Homeಮುಖಪುಟಪಂಜಾಬ್‌: ಸಿಖ್ಖರ ಪವಿತ್ರ ಗ್ರಂಥದ ಪುಟಗಳನ್ನು ಹರಿದು ಹಾಕಿದ ಆರೋಪ; ಯುವಕನನ್ನು ಥಳಿಸಿ ಹತ್ಯೆ

ಪಂಜಾಬ್‌: ಸಿಖ್ಖರ ಪವಿತ್ರ ಗ್ರಂಥದ ಪುಟಗಳನ್ನು ಹರಿದು ಹಾಕಿದ ಆರೋಪ; ಯುವಕನನ್ನು ಥಳಿಸಿ ಹತ್ಯೆ

- Advertisement -
- Advertisement -

ಚಂಡೀಗಢ ಗುರುದ್ವಾರವೊಂದರ ಬಳಿ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಹಾಕಿದ ಆರೋಪದಲ್ಲಿ ಶನಿವಾರದಂದು  19 ವರ್ಷದ ಯುವಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಫಿರೋಝ್‌ಪುರ್‌ನಲ್ಲಿ ನಡೆದಿದೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಬಂಡಾಲಾ ಗ್ರಾಮದ ಗುರುದ್ವಾರದ ಆವರಣಕ್ಕೆ ಪ್ರವೇಶಿಸಿದ ತಳ್ಳಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಹಾಕಿದ್ದಾನೆ. ಈ ಘಟನೆ ಗುರುದ್ವಾರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಿಂದ ಆಕ್ರೋಶಿತ ಗುಂಪು ಆತನಿಗೆ ಥಳಿಸಿ ಹತ್ಯೆ ಮಾಡಿದೆ.

ಸಂತ್ರಸ್ತನ ತಂದೆ ಲಖ್ವಿಂದರ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ತನ್ನ ಮಗ ಬಕ್ಷೀಶ್‌ಗೆ ಮಾನಸಿಕ ಅಸ್ವಸ್ಥತೆಯಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರು ಮಗನ ವಿರುದ್ಧ ಅವಹೇಳನದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ತನ್ನ ಮಗನ ಸಾವಿಗೆ ಕಾರಣರಾದವರ ವಿರುದ್ಧ ಪೊಲೀಸರು ಪ್ರಕರಣವನ್ನು ದಾಖಲಿಸಬೇಕು ಎಂದು ಬಕ್ಷೀಶ್ ತಂದೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಪೋಲೀಸರ ಪ್ರಕಾರ, ಬಕ್ಷೀಶ್ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆತನನ್ನು ಕೆಲವರು ಹಿಡಿದಿದ್ದಾರೆ ಮತ್ತು ಘಟನೆಯ ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರು ಗುರುದ್ವಾರದಲ್ಲಿ ಜಮಾಯಿಸಿ ಯುವಕನಿಗೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆತ ಆ ಹೊತ್ತಿಗಾಗಲೇ ಮೃತಪಟ್ಟಿದ್ದ ಎಂದು ಹೇಳಲಾಗಿದೆ.

ಘಟನೆಯ ನಂತರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯ ಮಿಶ್ರಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಗುರು ಗ್ರಂಥ ಸಾಹಿಬ್‌ ಸತ್ಕಾರ್ ಸಮಿತಿಯ ಅಧ್ಯಕ್ಷ ಲಖ್ವೀರ್ ಸಿಂಗ್ ನೀಡಿದ ದೂರಿನ ಮೇರೆಗೆ ಆರಿಫ್ ಕೆ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295-ಎ ಅಡಿಯಲ್ಲಿ ಪೊಲೀಸರು ಮೃತ ಬಕ್ಷೀಶ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಅಕಾಲ್ ತಖ್ತ್ ಜಥೇದಾರ್ ಗಿಯಾನಿ ರಘಬೀರ್ ಸಿಂಗ್ ಫಿರೋಜ್‌ಪುರದಲ್ಲಿ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಹಾಕಿದ ಘಟನೆಯನ್ನು ಖಂಡಿಸಿದ್ದಾರೆ. ಹತ್ಯೆಯ ಆರೋಪಿಗಳ ಕುಟುಂಬವನ್ನು ಬಹಿಷ್ಕರಿಸಬೇಕು ಮತ್ತು ಯಾವುದೇ ಗುರುದ್ವಾರದಲ್ಲಿ ಆರೋಪಿಗಳ ಅಂತ್ಯಕ್ರಿಯೆಯನ್ನು ನಡೆಸಲು ಅನುಮತಿಸಬಾರದು, ಇಂತಹ ಯೋಜಿತ ಪಿತೂರಿಗಳು ಹಲವು ಕಾಲದಿಂದ ನಡೆಯುತ್ತಿದೆ, ಫಿರೋಜ್‌ಪುರದಲ್ಲಿ ನಡೆದ ಘಟನೆಯು ತೀವ್ರ ವಿಷಾದನೀಯ ಮತ್ತು ಸಿಖ್ಖರ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...