ಸ್‌ ಟೀಕಿಸಿದೆ.

ಸಾಮಾನ್ಯವಾಗಿ ತೆರಿಗೆ ಅಥವಾ ಕಾನೂನು ಅಧಿಕಾರಿಗಳಿಂದ ಕಿರುಕುಳವು ಸರ್ಕಾರದ ವಿಮರ್ಶಕರಿಗೆ ಸಾಮಾನ್ಯವಾಗಿದೆ, ಸ್ವತಂತ್ರ ಮಾಧ್ಯಮಗಳು, ಶಿಕ್ಷಣ ತಜ್ಞರು, ಅಥವಾ ನಾಗರಿಕ ಸಮಾಜದ ಗುಂಪುಗಳ ಮೇಲೆ ಈ ರೀತಿ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿಯ ಹಿಂದೂ ರಾಷ್ಟ್ರೀಯತೆಯು ಭಾರತದ ಜಾತ್ಯತೀತ ಪ್ರಜಾಪ್ರಭುತ್ವದ ಸಂಪ್ರದಾಯವನ್ನು ನಾಶಪಡಿಸಿದೆ ಎಂದು ಸಂಪಾದಕೀಯವು ಹೇಳಿದೆ.

ಚುನಾವಣೆ ಸಮೀಪಿಸುತ್ತಿರುವಂತೆ ವಿರೋಧ ಪಕ್ಷಗಳು ಮತ್ತು ರಾಜಕಾರಣಿಗಳನ್ನು ನಿಗ್ರಹಿಸಲು ಜಾರಿ ನಿರ್ದೇಶನಾಲಯಗಳ ಹೆಚ್ಚಳದ ಬಳಕೆ ಮತ್ತು ಈ ಬಗ್ಗೆ ವಿರೋಧಪಕ್ಷದ ಪ್ರಬಲ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಉಲ್ಲೇಖಿಸಿದೆ.

ಸಂಪಾದಕೀಯದಲ್ಲಿ ತನ್ನ ಬ್ಯಾಂಕ್ ಖಾತೆಗಳನ್ನು ತೆರಿಗೆ ವಿವಾದದಿಂದ ವಾರಗಳವರೆಗೆ ಸ್ಥಗಿತಗೊಳಿಸಲಾಗಿದೆ ಮತ್ತು ಪಕ್ಷವು ಪ್ರಚಾರ, ಜಾಹೀರಾತು ಮತ್ತು ಪ್ರಯಾಣಕ್ಕಾಗಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ಉಲ್ಲೇಖಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾನನಷ್ಟ ಪ್ರಕರಣ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ಬಗ್ಗೆ ಕೂಡ ಉಲ್ಲೇಖಿಸಿದೆ.

ಆಡಳಿತ ಪಕ್ಷವು ವಿರೋಧ ಪಕ್ಷಗಳನ್ನು ತೊಡೆದು ಹಾಕುವ ಅಗತ್ಯವನ್ನು ನೋಡುತ್ತಿದೆ. ಬಿಜೆಪಿ ಮೂರನೇ ಬಾರಿಗೆ ಅಧಿಕಾರದೆಡೆ ದಾಪುಗಾಲಿಡುತ್ತಿದೆ ಎಂಬ ಬಗ್ಗೆ ಅಭಿಪ್ರಾಯ ಸಮೀಕ್ಷೆಗಳು ಸೂಚಿಸಿವೆ. ಇದು ಪ್ರತಿಸ್ಪರ್ಧಿಗಳು ಬಲವಾದ ಪರ್ಯಾಯವನ್ನು ಪ್ರಸ್ತುತಪಡಿಸಲು ವಿಫಲರಾಗಿದ್ದಾರೆ ಎಂದು ಅದು ಹೇಳಿದೆ. ಇಂಡಿಯಾ ಮೈತ್ರಿಕೂಟದ ಬಗ್ಗೆ ಕೂಡ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ಪ್ರಪಂಚದ ಇತರ ಭಾಗಗಳಲ್ಲಿನ ಬಲವಾದ ನಾಯಕರಂತೆಯೇ ಮೋದಿ ಮತ್ತು ಅವರ ಬೆಂಬಲಿಗರು ಒಟ್ಟು ರಾಜಕೀಯ ಪ್ರಾಬಲ್ಯವನ್ನು ಸಾಧಿಸುವ ಬಯಕೆ ಹೊಂದಿದ್ದಾರೆ. ಮೋದಿಯವರ ಪ್ರಜಾಪ್ರಭುತ್ವದ ಪರವಾದ ಮಾತುಗಳು ಮತ್ತು ವಾಸ್ತವತೆಯ ನಡುವಿನ ವಿಶಾಲವಾದ ಅಂತರವನ್ನು ಉಲ್ಲೇಖಿಸಿದೆ.

ಅದಾನಿ ಗ್ರೂಪ್‌ನ ಗೌಪ್ಯ ಹೂಡಿಕೆದಾರರ ಕುರಿತು ಆಗಸ್ಟ್‌ನಲ್ಲಿ ಪ್ರಕಟವಾದ ವರದಿಯ ಪ್ರಾಥಮಿಕ ತನಿಖೆಯ ಭಾಗವಾಗಿ ಗುಜರಾತ್ ಪೊಲೀಸರು ಕಳೆದ ವರ್ಷ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರಿಗೆ ನೋಟಿಸ್‌ಗಳನ್ನು ನೀಡಿದ್ದರು ಎಂಬುದನ್ನು ಗಮನಿಸಬೇಕು. ಇಬ್ಬರೂ ಪತ್ರಕರ್ತರು ಅಂತಿಮವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...