Homeಕವನನನ್ನ ದೇಶದಲ್ಲಿ... ಚಾಂದ್ ಪಾಷ ಅವರ ಎರಡು ಕವಿತೆಗಳು

ನನ್ನ ದೇಶದಲ್ಲಿ… ಚಾಂದ್ ಪಾಷ ಅವರ ಎರಡು ಕವಿತೆಗಳು

- Advertisement -
- Advertisement -

ನನ್ನ ದೇಶದಲ್ಲಿ…

ನಿದ್ರೆಯ ನೆರಳಿಗೂ ಆಕಾಶದ ಬೆರಳಿಗೂ ಒಲವಾಗಿ
ನೆಲವೆಲ್ಲ ತೇವ ನುಂಗಿದ ಬಟ್ಟೆಯಾಗಿರಲು,
ತಿಳಿ ಗುಲಾಬಿ ಬಣ್ಣದ ತೇರು ಎಳೆಯುವಷ್ಟರಲ್ಲಿ
ನಮ್ಮೂರ ಕೊರ್ಮನ ಕೈ ತುಂಡಾಗುತ್ತದೆ.
ಕೆಂಡ ನುಂಗಿದ ಕಣ್ಣು, ಸೇಂದಿ ಹೀರಿದ ನಾಲಿಗೆ
ಜಪ ತಪಗಳ ಸ್ಖಲಿನಿಗಳ ಸೆರೆಯಾಳು!

ಗಾಳಿಯ ಜೊತೆ ಸೆಣಸಾಡಿ ಗಾಯಾಳು ತಾಯಿಯ ಎದೆಹಾಲಲ್ಲೂ ನೆತ್ತರದ ಬಣ್ಣ,
ಬೆಂಕಿ ಬಿದ್ದವರ ಮನೆಯ ಕಣ್ಣಲ್ಲೂ ನೀರು ಖಾಲಿಯಾಗಿದೆ!
ಸೊರಗಿದ ಸೊಬಗು ಸೋರುವ ಧರ್ಮತ್ವದ ಗಂಡಸುತನ
ಊರ ದೇವರ ಹೆಣ ಹೆರಲು ಅವ್ವ ಮತ್ತೆ ಬಸಿರಾಗುವಳು!

ಬೀದಿ ಗುಡಿಸುವ ಬಿಸಿಲು ನೆರಳಿನ ನೆತ್ತಿಗೆ ಮೊಳೆ ಜಡಿದು
ದವಾಖಾನೆಗೆ ದಾಖಲಾಗುವಷ್ಟರಲ್ಲಿ ಮುಟ್ಟಿಸಿಕೊಂಡವನು
ಮಡಿಯಾಗುವ ಮೊದಲೆ ಮುಟ್ಟಿದವನು ಹೆಣವಾಗುತ್ತಾನೆ!

ಹೂಳುವ ಜಾಗಕ್ಕೂ ಜಾತಿ ಬೇಲಿ, ಮನುಷ್ಯತ್ವ ಪೂರ್ತಿ ಖಾಲಿ!
ಎಲ್ಲರದೂ ಕೊಲ್ಲುವುದೇ ಕಾಯಕ ಆದರೂ ಇಲ್ಲಿ ಅಸಂಖ್ಯಾತರು ನಿರುದ್ಯೋಗಿಗಳೆ,
ಹಕ್ಕಿಗೆ ಗುಂಡಿಡುವ ಸಸ್ಯಹಾರತ್ವದ ಸರಕಿಗೆ ಈ ನೆಲ ತೀರಾ ಸಲೀಸಾದ ಸ್ವರ್ಗ!
ಅದೆಷ್ಟು ಬಾರಿ ಕೊಂದರೂ, ನೊಂದರೂ ಎದೆಸೀಳಿ ದೇಶಾಭಿಮಾನ ತೋರುತ್ತಲೇ ಒಂದು ವರ್ಗ!

ಅರೆನಗ್ನ ಪ್ರತಿಮೆ

ಉಸಿರು ಹಿಡಿದು ಎದೆಗೊದ್ದಾಗದೆಲ್ಲ ಬಿದ್ದದ್ದು
ರಾಮರಾಜ್ಯದ ಕನಸು.
ಚೂರುಗಳ ಆಯುತ್ತಾ ಹೋದಂತೆ ಸಿಕ್ಕಿದ್ದು ಹಸಿಗಾಯಗಳ ಹೆರಿಗೆ ನೋವು
ಹಸಿದ ಕಂಬನಿಗಳು ಅಳುತ್ತಲೇ ಇವೆ
ಕಣ್ಣರೆಪ್ಪೆ ಹೊಲಿದು ಬಿಡಿ,
ಬಟ್ಟೆ ಇಲ್ಲದವರ ಬೇನೆ ಕಂಡು ಚರಕವೂ ಸ್ತಬ್ಧವಾಗಿದೆ.

ರಕ್ತ ಮತ್ತು ಓಕುಳಿ ಒಂದೇ ಎನ್ನುವರ ಮನೆಯ ಹಬ್ಬದೂಟ ತಿನ್ನದೆ,
ಉಪವಾಸ ಕೂತವನ ಕಣ್ಣೊಳಗೂ ಹಸಿವಿತ್ತು.
ದಾರಿಗಳಿಗೆ ಹೆಜ್ಜೆ ಮೂಡುವ ಹೊತ್ತಲ್ಲಿ,
ಚಪ್ಪಲಿಗೆ ಚಲನೆ ಬರುತ್ತದೆ.
ಕಡಲ ಹನಿಗೆ ಉಪ್ಪು ಕರಗುವ ಹಾಗೆ.
ಕರದಲ್ಲೇ ಕರಗಿ ಹೋಗುತ್ತಾನೆ ನೀರಂತ ಮನುಷ್ಯ!

ಗರೀಬಿಯ ಗಾಯಕ್ಕೆ ಉಪ್ಪು ಸವರುವಾಗ
ಮರಿಯಾದ ಹತ್ಯೆಯಲಿ ಮಗಳು ಸತ್ತಾಗ,
ಬಡವನ ಬೆವರು, ಹಣವಂತನ ಹೆಣವ ತೊಳೆಯುವಾಗ,
ಅಲ್ಲೊಂದು ಪುತ್ಥಳಿಯ ಕೈಗೆ ಪೊರಕೆ ಬರುತ್ತದೆ.
ಕನ್ನಡಕ ಇನ್ನಷ್ಟು ಧೂಳಾಗುತ್ತದೆ!

ತಿಂಗಳೊಂದರ ಎರಡನೇ ತಾರೀಖಿಗೆ
ಹುಟ್ಟುವ ಈ ಪುತ್ಥಳಿ,
ಪ್ರತಿನಿತ್ಯವೂ ಸಾಯುತ್ತಿದೆ ಕಂಡವರ ಗುಂಡಿನ ಏಟಿಗೆ
ನೆತ್ತರ ಕಂಡವರು ರೋದಿಸಿದರೆ,
ಉಂಡವರು ಕೊಂದವನ ಕೊಂಡಾಡುತ್ತಾರೆ.

ಕೊಲ್ಲುವ ನಿಮ್ಮನ್ನು ಕೊಲ್ಲಲು ನಮಗೆ ಗುಂಡೆ ಬೇಕಾಗಿಲ್ಲ.
ಲೇಖನಿಯ ತುದಿಯ ಒಂದಿಷ್ಟು ಮಸಿಯು ಮನಸ್ಸು ಮಾಡಿದರೆ ಸಾಕು,
ಹೆಜ್ಜೆಗೊಂದು ಹೆಣ ಬೀಳುತ್ತದೆ.
ಆದರೆ, ನಾವು ಕೊಲ್ಲುವುದಿಲ್ಲ ಏಕೆಂದರೆ..
ನೀವೇ ಕೊಂದ ಗಾಂಧಿಯನ್ನು ನಂಬಿದವರು ನಾವು!

ಉರಿವ ನಕ್ಷತ್ರಗಳು ಉರಿದು ಬಿದ್ದು
ಬಿಸಿಲ ತಿನ್ನುವ ಬೀದಿ ಬಿಕ್ಕಳಿಸಿದರೂ
ಈ ಪುತ್ಥಳಿಗೆ ಮಾತ್ರ ಪುಢಾರಿತನದ ಇನಾಮು.
ಶಾಂತಿಯು ನಿತ್ಯ ಸಾಯುವಾಗ ಗುಂಡಿಗೇನು ಬರಗಾಲ
ಈಗೀಗ ಈ ಅರೆನಗ್ನ ಪ್ರತಿಮೆಗೂ ನಾಚಿಕೆಯಾಗಿರಬೇಕು
“ಮೇರಾ ಭಾರತ್ ಮಹಾನ್….” ಎನ್ನಲು!?

 

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್

ಮೂಲತಃ ಕಲಬುರ್ಗಿಯವರಾದ ಚಾಂದ್ ಪಾಷ ಸೂಕ್ಷ್ಮ ಸಂವೇದನೆಯ ಕವಿ. ಬೆಂಗಳೂರು ವಿ. ವಿ. ಯಲ್ಲಿ ಕನ್ನಡ ಎಂ. ಎ. ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ದಿ ಆಕ್ಸ್‌ಪsರ್ಡ್ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಚೊಚ್ಚಲ ಕವನ ಸಂಕಲನ ‘ಮೌನದ ಮಳೆ’ 2015ರಲ್ಲಿ ಪ್ರಕಟವಾಯಿತು. ಚಿತ್ರ ಚಿಗುರುವ ಹೊತ್ತು ಇತ್ತೀಚಿನ ಕವನ ಸಂಕಲನ. ಚಾಂದ್ ಪಾಷ ಅವರ ಎರಡು ಕವಿತೆಗಳು ಇಲ್ಲಿವೆ


ಇದನ್ನೂ ಓದಿ: ಓದಲಿಕ್ಕಿದೆ ಕಾರಣ ಇಪ್ಪತ್ತೊಂದು! 2021ರಲ್ಲಿನ ನಿರೀಕ್ಷಿತ ಪುಸ್ತಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...