Homeಮುಖಪುಟನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

- Advertisement -
- Advertisement -

ಉತ್ತರ ಪ್ರದೇಶಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಲ್ಲಿನ ಮುಖ್ಯಮಂತ್ರಿ ಆದಿತ್ಯನಾಥ್ ತಯಾರಾಗುತ್ತಿದ್ದಾರೆ. ಅವರು ಸರಣಿ ಸಭೆಗಳಿಗೆ ತೆರಳಿ ಭಾಷಣ ಮಾಡಲು ಈಗಾಗಲೆ ಪ್ರಾರಂಭಿಸಿದ್ದಾರೆ. ಸೋಮವಾರ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬರುವ ಮುನ್ನ ಹೆಣ್ಣು ಮಕ್ಕಳು, ಸಹೋದರಿಯರು, ಎಮ್ಮೆಗಳು ಮತ್ತು ಗೂಳಿಗಳು ಅಸುರಕ್ಷಿತವಾಗಿದ್ದವು ಎಂದು ಹೇಳಿದ್ದಾರೆ.

“ನಮ್ಮ ಕಾರ್ಯಕರ್ತರು ಎಲ್ಲಿಯಾದರೂ ಇದ್ದಾಗ, ಕುಟುಂಬದ ಮಹಿಳೆಯರು ಬಂದು, ‘ಉತ್ತರ ಪ್ರದೇಶ ಸುರಕ್ಷಿತವಾಗಿ ಇರಬಹುದೆ?’ ಎಂದು ಕೇಳುತ್ತಿದ್ದರು. ಈ ಹಿಂದೆ ನಮ್ಮ ಹೆಣ್ಣುಮಕ್ಕಳು, ಸಹೋದರಿಯರು ಅಸುರಕ್ಷಿತರಾಗಿದ್ದರು. ಪಶ್ಚಿಮ ಯುಪಿಯ ಎಲ್ಲಾದರೂ ಎತ್ತಿನಗಾಡಿ ಹೋದರೂ, ಅದರ ಎಮ್ಮೆಗಳು ಮತ್ತು ಹೋರಿಗಳು ಸುರಕ್ಷಿತವಾಗಿರಲಿಲ್ಲ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.

ಅವರು ನಿನ್ನೆ ಲಕ್ನೋದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ವಕ್ತಾರರ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಈ ದೇಶ ಎಲ್ಲಾ ಧರ್ಮೀಯರಿಗೆ ಸೇರಿದ್ದು: ಆದಿತ್ಯನಾಥ್‌ರವರ ‘ಅಬ್ಬ ಜಾನ್’ ಹೇಳಿಕೆಗೆ ಬಿಜೆಪಿ ಮಿತ್ರ ಪಕ್ಷದ ಆಕ್ಷೇಪ

“ಈ ಎಲ್ಲಾ ಸಮಸ್ಯೆಗಳು ಪಶ್ಚಿಮ ಯುಪಿಯಲ್ಲಿ ಕಂಡು ಬಂದಿದ್ದವೆ ಹೊರತು, ಪೂರ್ವ ಯುಪಿಯಲ್ಲಿ ಅಲ್ಲ. ಆದರೆ ಇಂದು ಆ ರೀತಿ ಇಲ್ಲ. ನಿಮಗೆ ವ್ಯತ್ಯಾಸ ಕಾಣುತ್ತಿಲ್ಲವೇ? ಇಂದು ಎಮ್ಮೆಗಳು, ಎತ್ತುಗಳು ಅಥವಾ ಮಹಿಳೆಯರನ್ನು…ಬಲವಂತವಾಗಿ ಎತ್ತಿಕೊಂಡು ಹೋಗಲಾಗುತ್ತಿದೆಯೆ? ಇದಲ್ಲವೆ ವ್ಯತ್ಯಾಸ?” ಎಂದು ಆದಿತ್ಯನಾಥ್ ಹೇಳಿದ್ದಾರೆ.

“ಮೊದಲಿಗೆ ಉತ್ತರಪ್ರದೇಶದ ಗುರುತು ಯಾವುದಿತ್ತು? ಎಲ್ಲಿಂದ ರಸ್ತೆಯ ಗುಂಡಿಗಳು ಶುರುವಾಗುತ್ತಿದ್ದವೋ ಮತ್ತು ಎಲ್ಲಿಂದ ಕತ್ತಲು ಇದೆಯೋ ಅಲ್ಲಿಂದ ಉತ್ತರ ಪ್ರದೇಶ ಪ್ರಾರಂಭ ಎಂಬಂತಿತ್ತು. ಯಾವುದೇ ಸುಸಂಸ್ಕೃತ ವ್ಯಕ್ತಿ ರಾತ್ರಿಯಲ್ಲಿ ಬೀದಿಗಳಲ್ಲಿ ನಡೆಯಲು ಹೆದರುತ್ತಿದ್ದರು. ಆದರೆ ಇಂದು ಹಾಗೆ ಇಲ್ಲ” ಎಂದು ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಮುಂಚೆ ‘ಅಬ್ಬ ಜಾನ್’ ಎನ್ನುವವರಿಗೆ ಮಾತ್ರ ರೇಷನ್ ಸಿಗುತ್ತಿತ್ತು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆಗೆ ಭಾರೀ ವಿರೋಧ  

ದಿನಗಳ ಹಿಂದೆಯಷ್ಟೇ, ಹಿಂದಿನ ಸಮಾಜವಾದಿ ಪಕ್ಷದ ಸರ್ಕಾರವನ್ನು ಕೀಳು ಮಟ್ಟದಲ್ಲಿ ಅವರು ಟೀಕಿಸಿದ್ದರು. “2017 ಕ್ಕೂ ಮೊದಲು (ಸಮಾಜವಾದಿ ಸರ್ಕಾರ ಇದ್ದಗ) ‘ಅಬ್ಬಾ ಜಾನ್’ ಎಂದು ಹೇಳುವ ಜನರಿಗೆ ಮಾತ್ರ ಪಡಿತರ ಸಿಗುತ್ತಿತ್ತು” ಎಂದು ಆದಿತ್ಯನಾಥ್ ಹೇಳಿದ್ದರು. ‘ಅಬ್ಬಾ ಜಾನ್’ ಎಂದರೆ ಉರ್ದು ಭಾಷೆ ಮಾತನಾಡುವ ಮುಸ್ಲಿಮರು ತಂದೆಯನ್ನು ಸಂಭೋಧಿಸುವ ಪದವಾಗಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ. 2017 ರ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತವನ್ನು ಪಡೆದು ಅಧಿಕಾರಕ್ಕೆ ಏರಿತ್ತು. ಪಕ್ಷವು ಮತ್ತೆ ಯುಪಿಯಲ್ಲಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದು, ಮುಖ್ಯಮಂತ್ರಿ ಆದಿತ್ಯನಾಥ್ ಈಗಾಗಲೆ ತಯಾರಾಗುತ್ತಿದ್ದಾರೆ.

ಕೊರೊನಾ ಸಮಯದಲ್ಲಿ ಯುಪಿ ಸರ್ಕಾರದ ದುರಾಡಳಿತ ಮತ್ತು ರೈತ ಹೋರಾಟದ ಸಮಯದಲ್ಲಿ ಸರ್ಕಾರವು ನಡೆದುಕೊಂಡ ರೀತಿಯ ಬಗ್ಗೆ ರಾಜ್ಯದಲ್ಲಿ ಈಗಾಗಲೆ ಆಕ್ರೋಶ ವ್ಯಕ್ತವಾಗಿದ್ದು, ಆಡಳಿತ ವಿರೋಧಿ ಅಲೆಯಿದೆ. ಹೀಗಾಗಿ ತಮ್ಮ ಹಳೆಯ ನೀತಿಯಂತೆ ಮುಸ್ಲಿಂ ದ್ವೇಷ ಮತ್ತು ಕೋಮುವಾದವನ್ನು ಹಿಡಿದುಕೊಂಡು ಬಿಜೆಪಿ ಪ್ರಚಾರಕ್ಕೆ ತೆರಳುವ ಹಾದಿಯಲ್ಲಿದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...