Homeಮುಖಪುಟಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ ರಾಜ್ಯ,...

ಕಳೆದ ಒಂದು ವರ್ಷದಲ್ಲಿ ಒಂದು ಬಾರಿಯೂ ಮಣಿಪುರಕ್ಕೆ ತೆರಳದ ಮೋದಿ: ಈ ಅವಧಿಯಲ್ಲಿ ವಿವಿಧ ರಾಜ್ಯ, ವಿದೇಶಗಳಿಗೆ ಹಲವು ಬಾರಿ ಭೇಟಿ ನೀಡಿದ್ದರು; ಅಂಕಿ-ಅಂಶಗಳಲ್ಲಿ ಬಹಿರಂಗ

- Advertisement -
- Advertisement -

ಮಣಿಪುರದಲ್ಲಿ 2023ರ ಮೇ.3ರಂದು ಜನಾಂಗೀಯ ಹಿಂಸಾಚಾರ ನಡೆದಿದೆ. ಇದೀಗ ಈ ಹಿಂಸಾತ್ಮಕ ಘಟನೆ ನಡೆದು ಸರಿ ಸುಮಾರು ಒಂದು ವರ್ಷಗಳೇ ಕಳೆದಿದೆ. ಆದರೆ ಪ್ರಧಾನಿ ಮೋದಿ ಮಾತ್ರ ಈ ಒಂದು ವರ್ಷದ ಅವಧಿಯಲ್ಲಿ ಒಂದು ಬಾರಿ ಕೂಡ ಮಣಿಪುರಕ್ಕೆ ಭೇಟಿಯನ್ನು ನೀಡಿಲ್ಲ, ಆದರೆ ಮೋದಿ ಈ ಅವಧಿಯಲ್ಲಿ 162 ಸರಕಾರಿ ಅಥವಾ ಖಾಸಗಿ ಉದ್ದೇಶಗಳಿಗೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿರುವ ಈ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ವಿದೇಶಕ್ಕೆ 14 ಅಧಿಕೃತ ಭೇಟಿಗಳನ್ನು ಮಾಡಿದ್ದಾರೆ. ಮಣಿಪುರ ಹಿಂಸಾಚಾರವು 230ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಯಿತು ಮತ್ತು 60,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಮಣಿಪುರದಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿದೆ. ಇಷ್ಟೊಂದು ಭಯಾನಕ ಹಿಂಸಾಚಾರ ನಡೆದರೂ, ಸುಪ್ರೀಂಕೋರ್ಟ್‌ ಘಟನೆಯಲ್ಲಿ ಸರಕಾರದ ನಿಷ್ಕ್ರಿಯತೆಯನ್ನು ಗಮನಿಸಿದರೂ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ಸ್ಥಾನದಲ್ಲಿ ಮುಂದುವರೆದಿದ್ದಾರೆ, ಅವರ ಅಥವಾ ಅವರ ಸಚಿವ ಸಂಪುಟದ ಯಾವುದೇ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ಮಾಡಿಲ್ಲ ವಿರೋಧ ಪಕ್ಷಗಳು ಟೀಕಿಸುತ್ತಲೇ ಬಂದಿದೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿದ್ದರು. ಅವರು ಮಣಿಪುರದಿಂದಲೇ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಪ್ರಾರಂಭಿಸಿದ್ದರು.

ಪಿಎಂಒ ವೆಬ್‌ಸೈಟ್‌ನ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪ್ರಧಾನಿ ಮೋದಿ 2023ರ ಮೇ. ತಿಂಗಳಿನಿಂದ ಏಪ್ರಿಲ್ 2024ರ ನಡುವೆ ಗರಿಷ್ಠ 24 ಬಾರಿ ರಾಜಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅದಲ್ಲದೆ 22 ಬಾರಿ ಭೇಟಿ ಮಧ್ಯಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಈ ಎರಡೂ ರಾಜ್ಯಗಳಲ್ಲೂ ಕಳೆದ ನವೆಂಬರ್‌ನಲ್ಲಿ ಚುನಾವಣೆ ನಡೆದಿದೆ.

ಮಣಿಪುರದಲ್ಲಿ ಹಿಂಸಾಚಾರ ಆರಂಭವಾದಾಗ ಪ್ರಧಾನಿ ಮೋದಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದರು. ಬಿಬಿಸಿ ಅಂಕಿಅಂಶಗಳ ಪ್ರಕಾರ ಅವರು ಕಳೆದ ಒಂದು ವರ್ಷದಲ್ಲಿ 8 ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಈ ಅವಧಿಯಲ್ಲಿ ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ 10 ಬಾರಿ ಮತ್ತು ಲೋಕಸಭೆಗೆ ಗರಿಷ್ಠ ಸಂಸದರನ್ನು ಕಳುಹಿಸುವ ಉತ್ತರ ಪ್ರದೇಶಕ್ಕೆ 17 ಬಾರಿ ಭೇಟಿ ನೀಡಿದ್ದಾರೆ.

ಈ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶಗಳಿಗೆ ಭೇಟಿ ನೀಡಿದ್ದರು ಆದರೆ ಮಣಿಪುರಕ್ಕೆ ಭೇಟಿ ನೀಡಲಿಲ್ಲ. ಅವರು ಅಸ್ಸಾಂಗೆ ಮೂರು ಮತ್ತು ತ್ರಿಪುರಾ ಮತ್ತು ಅರುಣಾಚಲ ಪ್ರದೇಶಕ್ಕೆ ತಲಾ ಒಂದು ಬಾರಿ ಭೇಟಿ ನೀಡಿದ್ದಾರೆ. ಅಧಿಕೃತ ದಾಖಲೆಗಳ ಪ್ರಕಾರ, ‘ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಈಶಾನ್ಯ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮಾ.9ರಂದು ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು.

ಕಳೆದ ನವೆಂಬರ್‌ನಲ್ಲಿ 5 ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ 4 ರಾಜ್ಯಗಳಿಗೆ ಹೋಗಿದ್ದರು ಆದರೆ ಮಣಿಪುರದ ಹಿಂಸಾಚಾರದಿಂದ ಸ್ಥಳಾಂತರಗೊಂಡ ಕುಕಿ-ಜೋ ಸಮುದಾಯದ ಹೆಚ್ಚಿನ ಸಂಖ್ಯೆಯ ಜನರಿರುವ ಮಣಿಪುರದ ಪಕ್ಕದ ರಾಜ್ಯವಾದ ಮಿಜೋರಾಂಗೆ ಹೋಗಲಿಲ್ಲ. ಇದಲ್ಲದೆ ಮೇ.2023ರಿಂದ ಪ್ರಧಾನಿ ಮೋದಿ 14 ಅಂತರಾಷ್ಟ್ರೀಯ ಪ್ರವಾಸಗಳನ್ನು ಮಾಡಿದ್ದಾರೆ. ಇದು ಯುಎಇಯಲ್ಲಿ ಹಿಂದೂ ದೇವಾಲಯವನ್ನು ಉದ್ಘಾಟಿಸುವ ಭೇಟಿಯನ್ನು ಒಳಗೊಂಡಿದೆ.

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...