Homeಕವನನನ್ನ ದೇಶದಲ್ಲಿ... ಚಾಂದ್ ಪಾಷ ಅವರ ಎರಡು ಕವಿತೆಗಳು

ನನ್ನ ದೇಶದಲ್ಲಿ… ಚಾಂದ್ ಪಾಷ ಅವರ ಎರಡು ಕವಿತೆಗಳು

- Advertisement -
- Advertisement -

ನನ್ನ ದೇಶದಲ್ಲಿ…

ನಿದ್ರೆಯ ನೆರಳಿಗೂ ಆಕಾಶದ ಬೆರಳಿಗೂ ಒಲವಾಗಿ
ನೆಲವೆಲ್ಲ ತೇವ ನುಂಗಿದ ಬಟ್ಟೆಯಾಗಿರಲು,
ತಿಳಿ ಗುಲಾಬಿ ಬಣ್ಣದ ತೇರು ಎಳೆಯುವಷ್ಟರಲ್ಲಿ
ನಮ್ಮೂರ ಕೊರ್ಮನ ಕೈ ತುಂಡಾಗುತ್ತದೆ.
ಕೆಂಡ ನುಂಗಿದ ಕಣ್ಣು, ಸೇಂದಿ ಹೀರಿದ ನಾಲಿಗೆ
ಜಪ ತಪಗಳ ಸ್ಖಲಿನಿಗಳ ಸೆರೆಯಾಳು!

ಗಾಳಿಯ ಜೊತೆ ಸೆಣಸಾಡಿ ಗಾಯಾಳು ತಾಯಿಯ ಎದೆಹಾಲಲ್ಲೂ ನೆತ್ತರದ ಬಣ್ಣ,
ಬೆಂಕಿ ಬಿದ್ದವರ ಮನೆಯ ಕಣ್ಣಲ್ಲೂ ನೀರು ಖಾಲಿಯಾಗಿದೆ!
ಸೊರಗಿದ ಸೊಬಗು ಸೋರುವ ಧರ್ಮತ್ವದ ಗಂಡಸುತನ
ಊರ ದೇವರ ಹೆಣ ಹೆರಲು ಅವ್ವ ಮತ್ತೆ ಬಸಿರಾಗುವಳು!

ಬೀದಿ ಗುಡಿಸುವ ಬಿಸಿಲು ನೆರಳಿನ ನೆತ್ತಿಗೆ ಮೊಳೆ ಜಡಿದು
ದವಾಖಾನೆಗೆ ದಾಖಲಾಗುವಷ್ಟರಲ್ಲಿ ಮುಟ್ಟಿಸಿಕೊಂಡವನು
ಮಡಿಯಾಗುವ ಮೊದಲೆ ಮುಟ್ಟಿದವನು ಹೆಣವಾಗುತ್ತಾನೆ!

ಹೂಳುವ ಜಾಗಕ್ಕೂ ಜಾತಿ ಬೇಲಿ, ಮನುಷ್ಯತ್ವ ಪೂರ್ತಿ ಖಾಲಿ!
ಎಲ್ಲರದೂ ಕೊಲ್ಲುವುದೇ ಕಾಯಕ ಆದರೂ ಇಲ್ಲಿ ಅಸಂಖ್ಯಾತರು ನಿರುದ್ಯೋಗಿಗಳೆ,
ಹಕ್ಕಿಗೆ ಗುಂಡಿಡುವ ಸಸ್ಯಹಾರತ್ವದ ಸರಕಿಗೆ ಈ ನೆಲ ತೀರಾ ಸಲೀಸಾದ ಸ್ವರ್ಗ!
ಅದೆಷ್ಟು ಬಾರಿ ಕೊಂದರೂ, ನೊಂದರೂ ಎದೆಸೀಳಿ ದೇಶಾಭಿಮಾನ ತೋರುತ್ತಲೇ ಒಂದು ವರ್ಗ!

ಅರೆನಗ್ನ ಪ್ರತಿಮೆ

ಉಸಿರು ಹಿಡಿದು ಎದೆಗೊದ್ದಾಗದೆಲ್ಲ ಬಿದ್ದದ್ದು
ರಾಮರಾಜ್ಯದ ಕನಸು.
ಚೂರುಗಳ ಆಯುತ್ತಾ ಹೋದಂತೆ ಸಿಕ್ಕಿದ್ದು ಹಸಿಗಾಯಗಳ ಹೆರಿಗೆ ನೋವು
ಹಸಿದ ಕಂಬನಿಗಳು ಅಳುತ್ತಲೇ ಇವೆ
ಕಣ್ಣರೆಪ್ಪೆ ಹೊಲಿದು ಬಿಡಿ,
ಬಟ್ಟೆ ಇಲ್ಲದವರ ಬೇನೆ ಕಂಡು ಚರಕವೂ ಸ್ತಬ್ಧವಾಗಿದೆ.

ರಕ್ತ ಮತ್ತು ಓಕುಳಿ ಒಂದೇ ಎನ್ನುವರ ಮನೆಯ ಹಬ್ಬದೂಟ ತಿನ್ನದೆ,
ಉಪವಾಸ ಕೂತವನ ಕಣ್ಣೊಳಗೂ ಹಸಿವಿತ್ತು.
ದಾರಿಗಳಿಗೆ ಹೆಜ್ಜೆ ಮೂಡುವ ಹೊತ್ತಲ್ಲಿ,
ಚಪ್ಪಲಿಗೆ ಚಲನೆ ಬರುತ್ತದೆ.
ಕಡಲ ಹನಿಗೆ ಉಪ್ಪು ಕರಗುವ ಹಾಗೆ.
ಕರದಲ್ಲೇ ಕರಗಿ ಹೋಗುತ್ತಾನೆ ನೀರಂತ ಮನುಷ್ಯ!

ಗರೀಬಿಯ ಗಾಯಕ್ಕೆ ಉಪ್ಪು ಸವರುವಾಗ
ಮರಿಯಾದ ಹತ್ಯೆಯಲಿ ಮಗಳು ಸತ್ತಾಗ,
ಬಡವನ ಬೆವರು, ಹಣವಂತನ ಹೆಣವ ತೊಳೆಯುವಾಗ,
ಅಲ್ಲೊಂದು ಪುತ್ಥಳಿಯ ಕೈಗೆ ಪೊರಕೆ ಬರುತ್ತದೆ.
ಕನ್ನಡಕ ಇನ್ನಷ್ಟು ಧೂಳಾಗುತ್ತದೆ!

ತಿಂಗಳೊಂದರ ಎರಡನೇ ತಾರೀಖಿಗೆ
ಹುಟ್ಟುವ ಈ ಪುತ್ಥಳಿ,
ಪ್ರತಿನಿತ್ಯವೂ ಸಾಯುತ್ತಿದೆ ಕಂಡವರ ಗುಂಡಿನ ಏಟಿಗೆ
ನೆತ್ತರ ಕಂಡವರು ರೋದಿಸಿದರೆ,
ಉಂಡವರು ಕೊಂದವನ ಕೊಂಡಾಡುತ್ತಾರೆ.

ಕೊಲ್ಲುವ ನಿಮ್ಮನ್ನು ಕೊಲ್ಲಲು ನಮಗೆ ಗುಂಡೆ ಬೇಕಾಗಿಲ್ಲ.
ಲೇಖನಿಯ ತುದಿಯ ಒಂದಿಷ್ಟು ಮಸಿಯು ಮನಸ್ಸು ಮಾಡಿದರೆ ಸಾಕು,
ಹೆಜ್ಜೆಗೊಂದು ಹೆಣ ಬೀಳುತ್ತದೆ.
ಆದರೆ, ನಾವು ಕೊಲ್ಲುವುದಿಲ್ಲ ಏಕೆಂದರೆ..
ನೀವೇ ಕೊಂದ ಗಾಂಧಿಯನ್ನು ನಂಬಿದವರು ನಾವು!

ಉರಿವ ನಕ್ಷತ್ರಗಳು ಉರಿದು ಬಿದ್ದು
ಬಿಸಿಲ ತಿನ್ನುವ ಬೀದಿ ಬಿಕ್ಕಳಿಸಿದರೂ
ಈ ಪುತ್ಥಳಿಗೆ ಮಾತ್ರ ಪುಢಾರಿತನದ ಇನಾಮು.
ಶಾಂತಿಯು ನಿತ್ಯ ಸಾಯುವಾಗ ಗುಂಡಿಗೇನು ಬರಗಾಲ
ಈಗೀಗ ಈ ಅರೆನಗ್ನ ಪ್ರತಿಮೆಗೂ ನಾಚಿಕೆಯಾಗಿರಬೇಕು
“ಮೇರಾ ಭಾರತ್ ಮಹಾನ್….” ಎನ್ನಲು!?

 

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್

ಮೂಲತಃ ಕಲಬುರ್ಗಿಯವರಾದ ಚಾಂದ್ ಪಾಷ ಸೂಕ್ಷ್ಮ ಸಂವೇದನೆಯ ಕವಿ. ಬೆಂಗಳೂರು ವಿ. ವಿ. ಯಲ್ಲಿ ಕನ್ನಡ ಎಂ. ಎ. ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ದಿ ಆಕ್ಸ್‌ಪsರ್ಡ್ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಚೊಚ್ಚಲ ಕವನ ಸಂಕಲನ ‘ಮೌನದ ಮಳೆ’ 2015ರಲ್ಲಿ ಪ್ರಕಟವಾಯಿತು. ಚಿತ್ರ ಚಿಗುರುವ ಹೊತ್ತು ಇತ್ತೀಚಿನ ಕವನ ಸಂಕಲನ. ಚಾಂದ್ ಪಾಷ ಅವರ ಎರಡು ಕವಿತೆಗಳು ಇಲ್ಲಿವೆ


ಇದನ್ನೂ ಓದಿ: ಓದಲಿಕ್ಕಿದೆ ಕಾರಣ ಇಪ್ಪತ್ತೊಂದು! 2021ರಲ್ಲಿನ ನಿರೀಕ್ಷಿತ ಪುಸ್ತಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...