Homeಮುಖಪುಟಕಳೆದ 9 ವರ್ಷದಲ್ಲಿ ದೇಶದ ಸಾಲ 100 ಲಕ್ಷ ಕೋಟಿ ರೂ. ಹೆಚ್ಚಳ: ಮೋದಿ ವೈಫಲ್ಯ...

ಕಳೆದ 9 ವರ್ಷದಲ್ಲಿ ದೇಶದ ಸಾಲ 100 ಲಕ್ಷ ಕೋಟಿ ರೂ. ಹೆಚ್ಚಳ: ಮೋದಿ ವೈಫಲ್ಯ ಬಿಚ್ಚಿಟ್ಟ ಕಾಂಗ್ರೆಸ್ ವಕ್ತಾರೆ

- Advertisement -
- Advertisement -

67 ವರ್ಷಗಳಲ್ಲಿ 14 ಪ್ರಧಾನಿಗಳು ಅಧಿಕಾರ ನಡೆಸಿದರೂ ದೇಶದ ಸಾಲ 55 ಲಕ್ಷ ಕೋಟಿ ರೂ. ಆಗಿತ್ತು. ಆದರೆ ಕಳೆದ 9 ವರ್ಷಗಳ ಅವಧಿಯಲ್ಲಿ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ದೇಶದ ಸಾಲ 155 ಲಕ್ಷ ಕೋಟಿ ರೂಪಾಯಿಗಳಿಗೆ ಏರಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿಕೊಂಡಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು, ಮೋದಿ ಅವಧಿಯಲ್ಲಾದ ಸಾಲದ ಕುರಿತು ಮಾಹಿತಿ ನೀಡಿದರು. ”2014ರಲ್ಲಿ ದೇಶದ ಸಾಲ 55 ಲಕ್ಷ ಕೋಟಿ ರೂಪಾಯಿ ಇತ್ತು ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ. ಸದ್ಯ ದೇಶದ ಸಾಲ 155 ಲಕ್ಷ ಕೋಟಿ ರೂಪಾಯಿ ಇದೆ. ಒಂಬತ್ತು ವರ್ಷದಲ್ಲಿಯೇ 100 ಲಕ್ಷ ಕೋಟಿ ರೂಪಾಯಿ ಸಾಲ ಮಾಡಲಾಗಿದೆ” ಎಂದು ಅಂಕಿ ಅಂಶಗಳ ಸಮೇತ ಕುಟುಕಿದರು.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ

“ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರವನ್ನು ತೆಗಳುತ್ತಿದ್ದರು ಭ್ರಷ್ಟ ಅಸಮರ್ಥ ಎಂದೆಲ್ಲ ಟೀಕಿಸುತ್ತಿದ್ದರು. ಆದರೆ, ಒಂಬತ್ತು ವರ್ಷದಲ್ಲಿ ದೇಶದ ಸಾಲದ ಪ್ರಮಾಣ ಏರಿಕೆಯಾಗಿದ್ದು ನೋಡಿದರೆ, ಟೀಕೆಗಳು ಮೋದಿ ಅವರಿಗೇ ಹೆಚ್ಚು ಸಮಂಜಸ ಎನಿಸುತ್ತವೆ, ದೇಶದ ಆರ್ಥಿಕತೆ ಹಾಳು ಮಾಡಿದ್ದು, ನಿರುದ್ಯೋಗ ಪ್ರಮಾಣ ಗಣನೀಯವಾಗಿ ವರಿಕೆಯಾಗಿದ್ದು ಹಣದುಬ್ಬರ ಹೆಚ್ಚಳ ಸೇರಿ ಹಲವು ದಿಸೆಯಲ್ಲಿ ದೇಶವನ್ನು ಮೋದಿ ಸರ್ಕಾರ ಹಾಳುಮಾಡಿದೆ. ಎಲ್ಲ ನಕಾರಾತ್ಮಕ ಏರಿಕೆಗಳು ಎಚ್ಚರಿಕೆಯ ಗಂಟೆಗಳಾಗಿವೆ” ಎಂದು ಹೇಳಿದರು.

”ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕದ 67 ವರ್ಷದಲ್ಲಿ 14 ಪ್ರಧಾನಿಗಳು 55 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದರು. ಆದರೆ, ಮೋದಿ ಅವರೊಬ್ಬರೇ.100 ಕೋಟಿ ರೂಪಾಯಿ ಸಾಲ ಮಾಡಿರುವುದು ಅಪಾಯಕಾರಿ ಸಂಗತಿಯಾಗಿದೆ. ಸದ್ಯದ ಆರ್ಥಿಕ ಬೆಳವಣಿಗೆಯ ಕುರಿತ ಮಾಹಿತಿಯು ಹೆಡ್‌ಲೈನ್‌ ಮ್ಯಾನೇಜ್‌ಮೆಂಟ್‌ ರೀತಿಯೇ ಆಗಿದೆ ಇದರಿಂದ ದೇಶದ ವಿತ್ತೀಯ ಸ್ಥಿತಿ ಸುಧಾರಣೆಯಾಗುವುದಿಲ್ಲ” ಎಂದು ತಿಳಿಸಿದರು.

”ಆರ್ಥಿಕ ನಿರ್ವಹಣೆಯು ಮುಖ್ಯಾಂಶ ನಿರ್ವಹಣೆಯಂತೆ ಅಲ್ಲ” ಎಂದು ಶ್ರೀನೇಟ್ ಹೇಳಿದರು. ”ಇದನ್ನು ಟೆಲಿಪ್ರಾಂಪ್ಟರ್‌ಗಳ ಮೂಲಕ ಮಾಡಲು ಸಾಧ್ಯವಿಲ್ಲ ಮತ್ತು ಖಂಡಿತವಾಗಿಯೂ ವಾಟ್ಸಾಪ್ ಫಾರ್ವರ್ಡ್‌ಗಳ ಮೂಲಕ ಅಲ್ಲ. ನಾವು ಭಾರತೀಯ ಆರ್ಥಿಕತೆಯ ಬಗ್ಗೆ ಶ್ವೇತಪತ್ರವನ್ನು ಕೋರುತ್ತೇವೆ ಏಕೆಂದರೆ ದೋಷಗಳ ಪಟ್ಟಿ ದೊಡ್ಡದಿದೆ” ಎಂದರು.

”ದೇಶದ ಸಂಪತ್ತಿನ 3% ಅನ್ನು ಹೊಂದಿರುವ 50% ಭಾರತೀಯರು ಸರಕು ಮತ್ತು ಸೇವಾ ತೆರಿಗೆಯ 64% ಅನ್ನು ಪಾವತಿಸಿದರೆ, ದೇಶದ 80% ಸಂಪನ್ಮೂಲಗಳನ್ನು ಹೊಂದಿರುವ 10% ಶ್ರೀಮಂತರು ಅದರಲ್ಲಿ 3% ಮಾತ್ರ ಪಾವತಿಸಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರರು ಆರೋಪಿಸಿದ್ದಾರೆ.

ದೇಶದ ಜನಸಂಖ್ಯೆಯ ಕೆಳಭಾಗದ 50% ಜನರು ಅಗ್ರ 10% ಕ್ಕೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಪಾವತಿಸುತ್ತಾರೆ ಎಂದು ವರದಿ ಹೇಳಿದೆ. ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ, 64.3% ಜನಸಂಖ್ಯೆಯ ಕೆಳಭಾಗದ 50% ರಿಂದ ಭರಿಸಲಾಗಿದೆ.

ಇದನ್ನೂ ಓದಿ: ಒರಿಸ್ಸಾ ರೈಲು ದುರಂತಕ್ಕೆ ಮೋದಿ ಸರ್ಕಾರ ಹೊಣೆಯಲ್ಲವೇ?

“ಈ ಹೆಚ್ಚುತ್ತಿರುವ ಸಾಲವನ್ನು ಪಾವತಿಸಲು ಭಾರತವು ವಾರ್ಷಿಕ 11 ಲಕ್ಷ ಕೋಟಿ ರೂಪಾಯಿಗಳ ಬಡ್ಡಿ ಪಾವತಿಯನ್ನು ಭರಿಸುತ್ತಿದೆ” ಎಂದು ಶ್ರೀನೇಟ್ ಶನಿವಾರ ಹೇಳಿದರು.

”ಸಿಎಜಿ [ಕಂಟ್ರೋಲರ್ ಮತ್ತು ಆಡಿಟರ್ ಜನರಲ್] ವರದಿಯ ಪ್ರಕಾರ, 2020ರಲ್ಲಿ ನಮ್ಮ ಸಾಲದ ಸ್ಥಿರತೆ ಋಣಾತ್ಮಕವಾಗಿದೆ ಮತ್ತು ನಂತರ ಜಿಡಿಪಿಗೆ ಸಾಲವು ಕೇವಲ 52.5% ರಷ್ಟಿತ್ತು, ಈಗ ಅದು 84% ರಷ್ಟಿದೆ” ಎಂದು ಅಂಕಿಅಂಶಗಳನ್ನು ನೀಡಿದರು.

ಭಾರತವು ಪ್ರತಿ ವರ್ಷ ತನ್ನ ಒಟ್ಟು ಆಂತರಿಕ ಉತ್ಪನ್ನದ 15% ರಷ್ಟು ಸಾಲವನ್ನು ಪಡೆಯಬೇಕಾಗಿರುವುದು ಗಮನಾರ್ಹವಾಗಿದೆ ಎಂದು IMF ಹೇಳಿತ್ತು. ಸರ್ಕಾರ ಸಾಲವನ್ನು ಹೇಗೆ ಬಳಸಿಕೊಳ್ಳುತ್ತಿದೆ ಎಂದು ಶನಿವಾರ ಕಾಂಗ್ರೆಸ್ ಪ್ರಶ್ನೆ ಎತ್ತಿತ್ತು.

”ಬಡವರು ಅಥವಾ ಮಧ್ಯಮ ವರ್ಗದವರು ಈ ಸಾಲದಿಂದ ಯಾವುದೇ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆಯೇ” ಎಂದು ಶ್ರೀನೇಟ್ ಕೇಳಿದರು. ಈ ಸಾಲದ ಲಾಭವನ್ನು ಕೈಗಾರಿಕೋದ್ಯಮಿಗಳು ಮಾತ್ರ ಪಡೆಯುತ್ತಿದ್ದಾರೆ. ಸಾಲದ ಹೊರತಾಗಿಯೂ 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿರುವ ವರ್ಗಕ್ಕೆ ಪ್ರವೇಶಿಸಿದ್ದಾರೆ, 83% ಜನರ ಆದಾಯ ಕಡಿಮೆಯಾಗಿದೆ, 11 ಸಾವಿರಕ್ಕೂ ಹೆಚ್ಚು ಸಣ್ಣ-ಮಧ್ಯಮ ಕೈಗಾರಿಕೆಗಳು ಮುಚ್ಚಲ್ಪಟ್ಟವು, ಆದರೆ ಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಾಗಿದೆ. ಮೋದಿಯವರ ಆಪ್ತರು ಮಾತ್ರ ಈ ಸಾಲದ ಪ್ರತಿಫಲವನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದರು.

ಆಕ್ಸ್‌ಫ್ಯಾಮ್ ವರದಿಯ ಪ್ರಕಾರ, ಭಾರತದಲ್ಲಿ ಒಟ್ಟು ಬಿಲಿಯನೇರ್‌ಗಳ ಸಂಖ್ಯೆ 2020 ಲ್ಲಿ 102 ರಿಂದ 2021 ರಲ್ಲಿ 142 ಮತ್ತು 2022 ರಲ್ಲಿ 166ಕ್ಕೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...