Homeಮುಖಪುಟಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ ತ್ಯಜಿಸಿದವರು 56 ಪಟ್ಟು ಜಾಸ್ತಿ!

ದೇಶದ ಪೌರತ್ವವನ್ನು ಪಡೆಯುವವರ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ

- Advertisement -
- Advertisement -

ಕಳೆದ 5 ವರ್ಷಗಳಲ್ಲಿ ಭಾರತದ ಪೌರತ್ವ ಪಡೆದವರಿಗಿಂತ, ಇಲ್ಲಿನ ಪೌರತ್ವ ತ್ಯಜಿಸಿದವರು 56 ಪಟ್ಟು ಜಾಸ್ತಿ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿದೆ. ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಸರ್ಕಾರ ಹೇಳಿದ್ದು, ಐದು ವರ್ಷಗಳಲ್ಲಿ ಭಾರತದ ಪೌರತ್ವಕ್ಕಾಗಿ ಅರ್ಜಿ ಹಾಕಿದ್ದು ಕೇವಲ 10,645 ಜನರು ಎಂದು ಸರ್ಕಾರ ಲೋಕಸಭೆಯಲ್ಲಿ ಹೇಳಿದೆ.

ಕಳೆದ ಐದು ವರ್ಷಗಳಲ್ಲಿ ಅರ್ಜಿ ಸಲ್ಲಿಸಿದ 10,645 ಮಂದಿಯಲ್ಲಿ ಒಟ್ಟು 4,177 ಜನರಿಗೆ ಪೌರತ್ವ ನೀಡಲಾಗಿದೆ ಎಂದು ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದಾರೆ. ಭಾರತೀಯ ಪೌರತ್ವ ಪಡೆದವರಲ್ಲಿ 227 ಮಂದಿ ಅಮೆರಿಕದವರು, 7,782 ಜನರು ಪಾಕಿಸ್ತಾನದವರು, 795 ಜನರು ಅಫ್ಘಾನಿಸ್ತಾನದಿಂದ ಮತ್ತು 184 ಜನರು ಬಾಂಗ್ಲಾದೇಶಕ್ಕೆ ಸೇರಿದವರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದ ಕೇಂದ್ರ ಸರ್ಕಾರ

ಕಾಂಗ್ರೆಸ್ ಸಂಸದ ಹಿಬಿ ಈಡನ್ ಈ ಬಗ್ಗೆ ಪ್ರಶ್ನೆಯನ್ನು ಒಕ್ಕೂಟ ಸರ್ಕಾರದ ಮುಂದೆ ಇಟ್ಟಿದ್ದರು.

2017 ರಲ್ಲಿ 1,33,049, 2018 ರಲ್ಲಿ 1,34,561, 2019 ರಲ್ಲಿ 1,44,017, 2020 ರಲ್ಲಿ 85,248 ಮತ್ತು ಸೆಪ್ಟೆಂಬರ್ 30, 2021 ರವರೆಗೆ 1,11,287 ಭಾರತೀಯರು ದೇಶದ ಪೌರತ್ವವನ್ನು ತ್ಯಜಿಸಿ ಬೇರೆ ದೇಶದ ಪೌರತ್ವವನ್ನು ಪಡೆದಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ಪೌರತ್ವವನ್ನು ತ್ಯಜಿಸಿ ಇತರ ದೇಶಗಳ ಪೌರತ್ವವನ್ನು ಪಡೆದ ಭಾರತೀಯರ ಸಂಖ್ಯೆ

ಮಾಹಿತಿ: ಒಕ್ಕೂಟ ಸರ್ಕಾರೆ

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 1,33,83,718 ಭಾರತೀಯರು ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಒಕ್ಕೂಟ ಸರ್ಕಾರ ಹೇಳಿದೆ ಹೇಳಿದೆ.

ಇದನ್ನೂ ಓದಿ:ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದ ಅರ್ಜಿದಾರನಿಗೆ 25 ಸಾವಿರ ದಂಡ!

ಲೋಕಸಭೆಯ ಮುಂದೆ ನೀಡಿದ ಮಾಹಿತಿಯಂತೆ ದೇಶದ ಪೌರತ್ವವನ್ನು ಪಡೆಯುವವರ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ. 2016 ರಲ್ಲಿ 1,106 ಅರ್ಜಿದಾರರಿಗೆ ಭಾರತೀಯ ಪೌರತ್ವವನ್ನು ನೀಡಲಾಯಿತು. ಈ ಸಂಖ್ಯೆಯು 2017 ರಲ್ಲಿ ಕೇವಲ 817 ಜನರಿಗೆ ನೀಡುವುದರೊಂದಿಗೆ ಇಳಿದಿದೆ. 2018 ರಲ್ಲಿ 628, 2019 ರಲ್ಲಿ 987 ಮತ್ತು 2020 ರಲ್ಲಿ 639 ಜನರಿಗೆ ದೇಶದ ಪೌರತ್ವ ನೀಡಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಭಾರತೀಯ ಪೌರತ್ವವನ್ನು ಪಡೆದ ವ್ಯಕ್ತಿಗಳ ಸಂಖ್ಯೆ

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರು ಯಾರು ಅಕ್ರಮ ದಿಂದ ಬಂದು ಭಾರತದಲ್ಲಿ ನೆಲೆಸಿದ್ದರೋ ಅವರಿಗೆ ಇನ್ನು ಭಾರತದಲ್ಲಿ ತಮ್ಮ ಬೇಳೆ ಬೇಯಲ್ಲಾ ಎಂದು ತಮಗೆ ತಾವೇ ಜಾಗ ಕಾಲಿ ಮಾಡಿದ್ದು ಉತ್ತಮವೇ ,ಮುಂದಿನ ದಿನಗಳಲ್ಲಿ ಕೆಲ ದೇಶ ದ್ರೋಹಿ ಮೀಡಿಯಾಗಳಿಗೂ ಈ ಪರಿಸ್ಥಿತಿ ಲಬಿಸಿದರೆ ಇನ್ನೂ ಸಂತೋಷವೇ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...