Homeಕವನನನ್ನ ದೇಶದಲ್ಲಿ... ಚಾಂದ್ ಪಾಷ ಅವರ ಎರಡು ಕವಿತೆಗಳು

ನನ್ನ ದೇಶದಲ್ಲಿ… ಚಾಂದ್ ಪಾಷ ಅವರ ಎರಡು ಕವಿತೆಗಳು

- Advertisement -
- Advertisement -

ನನ್ನ ದೇಶದಲ್ಲಿ…

ನಿದ್ರೆಯ ನೆರಳಿಗೂ ಆಕಾಶದ ಬೆರಳಿಗೂ ಒಲವಾಗಿ
ನೆಲವೆಲ್ಲ ತೇವ ನುಂಗಿದ ಬಟ್ಟೆಯಾಗಿರಲು,
ತಿಳಿ ಗುಲಾಬಿ ಬಣ್ಣದ ತೇರು ಎಳೆಯುವಷ್ಟರಲ್ಲಿ
ನಮ್ಮೂರ ಕೊರ್ಮನ ಕೈ ತುಂಡಾಗುತ್ತದೆ.
ಕೆಂಡ ನುಂಗಿದ ಕಣ್ಣು, ಸೇಂದಿ ಹೀರಿದ ನಾಲಿಗೆ
ಜಪ ತಪಗಳ ಸ್ಖಲಿನಿಗಳ ಸೆರೆಯಾಳು!

ಗಾಳಿಯ ಜೊತೆ ಸೆಣಸಾಡಿ ಗಾಯಾಳು ತಾಯಿಯ ಎದೆಹಾಲಲ್ಲೂ ನೆತ್ತರದ ಬಣ್ಣ,
ಬೆಂಕಿ ಬಿದ್ದವರ ಮನೆಯ ಕಣ್ಣಲ್ಲೂ ನೀರು ಖಾಲಿಯಾಗಿದೆ!
ಸೊರಗಿದ ಸೊಬಗು ಸೋರುವ ಧರ್ಮತ್ವದ ಗಂಡಸುತನ
ಊರ ದೇವರ ಹೆಣ ಹೆರಲು ಅವ್ವ ಮತ್ತೆ ಬಸಿರಾಗುವಳು!

ಬೀದಿ ಗುಡಿಸುವ ಬಿಸಿಲು ನೆರಳಿನ ನೆತ್ತಿಗೆ ಮೊಳೆ ಜಡಿದು
ದವಾಖಾನೆಗೆ ದಾಖಲಾಗುವಷ್ಟರಲ್ಲಿ ಮುಟ್ಟಿಸಿಕೊಂಡವನು
ಮಡಿಯಾಗುವ ಮೊದಲೆ ಮುಟ್ಟಿದವನು ಹೆಣವಾಗುತ್ತಾನೆ!

ಹೂಳುವ ಜಾಗಕ್ಕೂ ಜಾತಿ ಬೇಲಿ, ಮನುಷ್ಯತ್ವ ಪೂರ್ತಿ ಖಾಲಿ!
ಎಲ್ಲರದೂ ಕೊಲ್ಲುವುದೇ ಕಾಯಕ ಆದರೂ ಇಲ್ಲಿ ಅಸಂಖ್ಯಾತರು ನಿರುದ್ಯೋಗಿಗಳೆ,
ಹಕ್ಕಿಗೆ ಗುಂಡಿಡುವ ಸಸ್ಯಹಾರತ್ವದ ಸರಕಿಗೆ ಈ ನೆಲ ತೀರಾ ಸಲೀಸಾದ ಸ್ವರ್ಗ!
ಅದೆಷ್ಟು ಬಾರಿ ಕೊಂದರೂ, ನೊಂದರೂ ಎದೆಸೀಳಿ ದೇಶಾಭಿಮಾನ ತೋರುತ್ತಲೇ ಒಂದು ವರ್ಗ!

ಅರೆನಗ್ನ ಪ್ರತಿಮೆ

ಉಸಿರು ಹಿಡಿದು ಎದೆಗೊದ್ದಾಗದೆಲ್ಲ ಬಿದ್ದದ್ದು
ರಾಮರಾಜ್ಯದ ಕನಸು.
ಚೂರುಗಳ ಆಯುತ್ತಾ ಹೋದಂತೆ ಸಿಕ್ಕಿದ್ದು ಹಸಿಗಾಯಗಳ ಹೆರಿಗೆ ನೋವು
ಹಸಿದ ಕಂಬನಿಗಳು ಅಳುತ್ತಲೇ ಇವೆ
ಕಣ್ಣರೆಪ್ಪೆ ಹೊಲಿದು ಬಿಡಿ,
ಬಟ್ಟೆ ಇಲ್ಲದವರ ಬೇನೆ ಕಂಡು ಚರಕವೂ ಸ್ತಬ್ಧವಾಗಿದೆ.

ರಕ್ತ ಮತ್ತು ಓಕುಳಿ ಒಂದೇ ಎನ್ನುವರ ಮನೆಯ ಹಬ್ಬದೂಟ ತಿನ್ನದೆ,
ಉಪವಾಸ ಕೂತವನ ಕಣ್ಣೊಳಗೂ ಹಸಿವಿತ್ತು.
ದಾರಿಗಳಿಗೆ ಹೆಜ್ಜೆ ಮೂಡುವ ಹೊತ್ತಲ್ಲಿ,
ಚಪ್ಪಲಿಗೆ ಚಲನೆ ಬರುತ್ತದೆ.
ಕಡಲ ಹನಿಗೆ ಉಪ್ಪು ಕರಗುವ ಹಾಗೆ.
ಕರದಲ್ಲೇ ಕರಗಿ ಹೋಗುತ್ತಾನೆ ನೀರಂತ ಮನುಷ್ಯ!

ಗರೀಬಿಯ ಗಾಯಕ್ಕೆ ಉಪ್ಪು ಸವರುವಾಗ
ಮರಿಯಾದ ಹತ್ಯೆಯಲಿ ಮಗಳು ಸತ್ತಾಗ,
ಬಡವನ ಬೆವರು, ಹಣವಂತನ ಹೆಣವ ತೊಳೆಯುವಾಗ,
ಅಲ್ಲೊಂದು ಪುತ್ಥಳಿಯ ಕೈಗೆ ಪೊರಕೆ ಬರುತ್ತದೆ.
ಕನ್ನಡಕ ಇನ್ನಷ್ಟು ಧೂಳಾಗುತ್ತದೆ!

ತಿಂಗಳೊಂದರ ಎರಡನೇ ತಾರೀಖಿಗೆ
ಹುಟ್ಟುವ ಈ ಪುತ್ಥಳಿ,
ಪ್ರತಿನಿತ್ಯವೂ ಸಾಯುತ್ತಿದೆ ಕಂಡವರ ಗುಂಡಿನ ಏಟಿಗೆ
ನೆತ್ತರ ಕಂಡವರು ರೋದಿಸಿದರೆ,
ಉಂಡವರು ಕೊಂದವನ ಕೊಂಡಾಡುತ್ತಾರೆ.

ಕೊಲ್ಲುವ ನಿಮ್ಮನ್ನು ಕೊಲ್ಲಲು ನಮಗೆ ಗುಂಡೆ ಬೇಕಾಗಿಲ್ಲ.
ಲೇಖನಿಯ ತುದಿಯ ಒಂದಿಷ್ಟು ಮಸಿಯು ಮನಸ್ಸು ಮಾಡಿದರೆ ಸಾಕು,
ಹೆಜ್ಜೆಗೊಂದು ಹೆಣ ಬೀಳುತ್ತದೆ.
ಆದರೆ, ನಾವು ಕೊಲ್ಲುವುದಿಲ್ಲ ಏಕೆಂದರೆ..
ನೀವೇ ಕೊಂದ ಗಾಂಧಿಯನ್ನು ನಂಬಿದವರು ನಾವು!

ಉರಿವ ನಕ್ಷತ್ರಗಳು ಉರಿದು ಬಿದ್ದು
ಬಿಸಿಲ ತಿನ್ನುವ ಬೀದಿ ಬಿಕ್ಕಳಿಸಿದರೂ
ಈ ಪುತ್ಥಳಿಗೆ ಮಾತ್ರ ಪುಢಾರಿತನದ ಇನಾಮು.
ಶಾಂತಿಯು ನಿತ್ಯ ಸಾಯುವಾಗ ಗುಂಡಿಗೇನು ಬರಗಾಲ
ಈಗೀಗ ಈ ಅರೆನಗ್ನ ಪ್ರತಿಮೆಗೂ ನಾಚಿಕೆಯಾಗಿರಬೇಕು
“ಮೇರಾ ಭಾರತ್ ಮಹಾನ್….” ಎನ್ನಲು!?

 

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್

ಮೂಲತಃ ಕಲಬುರ್ಗಿಯವರಾದ ಚಾಂದ್ ಪಾಷ ಸೂಕ್ಷ್ಮ ಸಂವೇದನೆಯ ಕವಿ. ಬೆಂಗಳೂರು ವಿ. ವಿ. ಯಲ್ಲಿ ಕನ್ನಡ ಎಂ. ಎ. ಪದವಿ ಪಡೆದಿದ್ದು ಪ್ರಸ್ತುತ ಬೆಂಗಳೂರಿನ ದಿ ಆಕ್ಸ್‌ಪsರ್ಡ್ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಚೊಚ್ಚಲ ಕವನ ಸಂಕಲನ ‘ಮೌನದ ಮಳೆ’ 2015ರಲ್ಲಿ ಪ್ರಕಟವಾಯಿತು. ಚಿತ್ರ ಚಿಗುರುವ ಹೊತ್ತು ಇತ್ತೀಚಿನ ಕವನ ಸಂಕಲನ. ಚಾಂದ್ ಪಾಷ ಅವರ ಎರಡು ಕವಿತೆಗಳು ಇಲ್ಲಿವೆ


ಇದನ್ನೂ ಓದಿ: ಓದಲಿಕ್ಕಿದೆ ಕಾರಣ ಇಪ್ಪತ್ತೊಂದು! 2021ರಲ್ಲಿನ ನಿರೀಕ್ಷಿತ ಪುಸ್ತಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...