Homeಕವನನನ್ನ ದೇಶದಲ್ಲಿ... ಚಾಂದ್ ಪಾಷ ಅವರ ಎರಡು ಕವಿತೆಗಳು

ನನ್ನ ದೇಶದಲ್ಲಿ… ಚಾಂದ್ ಪಾಷ ಅವರ ಎರಡು ಕವಿತೆಗಳು

- Advertisement -
- Advertisement -

ನನ್ನ ದೇಶದಲ್ಲಿ…

ನಿದ್ರೆಯ ನೆರಳಿಗೂ ಆಕಾಶದ ಬೆರಳಿಗೂ ಒಲವಾಗಿ
ನೆಲವೆಲ್ಲ ತೇವ ನುಂಗಿದ ಬಟ್ಟೆಯಾಗಿರಲು,
ತಿಳಿ ಗುಲಾಬಿ ಬಣ್ಣದ ತೇರು ಎಳೆಯುವಷ್ಟರಲ್ಲಿ
ನಮ್ಮೂರ ಕೊರ್ಮನ ಕೈ ತುಂಡಾಗುತ್ತದೆ.
ಕೆಂಡ ನುಂಗಿದ ಕಣ್ಣು, ಸೇಂದಿ ಹೀರಿದ ನಾಲಿಗೆ
ಜಪ ತಪಗಳ ಸ್ಖಲಿನಿಗಳ ಸೆರೆಯಾಳು!

ಗಾಳಿಯ ಜೊತೆ ಸೆಣಸಾಡಿ ಗಾಯಾಳು ತಾಯಿಯ ಎದೆಹಾಲಲ್ಲೂ ನೆತ್ತರದ ಬಣ್ಣ,
ಬೆಂಕಿ ಬಿದ್ದವರ ಮನೆಯ ಕಣ್ಣಲ್ಲೂ ನೀರು ಖಾಲಿಯಾಗಿದೆ!
ಸೊರಗಿದ ಸೊಬಗು ಸೋರುವ ಧರ್ಮತ್ವದ ಗಂಡಸುತನ
ಊರ ದೇವರ ಹೆಣ ಹೆರಲು ಅವ್ವ ಮತ್ತೆ ಬಸಿರಾಗುವಳು!

ಬೀದಿ ಗುಡಿಸುವ ಬಿಸಿಲು ನೆರಳಿನ ನೆತ್ತಿಗೆ ಮೊಳೆ ಜಡಿದು
ದವಾಖಾನೆಗೆ ದಾಖಲಾಗುವಷ್ಟರಲ್ಲಿ ಮುಟ್ಟಿಸಿಕೊಂಡವನು
ಮಡಿಯಾಗುವ ಮೊದಲೆ ಮುಟ್ಟಿದವನು ಹೆಣವಾಗುತ್ತಾನೆ!

ಹೂಳುವ ಜಾಗಕ್ಕೂ ಜಾತಿ ಬೇಲಿ, ಮನುಷ್ಯತ್ವ ಪೂರ್ತಿ ಖಾಲಿ!
ಎಲ್ಲರದೂ ಕೊಲ್ಲುವುದೇ ಕಾಯಕ ಆದರೂ ಇಲ್ಲಿ ಅಸಂಖ್ಯಾತರು ನಿರುದ್ಯೋಗಿಗಳೆ,
ಹಕ್ಕಿಗೆ ಗುಂಡಿಡುವ ಸಸ್ಯಹಾರತ್ವದ ಸರಕಿಗೆ ಈ ನೆಲ ತೀರಾ ಸಲೀಸಾದ ಸ್ವರ್ಗ!
ಅದೆಷ್ಟು ಬಾರಿ ಕೊಂದರೂ, ನೊಂದರೂ ಎದೆಸೀಳಿ ದೇಶಾಭಿಮಾನ ತೋರುತ್ತಲೇ ಒಂದು ವರ್ಗ!

ಅರೆನಗ್ನ ಪ್ರತಿಮೆ

ಉಸಿರು ಹಿಡಿದು ಎದೆಗೊದ್ದಾಗದೆಲ್ಲ ಬಿದ್ದದ್ದು
ರಾಮರಾಜ್ಯದ ಕನಸು.
ಚೂರುಗಳ ಆಯುತ್ತಾ ಹೋದಂತೆ ಸಿಕ್ಕಿದ್ದು ಹಸಿಗಾಯಗಳ ಹೆರಿಗೆ ನೋವು
ಹಸಿದ ಕಂಬನಿಗಳು ಅಳುತ್ತಲೇ ಇವೆ
ಕಣ್ಣರೆಪ್ಪೆ ಹೊಲಿದು ಬಿಡಿ,
ಬಟ್ಟೆ ಇಲ್ಲದವರ ಬೇನೆ ಕಂಡು ಚರಕವೂ ಸ್ತಬ್ಧವಾಗಿದೆ.

ರಕ್ತ ಮತ್ತು ಓಕುಳಿ ಒಂದೇ ಎನ್ನುವರ ಮನೆಯ ಹಬ್ಬದೂಟ ತಿನ್ನದೆ,
ಉಪವಾಸ ಕೂತವನ ಕಣ್ಣೊಳಗೂ ಹಸಿವಿತ್ತು.
ದಾರಿಗಳಿಗೆ ಹೆಜ್ಜೆ ಮೂಡುವ ಹೊತ್ತಲ್ಲಿ,
ಚಪ್ಪಲಿಗೆ ಚಲನೆ ಬರುತ್ತದೆ.
ಕಡಲ ಹನಿಗೆ ಉಪ್ಪು ಕರಗುವ ಹಾಗೆ.
ಕರದಲ್ಲೇ ಕರಗಿ ಹೋಗುತ್ತಾನೆ ನೀರಂತ ಮನುಷ್ಯ!

ಗರೀಬಿಯ ಗಾಯಕ್ಕೆ ಉಪ್ಪು ಸವರುವಾಗ
ಮರಿಯಾದ ಹತ್ಯೆಯಲಿ ಮಗಳು ಸತ್ತಾಗ,
ಬಡವನ ಬೆವರು, ಹಣವಂತನ ಹೆಣವ ತೊಳೆಯುವಾಗ,
ಅಲ್ಲೊಂದು ಪುತ್ಥಳಿಯ ಕೈಗೆ ಪೊರಕೆ ಬರುತ್ತದೆ.
ಕನ್ನಡಕ ಇನ್ನಷ್ಟು ಧೂಳಾಗುತ್ತದೆ!

ತಿಂಗಳೊಂದರ ಎರಡನೇ ತಾರೀಖಿಗೆ
ಹುಟ್ಟುವ ಈ ಪುತ್ಥಳಿ,
ಪ್ರತಿನಿತ್ಯವೂ ಸಾಯುತ್ತಿದೆ ಕಂಡವರ ಗುಂಡಿನ ಏಟಿಗೆ
ನೆತ್ತರ ಕಂಡವರು ರೋದಿಸಿದರೆ,
ಉಂಡವರು ಕೊಂದವನ ಕೊಂಡಾಡುತ್ತಾರೆ.

ಕೊಲ್ಲುವ ನಿಮ್ಮನ್ನು ಕೊಲ್ಲಲು ನಮಗೆ ಗುಂಡೆ ಬೇಕಾಗಿಲ್ಲ.
ಲೇಖನಿಯ ತುದಿಯ ಒಂದಿಷ್ಟು ಮಸಿಯು ಮನಸ್ಸು ಮಾಡಿದರೆ ಸಾಕು,
ಹೆಜ್ಜೆಗೊಂದು ಹೆಣ ಬೀಳುತ್ತದೆ.
ಆದರೆ, ನಾವು ಕೊಲ್ಲುವುದಿಲ್ಲ ಏಕೆಂದರೆ..
ನೀವೇ ಕೊಂದ ಗಾಂಧಿಯನ್ನು ನಂಬಿದವರು ನಾವು!

ಉರಿವ ನಕ್ಷತ್ರಗಳು ಉರಿದು ಬಿದ್ದು
ಬಿಸಿಲ ತಿನ್ನುವ ಬೀದಿ ಬಿಕ್ಕಳಿಸಿದರೂ
ಈ ಪುತ್ಥಳಿಗೆ ಮಾತ್ರ ಪುಢಾರಿತನದ ಇನಾಮು.
ಶಾಂತಿಯು ನಿತ್ಯ ಸಾಯುವಾಗ ಗುಂಡಿಗೇನು ಬರಗಾಲ
ಈಗೀಗ ಈ ಅರೆನಗ್ನ ಪ್ರತಿಮೆಗೂ ನಾಚಿಕೆಯಾಗಿರಬೇಕು
“ಮೇರಾ ಭಾರತ್ ಮಹಾನ್….” ಎನ್ನಲು!?

 

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್

ಮೂಲತಃ ಕಲಬುರ್ಗಿಯವರಾದ ಚಾಂದ್ ಪಾಷ ಸೂಕ್ಷ್ಮ ಸಂವೇದನೆಯ ಕವಿ. ಬೆಂಗಳೂರು ವಿ. ವಿ. ಯಲ್ಲಿ ಕನ್ನಡ ಎಂ. ಎ. ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ದಿ ಆಕ್ಸ್‌ಪsರ್ಡ್ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಚೊಚ್ಚಲ ಕವನ ಸಂಕಲನ ‘ಮೌನದ ಮಳೆ’ 2015ರಲ್ಲಿ ಪ್ರಕಟವಾಯಿತು. ಚಿತ್ರ ಚಿಗುರುವ ಹೊತ್ತು ಇತ್ತೀಚಿನ ಕವನ ಸಂಕಲನ. ಚಾಂದ್ ಪಾಷ ಅವರ ಎರಡು ಕವಿತೆಗಳು ಇಲ್ಲಿವೆ


ಇದನ್ನೂ ಓದಿ: ಓದಲಿಕ್ಕಿದೆ ಕಾರಣ ಇಪ್ಪತ್ತೊಂದು! 2021ರಲ್ಲಿನ ನಿರೀಕ್ಷಿತ ಪುಸ್ತಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...