Homeಮುಖಪುಟಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಜೈಲಿನಲ್ಲಿದ್ದ ಅವಧಿಯಲ್ಲಿ ಬರೆದ ‘ಅನ್‌ಲೈಕ್ಲಿ ಪ್ಯಾರಡೈಸ್’ (Unlikely Paradise) ಪುಸ್ತಕದಲ್ಲಿ ಹೇಳಿರುವುದಾಗಿ timesofindia.indiatimes.com ವರದಿ ಮಾಡಿದೆ.

ಅನ್‌ಲೈಕ್ಲಿ ಪ್ಯಾರಡೈಸ್ ಮರಾಠಿ ಪುಸ್ತಕವು 2025ರಲ್ಲಿ ಹೊರಬಂದಿದ್ದು, ಹೆಚ್ಚಿನ ವಿಷಯಗಳನ್ನು ಒಳಗೊಂಡಿರುವ ಇದರ ಇಂಗ್ಲಿಷ್ ಆವೃತ್ತಿಯು ಇದೇ ಸೋಮವಾರ ಬಿಡುಗಡೆಯಾಗಲು ಸಿದ್ಧವಾಗಿದೆ.

ಧನ್ಕರ್ ಮತ್ತು ಅವರ ಪತ್ನಿ ತಮ್ಮ ಜೈಪುರದ ಮನೆಯನ್ನು ಮಾರಾಟ ಮಾಡಿ, ಬಂದ ಹಣದ ಒಂದು ಭಾಗವನ್ನು ವಿದೇಶಕ್ಕೆ ವರ್ಗಾಯಿಸಿದ್ದಾರೆ ಎಂಬ ವದಂತಿಗಳು ಹರಡಿದ್ದವು ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಅವರ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಲು ಫೈಲ್ ಒಂದನ್ನು ಸಿದ್ಧಪಡಿಸಿದ್ದವು ಎಂಬುವುದಾಗಿ ಈ ಪುಸ್ತಕವು ಪ್ರತಿಪಾದಿಸಿದೆ ಎಂದು ವರದಿ ಉಲ್ಲೇಖಿಸಿದೆ.

“ಮೋದಿ ಸರ್ಕಾರದ ವಿರುದ್ಧ ಧನ್ಕರ್ ಅವರು ಸ್ವತಂತ್ರ ರಾಜಕೀಯ ನಡೆಗಳನ್ನು ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಾಗ, ಇಡಿ ಅವರ ಮುಂದೆಯೇ ಆ ಕಡತವನ್ನು (ಫೈಲ್) ಪ್ರಸ್ತುತಪಡಿಸಿತು ಮತ್ತು ರಾಜೀನಾಮೆ ನೀಡುವಂತೆ ಅವರ ಮೇಲೆ ಒತ್ತಡ ಹೇರಿತು.”

“ಅವರು (ಧನ್ಕರ್) ಆರಂಭದಲ್ಲಿ ಈ ಒತ್ತಡಕ್ಕೆ ಮಣಿಯಲು ನಿರಾಕರಿಸಿದಾಗ ತನಿಖೆಯು ಮತ್ತಷ್ಟು ತೀವ್ರಗೊಂಡಿತು, ಇದರಿಂದಾಗಿ ಅವರು ಬಹಿರಂಗವಾಗಿಯೇ ಅಸಮಾಧಾನಗೊಂಡಿದ್ದರು” ಎಂಬುವುದಾಗಿ ಪುಸ್ತಕದಲ್ಲಿ ಹೇಳಲಾಗಿದೆ ಎಂದು ವರದಿ ವಿವರಿಸಿದೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮಾಡಿದ್ದರೆನ್ನಲಾದ ಚುನಾವಣಾ ನಿಯಮಗಳ ಉಲ್ಲಂಘನೆಯ ವಿರುದ್ಧ ಅಶೋಕ್ ಲಾವಾಸಾ ಅವರು ಭಿನ್ನ ನಿಲುವು ತಳೆದಿದ್ದರು. ಈ ಕಾರಣಕ್ಕಾಗಿಯೇ ಮಾಜಿ ಚುನಾವಣಾ ಆಯುಕ್ತರಾದ ಲಾವಾಸಾ ಅವರ ಮನೆಯ ಮೇಲೆ ದಾಳಿ ನಡೆಸಲಾಯಿತು ಮತ್ತು ಅವರ ಕುಟುಂಬದವರು ಇಡಿ ಸಮನ್ಸ್ ಎದುರಿಸಬೇಕಾಯಿತು ಎಂದು ರಾವುತ್ ಆರೋಪಿಸಿದ್ದಾರೆ.”

“ಭಾರತೀಯ ಚುನಾವಣಾ ನೀತಿ ಸಂಹಿತೆಯ ಎಂಟು ಉಲ್ಲಂಘನೆಗಳನ್ನು ಉಲ್ಲೇಖಿಸಿ ಬಂದ ದೂರುಗಳ ಆಧಾರದ ಮೇಲೆ, ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮೇಲಿನ ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ಕ್ರಮಗಳನ್ನು ಕೈಗೊಂಡಿದ್ದರು.”

“ಮೌನವಾಗಿರುವಂತೆ ಸಲಹೆ ನೀಡಲಾಗಿದ್ದರೂ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದರು. ನಿರೀಕ್ಷೆಯಂತೆಯೇ, ತಮ್ಮ ಭಿನ್ನ ನಿಲುವಿಗಾಗಿ ಲಾವಾಸಾ ಮತ್ತು ಅವರ ಕುಟುಂಬದವರು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಯಿತು” ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ತಮ್ಮ ಪುಸ್ತಕದಲ್ಲಿ ಆರೋಪಿಸಿದ್ದಾರೆ. ಅವರ (ಲಾವಾಸ) ಮನೆಯ ಮೇಲೆ ನಡೆದ ಇಡಿ ದಾಳಿಯು 2020ರಲ್ಲಿ ಅವರು ರಾಜೀನಾಮೆ ನೀಡುವಂತೆ ಮಾಡಿತು ಮತ್ತು ಅದರ ನಂತರವೂ ಅವರು ತನಿಖಾ ಸಂಸ್ಥೆಯ ಕಣ್ಗಾವಲಿನಲ್ಲಿದ್ದರು ಎಂಬುವುದಾಗಿ ಪುಸ್ತಕದಲ್ಲಿ ಹೇಳಲಾಗಿದೆ” ಎಂದು timesofindia.indiatimes.com ವರದಿ ತಿಳಿಸಿದೆ.

“ಯುಪಿಎ ಸರ್ಕಾರದ ಅವಧಿಯಲ್ಲಿ, ಗುಜರಾತ್‌ನ ಅಂದಿನ ಮುಖ್ಯಮಂತ್ರಿಯಾಗಿದ್ದ ಮೋದಿಯವರನ್ನು ಗುಜರಾತ್ ದಂಗೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸುವ ಸಾಧ್ಯತೆಯಿದೆ ಎಂಬ ವದಂತಿಗಳಿದ್ದವು ಎಂದು ಪುಸ್ತಕವು ಪ್ರತಿಪಾದಿಸಿದೆ. ಆದಾಗ್ಯೂ, ಅಂದಿನ ಕೇಂದ್ರ ಸಚಿವರಾಗಿದ್ದ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಈ ನಡೆಯ ಬಗ್ಗೆ ಅಸಮಾಧಾನ ಹೊಂದಿದ್ದರು. ‘ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸುವುದು ಸರಿಯಲ್ಲ’ ಎಂದು ಪವಾರ್ ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದರು ಎಂದು ಪುಸ್ತಕದಲ್ಲಿ ಹೇಳಲಾಗಿದೆ.”

“ಈ ಅಭಿಪ್ರಾಯವು ಅನೇಕರ ಮನ ಗೆದ್ದಿತು, ಇದರಿಂದಾಗಿ ಮೋದಿ ಅವರು ಜೈಲುವಾಸದಿಂದ ಪಾರಾದರು. ಆದರೆ, ಮೋದಿ ಅವರು ರಾಜಕೀಯದಲ್ಲಿನ ಈ ಉಪಕಾರಗಳನ್ನು ಮತ್ತು ನೈತಿಕತೆಯನ್ನು ನೆನಪಿಸಿಕೊಳ್ಳುತ್ತಾರೆಯೇ?” ಎಂದು ಪುಸ್ತಕವು ಪ್ರಶ್ನಿಸಿದೆ.”

“ಅಮಿತ್ ಶಾ ಅವರು ಹಲವು ಪ್ರಕರಣಗಳಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾಗ ಮತ್ತು ಸಿಬಿಐ ಅವರ ಜಾಮೀನನ್ನು ವಿರೋಧಿಸುತ್ತಿದ್ದ ಸಂದರ್ಭದಲ್ಲಿ, ಅವರಿಗೆ ಜಾಮೀನು ಸಿಗುವಂತೆ ಮಾಡಲು ಶರದ್ ಪವಾರ್ ಮತ್ತು ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಇಬ್ಬರೂ ಸಹಾಯ ಮಾಡಿದ್ದರು ಎಂದು ಪುಸ್ತಕವು ಪ್ರತಿಪಾದಿಸಿದೆ.”

“ಸಿಬಿಐ ಘಟಕದಲ್ಲಿದ್ದ ಮಹಾರಾಷ್ಟ್ರ ಕೇಡರ್‌ನ ಅಧಿಕಾರಿಯೊಬ್ಬರು ಅಮಿತ್ ಶಾ ಅವರಿಗೆ ಜಾಮೀನು ನೀಡುವುದನ್ನು ವಿಶೇಷವಾಗಿ ವಿರೋಧಿಸುತ್ತಿದ್ದರು. ಆಗ ಮೋದಿಯವರು ಶರದ್ ಪವಾರ್ ಅವರ ಮಧ್ಯಸ್ಥಿಕೆಯನ್ನು ಕೋರಿದರು ಮತ್ತು ಪವಾರ್ ಅವರು ತಮ್ಮ ಸ್ವಭಾವದಂತೆ ಅವರಿಗೆ ಸಹಾಯ ಮಾಡಿದರು, ಇದರಿಂದಾಗಿ ಶಾ ಜಾಮೀನಿನ ಮೇಲೆ ಬಿಡುಗಡೆಯಾದರು. ಆದರೆ, ನಂತರದ ದಿನಗಳಲ್ಲಿ ಅಮಿತ್ ಶಾ ಅವರು ಪವಾರ್ ಮತ್ತು ಮಹಾರಾಷ್ಟ್ರವನ್ನು ಹೇಗೆ ನಡೆಸಿಕೊಂಡರು ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದು ಪುಸ್ತಕವು ಪ್ರತಿಪಾದಿಸಿದೆ.”

“ಗುಜರಾತ್ ದಂಗೆಯ ನಂತರ ಅಮಿತ್ ಶಾ ಅವರು ‘ಗಂಭೀರ ಅಪಾಯ’ವನ್ನು ಎದುರಿಸುತ್ತಿದ್ದರು ಮತ್ತು ದಂಗೆಯ ತನಿಖೆಯು ಸಿಬಿಐ ನಿಯಂತ್ರಣದಲ್ಲಿದ್ದ ಕಾರಣ ಮೋದಿಯವರಿಗೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪುಸ್ತಕವು ಪ್ರತಿಪಾದಿಸಿದೆ. ಆ ಸಮಯದಲ್ಲಿ ಅಮಿತ್ ಶಾ ಅವರು ತಮ್ಮ ಮಗನೊಂದಿಗೆ ಕಪ್ಪು ಮತ್ತು ಹಳದಿ ಬಣ್ಣದ ಟ್ಯಾಕ್ಸಿಯಲ್ಲಿ ಠಾಕ್ರೆ ಅವರ ನಿವಾಸಕ್ಕೆ ಆಗಮಿಸಿದ್ದರು ಮತ್ತು ತಮ್ಮ ಪ್ರಕರಣದ ನ್ಯಾಯಾಧೀಶರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ವಿನಂತಿಸಿದ್ದರು ಎಂದು ಪುಸ್ತಕವು ಹೇಳಿದೆ.”

“ನೀವು ನ್ಯಾಯಾಧೀಶರೊಂದಿಗೆ ಮಾತನಾಡಿದರೆ, ಅವರು ಕೇಳುತ್ತಾರೆ ಮತ್ತು ನಿಮ್ಮ ಮಾತನ್ನು ಮೀರುವುದಿಲ್ಲ ಎಂದು ಶಾ ಅವರು ಠಾಕ್ರೆಯವರಿಗೆ ತಿಳಿಸಿದರು ಎಂದು ಪುಸ್ತಕವು ಪ್ರತಿಪಾದಿಸಿದೆ. ಆನಂತರ ಏನಾಯಿತು ಎಂಬುದನ್ನು ಬಹಿರಂಗಪಡಿಸುವುದು ನೈತಿಕವಾಗಿ ಸರಿಯಲ್ಲ. ಆದರೆ, ಅಂದು ಬಾಳಾಸಾಹೇಬರು ಮನೋಹರ್ ಜೋಶಿಯವರನ್ನು ಕರೆಸಿ, ನ್ಯಾಯಾಧೀಶರ ಹೆಸರನ್ನು ನೀಡಿ ಈ ಬಗ್ಗೆ ಚರ್ಚಿಸುವಂತೆ ಸೂಚಿಸಿದರು. ಮಾತು ಮುಗಿಸುವಾಗ, ‘ನೀವು ಯಾವುದೇ ಉನ್ನತ ಸ್ಥಾನದಲ್ಲಿರಬಹುದು, ಆದರೆ ನೀವು ಕೂಡ ಒಬ್ಬ ಹಿಂದೂ ಎಂಬುದನ್ನು ನೆನಪಿಡಿ’ ಎಂದು ಠಾಕ್ರೆ ಹೇಳಿದ್ದರು ಎಂದು ಈ ಪುಸ್ತಕವು ವಿವರಿಸಿದೆ”

“ಆ ಒಂದು ಕರೆ ಅಮಿತ್ ಶಾ ಅವರ ರಾಜಕೀಯ ಪಥವನ್ನೇ ಬದಲಿಸಿತು. ಆದರೂ, ಅವರು ಶಿವಸೇನೆ ಮತ್ತು ಠಾಕ್ರೆ ಕುಟುಂಬದ ಮೇಲೆ ತೋರಿಸಿದ ಕೃತಘ್ನತೆಯನ್ನು ಇಡೀ ಜಗತ್ತೇ ನೋಡಿದೆ ಎಂಬುವುದಾಗಿ ಪುಸ್ತಕವು ಪ್ರತಿಪಾದಿಸಿದೆ” ಎಂದು timesofindia.indiatimes.com ಭಾನುವಾರ (ಮಾ.22) ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...