Homeಮುಖಪುಟಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ: ಫೈನಾನ್ಶಿಯಲ್ ಟೈಮ್ಸ್‌

- Advertisement -
- Advertisement -

ಭಾರತದಲ್ಲಿ ಮೋದಿ ಆಡಳಿತದಲ್ಲಿ ಸ್ವತಂತ್ರ ಮಾದ್ಯಮಗಳಿಗೆ ಕಿರುಕುಳ ನೀಡಲಾಗುತ್ತಿದೆ, ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಉಂಟಾಗಿದೆ ಎಂದು ಫೈನಾನ್ಶಿಯಲ್ ಟೈಮ್ಸ್‌ ವರದಿಯು ಉಲ್ಲೇಖಿಸಿದೆ. ವಿರೋಧ ಪಕ್ಷಗಳ ಮೇಲಿನ ದಾಳಿ ಮತ್ತು ಲೋಕಸಭೆ ಚುನಾವಣೆಗೆ ಅದರ ಪರಿಣಾಮಗಳನ್ನು ಉಲ್ಲೇಖಿಸಿ, ನಿನ್ನೆ ಫೈನಾನ್ಶಿಯಲ್ ಟೈಮ್ಸ್‌ ಸಂಪಾದಕೀಯವನ್ನು ಬರೆದಿದ್ದು, ಅದರಲ್ಲಿ ಭಾರತದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು “ಪ್ರಜಾಪ್ರಭುತ್ವದ ತಾಯಿ” ಎಂದು ಕರೆಯಬಹುದು, ಆದರೆ ದೇಶದ ಪ್ರಜಾಪ್ರಭುತ್ವವು “ಅನಾರೋಗ್ಯ”ದಲ್ಲಿದೆ ಎಂದು ಸಂಪಾದಕೀಯ ಹೇಳಿದೆ. ಇದು “ಮೋದಿಯವರ ಬಿಜೆಪಿಯ ಆಡಳಿತ” ಮತ್ತು ‘ಸ್ವಾತಂತ್ರ್ಯ ಅಭಿವ್ಯಕ್ತಿ’ ಮತ್ತು ವಿರೋಧ ಪಕ್ಷಗಳ ಮೇಲಿನ ದಾಳಿ ಅದರಲ್ಲೂ ಮೋದಿಯ ಎರಡನೇ ಅಧಿಕಾರಾವಧಿಯಲ್ಲಿ ಹೆಚ್ಚಳವಾಗಿರುವುದನ್ನು ಫೈನಾನ್ಶಿಯಲ್ ಟೈಮ್ಸ್‌ ಟೀಕಿಸಿದೆ.

ಸಾಮಾನ್ಯವಾಗಿ ತೆರಿಗೆ ಅಥವಾ ಕಾನೂನು ಅಧಿಕಾರಿಗಳಿಂದ ಕಿರುಕುಳವು ಸರ್ಕಾರದ ವಿಮರ್ಶಕರಿಗೆ ಸಾಮಾನ್ಯವಾಗಿದೆ, ಸ್ವತಂತ್ರ ಮಾಧ್ಯಮಗಳು, ಶಿಕ್ಷಣ ತಜ್ಞರು, ಅಥವಾ ನಾಗರಿಕ ಸಮಾಜದ ಗುಂಪುಗಳ ಮೇಲೆ ಈ ರೀತಿ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿಯ ಹಿಂದೂ ರಾಷ್ಟ್ರೀಯತೆಯು ಭಾರತದ ಜಾತ್ಯತೀತ ಪ್ರಜಾಪ್ರಭುತ್ವದ ಸಂಪ್ರದಾಯವನ್ನು ನಾಶಪಡಿಸಿದೆ ಎಂದು ಸಂಪಾದಕೀಯವು ಹೇಳಿದೆ.

ಚುನಾವಣೆ ಸಮೀಪಿಸುತ್ತಿರುವಂತೆ ವಿರೋಧ ಪಕ್ಷಗಳು ಮತ್ತು ರಾಜಕಾರಣಿಗಳನ್ನು ನಿಗ್ರಹಿಸಲು ಜಾರಿ ನಿರ್ದೇಶನಾಲಯಗಳ ಹೆಚ್ಚಳದ ಬಳಕೆ ಮತ್ತು ಈ ಬಗ್ಗೆ ವಿರೋಧಪಕ್ಷದ ಪ್ರಬಲ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಉಲ್ಲೇಖಿಸಿದೆ.

ಸಂಪಾದಕೀಯದಲ್ಲಿ ತನ್ನ ಬ್ಯಾಂಕ್ ಖಾತೆಗಳನ್ನು ತೆರಿಗೆ ವಿವಾದದಿಂದ ವಾರಗಳವರೆಗೆ ಸ್ಥಗಿತಗೊಳಿಸಲಾಗಿದೆ ಮತ್ತು ಪಕ್ಷವು ಪ್ರಚಾರ, ಜಾಹೀರಾತು ಮತ್ತು ಪ್ರಯಾಣಕ್ಕಾಗಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ಉಲ್ಲೇಖಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾನನಷ್ಟ ಪ್ರಕರಣ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವ ಬಗ್ಗೆ ಕೂಡ ಉಲ್ಲೇಖಿಸಿದೆ.

ಆಡಳಿತ ಪಕ್ಷವು ವಿರೋಧ ಪಕ್ಷಗಳನ್ನು ತೊಡೆದು ಹಾಕುವ ಅಗತ್ಯವನ್ನು ನೋಡುತ್ತಿದೆ. ಬಿಜೆಪಿ ಮೂರನೇ ಬಾರಿಗೆ ಅಧಿಕಾರದೆಡೆ ದಾಪುಗಾಲಿಡುತ್ತಿದೆ ಎಂಬ ಬಗ್ಗೆ ಅಭಿಪ್ರಾಯ ಸಮೀಕ್ಷೆಗಳು ಸೂಚಿಸಿವೆ. ಇದು ಪ್ರತಿಸ್ಪರ್ಧಿಗಳು ಬಲವಾದ ಪರ್ಯಾಯವನ್ನು ಪ್ರಸ್ತುತಪಡಿಸಲು ವಿಫಲರಾಗಿದ್ದಾರೆ ಎಂದು ಅದು ಹೇಳಿದೆ. ಇಂಡಿಯಾ ಮೈತ್ರಿಕೂಟದ ಬಗ್ಗೆ ಕೂಡ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.

ಪ್ರಪಂಚದ ಇತರ ಭಾಗಗಳಲ್ಲಿನ ಬಲವಾದ ನಾಯಕರಂತೆಯೇ ಮೋದಿ ಮತ್ತು ಅವರ ಬೆಂಬಲಿಗರು ಒಟ್ಟು ರಾಜಕೀಯ ಪ್ರಾಬಲ್ಯವನ್ನು ಸಾಧಿಸುವ ಬಯಕೆ ಹೊಂದಿದ್ದಾರೆ. ಮೋದಿಯವರ ಪ್ರಜಾಪ್ರಭುತ್ವದ ಪರವಾದ ಮಾತುಗಳು ಮತ್ತು ವಾಸ್ತವತೆಯ ನಡುವಿನ ವಿಶಾಲವಾದ ಅಂತರವನ್ನು ಉಲ್ಲೇಖಿಸಿದೆ.

ಅದಾನಿ ಗ್ರೂಪ್‌ನ ಗೌಪ್ಯ ಹೂಡಿಕೆದಾರರ ಕುರಿತು ಆಗಸ್ಟ್‌ನಲ್ಲಿ ಪ್ರಕಟವಾದ ವರದಿಯ ಪ್ರಾಥಮಿಕ ತನಿಖೆಯ ಭಾಗವಾಗಿ ಗುಜರಾತ್ ಪೊಲೀಸರು ಕಳೆದ ವರ್ಷ ಇಬ್ಬರು ಫೈನಾನ್ಷಿಯಲ್ ಟೈಮ್ಸ್ ಪತ್ರಕರ್ತರಿಗೆ ನೋಟಿಸ್‌ಗಳನ್ನು ನೀಡಿದ್ದರು ಎಂಬುದನ್ನು ಗಮನಿಸಬೇಕು. ಇಬ್ಬರೂ ಪತ್ರಕರ್ತರು ಅಂತಿಮವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...