Homeಮುಖಪುಟಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಜೈಲಿನಲ್ಲಿದ್ದ ಅವಧಿಯಲ್ಲಿ ಬರೆದ ‘ಅನ್‌ಲೈಕ್ಲಿ ಪ್ಯಾರಡೈಸ್’ (Unlikely Paradise) ಪುಸ್ತಕದಲ್ಲಿ ಹೇಳಿರುವುದಾಗಿ timesofindia.indiatimes.com ವರದಿ ಮಾಡಿದೆ.

ಅನ್‌ಲೈಕ್ಲಿ ಪ್ಯಾರಡೈಸ್ ಮರಾಠಿ ಪುಸ್ತಕವು 2025ರಲ್ಲಿ ಹೊರಬಂದಿದ್ದು, ಹೆಚ್ಚಿನ ವಿಷಯಗಳನ್ನು ಒಳಗೊಂಡಿರುವ ಇದರ ಇಂಗ್ಲಿಷ್ ಆವೃತ್ತಿಯು ಇದೇ ಸೋಮವಾರ ಬಿಡುಗಡೆಯಾಗಲು ಸಿದ್ಧವಾಗಿದೆ.

ಧನ್ಕರ್ ಮತ್ತು ಅವರ ಪತ್ನಿ ತಮ್ಮ ಜೈಪುರದ ಮನೆಯನ್ನು ಮಾರಾಟ ಮಾಡಿ, ಬಂದ ಹಣದ ಒಂದು ಭಾಗವನ್ನು ವಿದೇಶಕ್ಕೆ ವರ್ಗಾಯಿಸಿದ್ದಾರೆ ಎಂಬ ವದಂತಿಗಳು ಹರಡಿದ್ದವು ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಇಡಿ ಮತ್ತು ಇತರ ತನಿಖಾ ಸಂಸ್ಥೆಗಳು ಅವರ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಲು ಫೈಲ್ ಒಂದನ್ನು ಸಿದ್ಧಪಡಿಸಿದ್ದವು ಎಂಬುವುದಾಗಿ ಈ ಪುಸ್ತಕವು ಪ್ರತಿಪಾದಿಸಿದೆ ಎಂದು ವರದಿ ಉಲ್ಲೇಖಿಸಿದೆ.

“ಮೋದಿ ಸರ್ಕಾರದ ವಿರುದ್ಧ ಧನ್ಕರ್ ಅವರು ಸ್ವತಂತ್ರ ರಾಜಕೀಯ ನಡೆಗಳನ್ನು ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಾಗ, ಇಡಿ ಅವರ ಮುಂದೆಯೇ ಆ ಕಡತವನ್ನು (ಫೈಲ್) ಪ್ರಸ್ತುತಪಡಿಸಿತು ಮತ್ತು ರಾಜೀನಾಮೆ ನೀಡುವಂತೆ ಅವರ ಮೇಲೆ ಒತ್ತಡ ಹೇರಿತು.”

“ಅವರು (ಧನ್ಕರ್) ಆರಂಭದಲ್ಲಿ ಈ ಒತ್ತಡಕ್ಕೆ ಮಣಿಯಲು ನಿರಾಕರಿಸಿದಾಗ ತನಿಖೆಯು ಮತ್ತಷ್ಟು ತೀವ್ರಗೊಂಡಿತು, ಇದರಿಂದಾಗಿ ಅವರು ಬಹಿರಂಗವಾಗಿಯೇ ಅಸಮಾಧಾನಗೊಂಡಿದ್ದರು” ಎಂಬುವುದಾಗಿ ಪುಸ್ತಕದಲ್ಲಿ ಹೇಳಲಾಗಿದೆ ಎಂದು ವರದಿ ವಿವರಿಸಿದೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮಾಡಿದ್ದರೆನ್ನಲಾದ ಚುನಾವಣಾ ನಿಯಮಗಳ ಉಲ್ಲಂಘನೆಯ ವಿರುದ್ಧ ಅಶೋಕ್ ಲಾವಾಸಾ ಅವರು ಭಿನ್ನ ನಿಲುವು ತಳೆದಿದ್ದರು. ಈ ಕಾರಣಕ್ಕಾಗಿಯೇ ಮಾಜಿ ಚುನಾವಣಾ ಆಯುಕ್ತರಾದ ಲಾವಾಸಾ ಅವರ ಮನೆಯ ಮೇಲೆ ದಾಳಿ ನಡೆಸಲಾಯಿತು ಮತ್ತು ಅವರ ಕುಟುಂಬದವರು ಇಡಿ ಸಮನ್ಸ್ ಎದುರಿಸಬೇಕಾಯಿತು ಎಂದು ರಾವುತ್ ಆರೋಪಿಸಿದ್ದಾರೆ.”

“ಭಾರತೀಯ ಚುನಾವಣಾ ನೀತಿ ಸಂಹಿತೆಯ ಎಂಟು ಉಲ್ಲಂಘನೆಗಳನ್ನು ಉಲ್ಲೇಖಿಸಿ ಬಂದ ದೂರುಗಳ ಆಧಾರದ ಮೇಲೆ, ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮೇಲಿನ ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ಕ್ರಮಗಳನ್ನು ಕೈಗೊಂಡಿದ್ದರು.”

“ಮೌನವಾಗಿರುವಂತೆ ಸಲಹೆ ನೀಡಲಾಗಿದ್ದರೂ, ಅವರು ಒತ್ತಡಕ್ಕೆ ಮಣಿಯಲು ನಿರಾಕರಿಸಿದರು. ನಿರೀಕ್ಷೆಯಂತೆಯೇ, ತಮ್ಮ ಭಿನ್ನ ನಿಲುವಿಗಾಗಿ ಲಾವಾಸಾ ಮತ್ತು ಅವರ ಕುಟುಂಬದವರು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಯಿತು” ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ತಮ್ಮ ಪುಸ್ತಕದಲ್ಲಿ ಆರೋಪಿಸಿದ್ದಾರೆ. ಅವರ (ಲಾವಾಸ) ಮನೆಯ ಮೇಲೆ ನಡೆದ ಇಡಿ ದಾಳಿಯು 2020ರಲ್ಲಿ ಅವರು ರಾಜೀನಾಮೆ ನೀಡುವಂತೆ ಮಾಡಿತು ಮತ್ತು ಅದರ ನಂತರವೂ ಅವರು ತನಿಖಾ ಸಂಸ್ಥೆಯ ಕಣ್ಗಾವಲಿನಲ್ಲಿದ್ದರು ಎಂಬುವುದಾಗಿ ಪುಸ್ತಕದಲ್ಲಿ ಹೇಳಲಾಗಿದೆ” ಎಂದು timesofindia.indiatimes.com ವರದಿ ತಿಳಿಸಿದೆ.

“ಯುಪಿಎ ಸರ್ಕಾರದ ಅವಧಿಯಲ್ಲಿ, ಗುಜರಾತ್‌ನ ಅಂದಿನ ಮುಖ್ಯಮಂತ್ರಿಯಾಗಿದ್ದ ಮೋದಿಯವರನ್ನು ಗುಜರಾತ್ ದಂಗೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸುವ ಸಾಧ್ಯತೆಯಿದೆ ಎಂಬ ವದಂತಿಗಳಿದ್ದವು ಎಂದು ಪುಸ್ತಕವು ಪ್ರತಿಪಾದಿಸಿದೆ. ಆದಾಗ್ಯೂ, ಅಂದಿನ ಕೇಂದ್ರ ಸಚಿವರಾಗಿದ್ದ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಈ ನಡೆಯ ಬಗ್ಗೆ ಅಸಮಾಧಾನ ಹೊಂದಿದ್ದರು. ‘ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸುವುದು ಸರಿಯಲ್ಲ’ ಎಂದು ಪವಾರ್ ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯಪಟ್ಟಿದ್ದರು ಎಂದು ಪುಸ್ತಕದಲ್ಲಿ ಹೇಳಲಾಗಿದೆ.”

“ಈ ಅಭಿಪ್ರಾಯವು ಅನೇಕರ ಮನ ಗೆದ್ದಿತು, ಇದರಿಂದಾಗಿ ಮೋದಿ ಅವರು ಜೈಲುವಾಸದಿಂದ ಪಾರಾದರು. ಆದರೆ, ಮೋದಿ ಅವರು ರಾಜಕೀಯದಲ್ಲಿನ ಈ ಉಪಕಾರಗಳನ್ನು ಮತ್ತು ನೈತಿಕತೆಯನ್ನು ನೆನಪಿಸಿಕೊಳ್ಳುತ್ತಾರೆಯೇ?” ಎಂದು ಪುಸ್ತಕವು ಪ್ರಶ್ನಿಸಿದೆ.”

“ಅಮಿತ್ ಶಾ ಅವರು ಹಲವು ಪ್ರಕರಣಗಳಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾಗ ಮತ್ತು ಸಿಬಿಐ ಅವರ ಜಾಮೀನನ್ನು ವಿರೋಧಿಸುತ್ತಿದ್ದ ಸಂದರ್ಭದಲ್ಲಿ, ಅವರಿಗೆ ಜಾಮೀನು ಸಿಗುವಂತೆ ಮಾಡಲು ಶರದ್ ಪವಾರ್ ಮತ್ತು ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಇಬ್ಬರೂ ಸಹಾಯ ಮಾಡಿದ್ದರು ಎಂದು ಪುಸ್ತಕವು ಪ್ರತಿಪಾದಿಸಿದೆ.”

“ಸಿಬಿಐ ಘಟಕದಲ್ಲಿದ್ದ ಮಹಾರಾಷ್ಟ್ರ ಕೇಡರ್‌ನ ಅಧಿಕಾರಿಯೊಬ್ಬರು ಅಮಿತ್ ಶಾ ಅವರಿಗೆ ಜಾಮೀನು ನೀಡುವುದನ್ನು ವಿಶೇಷವಾಗಿ ವಿರೋಧಿಸುತ್ತಿದ್ದರು. ಆಗ ಮೋದಿಯವರು ಶರದ್ ಪವಾರ್ ಅವರ ಮಧ್ಯಸ್ಥಿಕೆಯನ್ನು ಕೋರಿದರು ಮತ್ತು ಪವಾರ್ ಅವರು ತಮ್ಮ ಸ್ವಭಾವದಂತೆ ಅವರಿಗೆ ಸಹಾಯ ಮಾಡಿದರು, ಇದರಿಂದಾಗಿ ಶಾ ಜಾಮೀನಿನ ಮೇಲೆ ಬಿಡುಗಡೆಯಾದರು. ಆದರೆ, ನಂತರದ ದಿನಗಳಲ್ಲಿ ಅಮಿತ್ ಶಾ ಅವರು ಪವಾರ್ ಮತ್ತು ಮಹಾರಾಷ್ಟ್ರವನ್ನು ಹೇಗೆ ನಡೆಸಿಕೊಂಡರು ಎಂಬುದು ನಮಗೆಲ್ಲರಿಗೂ ತಿಳಿದಿದೆ ಎಂದು ಪುಸ್ತಕವು ಪ್ರತಿಪಾದಿಸಿದೆ.”

“ಗುಜರಾತ್ ದಂಗೆಯ ನಂತರ ಅಮಿತ್ ಶಾ ಅವರು ‘ಗಂಭೀರ ಅಪಾಯ’ವನ್ನು ಎದುರಿಸುತ್ತಿದ್ದರು ಮತ್ತು ದಂಗೆಯ ತನಿಖೆಯು ಸಿಬಿಐ ನಿಯಂತ್ರಣದಲ್ಲಿದ್ದ ಕಾರಣ ಮೋದಿಯವರಿಗೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪುಸ್ತಕವು ಪ್ರತಿಪಾದಿಸಿದೆ. ಆ ಸಮಯದಲ್ಲಿ ಅಮಿತ್ ಶಾ ಅವರು ತಮ್ಮ ಮಗನೊಂದಿಗೆ ಕಪ್ಪು ಮತ್ತು ಹಳದಿ ಬಣ್ಣದ ಟ್ಯಾಕ್ಸಿಯಲ್ಲಿ ಠಾಕ್ರೆ ಅವರ ನಿವಾಸಕ್ಕೆ ಆಗಮಿಸಿದ್ದರು ಮತ್ತು ತಮ್ಮ ಪ್ರಕರಣದ ನ್ಯಾಯಾಧೀಶರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ವಿನಂತಿಸಿದ್ದರು ಎಂದು ಪುಸ್ತಕವು ಹೇಳಿದೆ.”

“ನೀವು ನ್ಯಾಯಾಧೀಶರೊಂದಿಗೆ ಮಾತನಾಡಿದರೆ, ಅವರು ಕೇಳುತ್ತಾರೆ ಮತ್ತು ನಿಮ್ಮ ಮಾತನ್ನು ಮೀರುವುದಿಲ್ಲ ಎಂದು ಶಾ ಅವರು ಠಾಕ್ರೆಯವರಿಗೆ ತಿಳಿಸಿದರು ಎಂದು ಪುಸ್ತಕವು ಪ್ರತಿಪಾದಿಸಿದೆ. ಆನಂತರ ಏನಾಯಿತು ಎಂಬುದನ್ನು ಬಹಿರಂಗಪಡಿಸುವುದು ನೈತಿಕವಾಗಿ ಸರಿಯಲ್ಲ. ಆದರೆ, ಅಂದು ಬಾಳಾಸಾಹೇಬರು ಮನೋಹರ್ ಜೋಶಿಯವರನ್ನು ಕರೆಸಿ, ನ್ಯಾಯಾಧೀಶರ ಹೆಸರನ್ನು ನೀಡಿ ಈ ಬಗ್ಗೆ ಚರ್ಚಿಸುವಂತೆ ಸೂಚಿಸಿದರು. ಮಾತು ಮುಗಿಸುವಾಗ, ‘ನೀವು ಯಾವುದೇ ಉನ್ನತ ಸ್ಥಾನದಲ್ಲಿರಬಹುದು, ಆದರೆ ನೀವು ಕೂಡ ಒಬ್ಬ ಹಿಂದೂ ಎಂಬುದನ್ನು ನೆನಪಿಡಿ’ ಎಂದು ಠಾಕ್ರೆ ಹೇಳಿದ್ದರು ಎಂದು ಈ ಪುಸ್ತಕವು ವಿವರಿಸಿದೆ”

“ಆ ಒಂದು ಕರೆ ಅಮಿತ್ ಶಾ ಅವರ ರಾಜಕೀಯ ಪಥವನ್ನೇ ಬದಲಿಸಿತು. ಆದರೂ, ಅವರು ಶಿವಸೇನೆ ಮತ್ತು ಠಾಕ್ರೆ ಕುಟುಂಬದ ಮೇಲೆ ತೋರಿಸಿದ ಕೃತಘ್ನತೆಯನ್ನು ಇಡೀ ಜಗತ್ತೇ ನೋಡಿದೆ ಎಂಬುವುದಾಗಿ ಪುಸ್ತಕವು ಪ್ರತಿಪಾದಿಸಿದೆ” ಎಂದು timesofindia.indiatimes.com ಭಾನುವಾರ (ಮಾ.22) ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...