Homeಮುಖಪುಟಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

- Advertisement -
- Advertisement -

ಕಳೆದ ಹತ್ತು ದಿನಗಳಲ್ಲಿ ಪಶ್ಚಿಮ ಮತ್ತು ಪೂರ್ವ ಕರಾವಳಿಯಲ್ಲಿ ಎರಡು ಚಂಡಮಾರುತಗಳು ಬೀಸಿದವು. ಆದರೆ ದೇಶದ ಜನರು ತಮ್ಮ ಸಂಪೂರ್ಣ ಶಕ್ತಿಯೊಂದಿಗೆ ಹೋರಾಡಿ, ಕನಿಷ್ಠ ಪ್ರಾಣಹಾನಿಯೊಂದಿಗೆ ಅದನ್ನು ಎದರಿಸಿದರು. ಹಿಂದಿನ ಸಮಯಗಳಿಗೆ ಹೋಲಿಸಿದರೆ, ನಾವು ಗರಿಷ್ಠ ಜನರ ಜೀವಗಳನ್ನು ಉಳಿಸಲು ಸಮರ್ಥರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಮ್ಮ ಮಾಸಿಕ ಮನ್ ಕಿ ಬಾತ್‌ ರೇಡಿಯೋ ಕಾರ್ಯಕ್ರಮದ 77 ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, “ಚಂಡಮಾರುತದಿಂದ ಪೀಡಿತ ಎಲ್ಲಾ ರಾಜ್ಯಗಳ ಜನರು ಈ ಕಷ್ಟಕರ ಮತ್ತು ಅಸಾಮಾನ್ಯ ಪರಿಸ್ಥಿತಿಯಲ್ಲಿ ಧೈರ್ಯವನ್ನು ತೋರಿಸಿದ್ದಾರೆ. ಅದಕ್ಕಾಗಿ ನಾನು ಎಲ್ಲಾ ನಾಗರಿಕರನ್ನು ಗೌರವಯುತವಾಗಿ ಪ್ರಶಂಸಿಸಲು ಬಯಸುತ್ತೇನೆ” ಎಂದರು.

“ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಮತ್ತು ಪೂರ್ವ ಕರಾವಳಿಯಲ್ಲಿ ಯಾಸ್ ಚಂಡಮಾರುತವನ್ನು ದೇಶ ಎದುರಿಸಿತು. ವಿಪತ್ತಿನ ಈ ಕಷ್ಟಕರ ಮತ್ತು ಅಸಾಧಾರಣ ಪರಿಸ್ಥಿತಿಯಲ್ಲಿ, ಚಂಡಮಾರುತಗಳಿಂದ ಪೀಡಿತವಾದ ಎಲ್ಲಾ ರಾಜ್ಯಗಳ ಜನರು ಬಹಳ ತಾಳ್ಮೆ ಮತ್ತು ಶಿಸ್ತಿನಿಂದ ಧೈರ್ಯವನ್ನು ತೋರಿಸಿದ್ದಾರೆ. ಈ ಸಂಕಷ್ಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಈ ಅನಾಹುತದ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸ್ಥಳೀಯ ಆಡಳಿತಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಏಕಕಾಲದಲ್ಲಿ ಕೋವಿಡ್ ಮತ್ತು ನೈಸರ್ಗಿಕ ವಿಕೋಪ ಎರಡನ್ನೂ ಎದುರಿಸಿದ್ದೇವೆ. ವಾಸ್ತವವಾಗಿ, ಕೋವಿಡ್ ವಿರುದ್ಧದ ಯುದ್ಧವು ತುಂಬಾ ದೊಡ್ಡದಾಗಿದೆ. ರೈಲ್ವೆಯಂತೆ ನಮ್ಮ ದೇಶವು ವಾಯುಮಾರ್ಗ, ಜಲಮಾರ್ಗ ಮತ್ತು ಭೂಮಾರ್ಗ ಸೇರಿ ಎಲ್ಲಾ ಮೂರು ಮಾರ್ಗಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.

ನಮ್ಮ ಅನೇಕ ವಿಜ್ಞಾನಿಗಳು, ತಜ್ಞರು ಮತ್ತು ಉದ್ಯಮದ ತಂತ್ರಜ್ಞರು ಈ ಹೋರಾಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲ ಜನರ ಕೆಲಸವನ್ನು ತಿಳಿದುಕೊಳ್ಳುವ ಮತ್ತು ಅರ್ಥಮಾಡಿಕೊಳ್ಳುವ ಕುತೂಹಲ ಎಲ್ಲಾ ನಾಗರಿಕರ ಮನಸ್ಸಿನಲ್ಲಿದೆ ಎಂದರು.

ಆಮ್ಲಜನಕ, ಆಮ್ಲಜನಕ ಸಾಂದ್ರಕಗಳು ಮತ್ತು ಕ್ರಯೋಜೆನಿಕ್ ಟ್ಯಾಂಕರ್‌ಗಳನ್ನು ವಿದೇಶದಿಂದ ದೇಶಕ್ಕೆ ತರಲಾಗುತ್ತಿದೆ. ಆದ್ದರಿಂದ, ಭಾರತೀಯ ನೌಕಾಪಡೆ, ವಾಯುಪಡೆ, ಸೇನೆ ಮತ್ತು ಡಿಆರ್‌ಡಿಒ ಮತ್ತು ನಮ್ಮ ಸಂಸ್ಥೆಗಳು ಸಹ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.
ಒಂದೆಡೆ, ಖಾಲಿ ಟ್ಯಾಂಕರ್‌ಗಳನ್ನು ವಾಯುಪಡೆಯ ವಿಮಾನಗಳು ಆಮ್ಲಜನಕ ಘಟಕಗಳಿಗೆ ಸಾಗಿಸುವ ಕೆಲಸ ನಡೆಯುತ್ತಿದ್ದು, ಮತ್ತೊಂದೆಡೆ ಹೊಸ ಆಮ್ಲಜನಕ ಸ್ಥಾವರಗಳ ನಿರ್ಮಾಣವೂ ಪೂರ್ಣಗೊಳ್ಳುತ್ತಿದೆ ಎಂದರು.


ಇದನ್ನೂ ಓದಿ: ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...