Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

ಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂರುತ್ತಾರಾ…?

ಪ್ರದರ್ಶನ ಪಿತಾಮಹ ಮೋದಿಯವರು ಗಳಿಗೆಗೊಂದು ನಾಟಕ ಮಾಡುತ್ತಾರೆ, ಪ್ರಹಸನ ಮಾಡುತ್ತಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೋದಿ ತಬ್ಬಿಕೊಂಡಿದ್ದೋ ತಬ್ಬಿಕೊಂಡಿದ್ದು. ಇಷ್ಟು cheap ಆಗಿ ಬಿಟ್ಟರೇ ಈ ಇಬ್ಬರೂ?

ಬ್ರಿಟನ್ನಿನ ಮಹಾರಾಣಿ ಯಾರದಾದರೂ ಕೈ ಕುಲುಕಬೇಕಾದರೆ ಕೈಗೆ ಕೈಚೀಲ ಹಾಕಿಕೊಳ್ಳುತ್ತಾರೆ. ಕೈ ಕುಲುಕುವವನಿಗೆ ಯಾವ ಚರ್ಮರೋಗ ಇದೆಯೋ ಎಂದು ಹೆದರಿಕೆ. ಮೋದಿ, ಟ್ರಂಪ್‍ಗಳಿಗೆ ಅದೆಷ್ಟು ಕಾಯಿಲೆ ಇದೆಯೋ? ಆದರೂ ಒಬ್ಬರನ್ನೊಬ್ಬರನ್ನು ತಬ್ಬಿಕೊಳ್ಳುವುದರಲ್ಲಿ ಅವರ ಅಟ್ಟಹಾಸವೆಷ್ಟು? ಸಭ್ಯತೆ ಮೀರಿ ನಡೆದುಕೊಳ್ಳುವುದು ಅವರಿಗೆ ಭೂಷಣವಲ್ಲ. ಟ್ರಂಪ್, ಮೋದಿಯವರನ್ನು ಭಾರತದ ರಾಷ್ಟ್ರಪಿತ ಮಾಡಿದ. ಗಾಂಧೀಜಿ ಸೋಗು ಹಾಕಿದ್ದು ರಾಷ್ಟ್ರಪಿತ, ಮೋದಿಯೇ ಅಸಲಿ ರಾಷ್ಟ್ರಪಿತ. ಗಾಂಧೀಜಿ ಹತ್ಯೆಯಾದ 72 ವರ್ಷಗಳ ಮೇಲೆ ಅಮೆರಿಕದ ಅಧ್ಯಕ್ಷರು ಮೋದಿಯವರನ್ನೇ ನಿಜವಾದ ರಾಷ್ಟ್ರಪಿತ ಮಾಡಿದ್ದಾರೆ. ನಕಲಿ ರಾಷ್ಟ್ರಪಿತ ಗಾಂಧೀಜಿಯನ್ನು ಬಯಲಿಗೆಳೆದು ಅಸಲಿ ಮೋದಿಯನ್ನು ರಾಷ್ಟ್ರಪಿತನ ಸ್ಥಾನದಲ್ಲಿ ಕೂಡಿಸಿದ ಟ್ರಂಪ್‍ಗೆ ಆರ್‍ಎಸ್‍ಎಸ್ ಕೃತಜ್ಞತೆಗಳನ್ನು ಅರ್ಪಿಸಬೇಕು. ಮುಂದೆ ಒಂದು ದಿನ ನಿಜವಾದ ರಾಮ ಮೋದಿಯೇ ಹೊರತು ಅಯೋಧ್ಯೆ ರಾಮನಲ್ಲ ಎನ್ನುವ ಕಾಲ ಬರಲೂಬಹುದು.

ಸೆಕ್ಷನ್ 370 ನ್ನು ಹಿಂಪಡೆದು ಕಾಶ್ಮೀರವನ್ನು ಒಡೆದು, ಪ್ರಜಾಪ್ರಭುತ್ವವನ್ನು ಕೊನೆಗಾಣಿಸಿ ಕಾಶ್ಮೀರವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳುವ ಮೋದಿ ಸರ್ಕಾರದ ವಿರುದ್ಧ 250 ಭಾರತೀಯ ಗಣ್ಯರು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಶಿಕ್ಷಣ ತಜ್ಞರು, ಪತ್ರಕರ್ತರು, ರಾಜಕೀಯ ನಾಯಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಕಾಶ್ಮೀರದ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸಬೇಕು. ಅಲ್ಲಿ ವಿಧಾನಸಭೆಯ ಚುನಾವಣೆ ನಡೆಸಬೇಕು. 370ನೇ ವಿಧಿಯನ್ನು ರದ್ದುಪಡಿಸುವ ವಿಚಾರದಲ್ಲಿ ಅಲ್ಲಿಯ ಪ್ರಜೆಗಳ ಅಭಿಪ್ರಾಯವನ್ನು ಪಡೆದೇ ಮುಂದುವರೆಯಬೇಕು. ಅಲ್ಲಿಯ ಗಣ್ಯರ ಅಭಿಪ್ರಾಯವನ್ನು ಪಡೆಯದೇ ನಿರ್ಧಾರಕ್ಕೆ ಬಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ. ಕಣಿವೆ ರಾಜ್ಯದಲ್ಲಿನ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸುದ್ದಿ ಮಾಧ್ಯಮಗಳನ್ನು ಅಡಗಿಸಿಟ್ಟು, ಭಾರತದ ಇತರ ಭಾಗಗಳಿಗೆ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಹರಡದಂತೆ ತಡೆಗಟ್ಟಿರುವುದು ಸರಿಯಲ್ಲ ಎಂದೂ ಈ ಗಣ್ಯರು ಮೋದಿಯವರಿಗೆ ಬರೆದಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 45 ಜನ ಗಣ್ಯರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯಕ್ಕೆ ಹೋಗಿದ್ದನ್ನು ಖಂಡಿಸಿ ಚಲನಚಿತ್ರ ಪ್ರಮುಖರು, ಕಲಾವಿದರು, ಪತ್ರಿಕಾ ಪ್ರತಿನಿಧಿಗಳು ಮೊದಿಯವರಿಗೆ ಪತ್ರ ಬರೆದು ಮೋದಿಯವರ ಆಡಳಿತ ರೀತಿಯನ್ನ ಒಪ್ಪದವರ ಮೇಲೆ ರಾಜದ್ರೋಹ ಆಪಾದನೆ ಹೊರಿಸುವುದು ಎಷ್ಟು ಸರಿ? ಪ್ರಧಾನಮಂತ್ರಿಯನ್ನು ಪ್ರಶ್ನಿಸುವ ಹಕ್ಕು ಪ್ರಜೆಗಳಿಗೆ ಇಲ್ಲವೇ? ಎಂದು ನೂರಾರು ಗಣ್ಯರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಆ 49 ಗಣ್ಯರ ಮೇಲೆ ಹಾಕಿದ್ದ ಮೊಕದ್ದಮೆಯನ್ನು ಹಿಂಪಡೆಯಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಗೆಲುವು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂಡುವುದಿಲ್ಲ. ಬದಲಿಗೆ ಸರ್ಕಾರದ ಹುಚ್ಚಾಟಗಳನ್ನು ಪ್ರತಿಭಟಿಸುತ್ತಾರೆ. ಹಿಟ್ಲರ್‍ಗಿರಿ ಬೆಳೆಯಲು ಬಿಡುವುದಿಲ್ಲ ಎಂಬುದು ಮೇಲೆ ಹೇಳಿದ ಎರಡು ಪ್ರಕರಣಗಳಿಂದ ಸಾಬೀತಾಗಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆ‘Halt the hate’ ಎಂದು ಭಾರತ ಸರ್ಕಾರಕ್ಕೆ ತಿಳಿಸಿದೆ. ದ್ವೇಷಾಪರಾಧ, ಗುಂಪು ಹಲ್ಲೆಯಂತಹ ಕೃತ್ಯಗಳು 2017-18ರಲ್ಲಿ ಕಡಿಮೆ ಇದ್ದದ್ದು 2019ರ ಮೊದಲ ಆರು ತಿಂಗಳಲ್ಲಿ ಅತಿಹೆಚ್ಚು ಘಟನೆಗಳು ನಡೆದಿವೆ.

2015ರಲ್ಲಿ ದ್ವೇಷಾಪರಾಧಗಳು 51 ಇತ್ತು. 2016ರಲ್ಲಿ 240, 2017ರಲ್ಲಿ 212, 2018ರಲ್ಲಿ 210 ಕೃತ್ಯಗಳು ಸಂಭವಿಸಿದ್ದರೆ 2019ರ ಮೊದಲ ಆರು ತಿಂಗಳಲ್ಲೇ 180 ಕೃತ್ಯಗಳು ನಡೆದಿವೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿ ಆಮ್ನೆಸ್ಟಿ ತನ್ನ ಕಳವಳ ವ್ಯಕ್ತಪಡಿಸಿದೆ. ನಡೆದಿರುವ ಒಟ್ಟು 180 ಪ್ರಕರಣಗಳಲ್ಲಿ ಧರ್ಮದ ಹೆಸರಿನಲ್ಲಿ 44 ಕೃತ್ಯಗಳು ನಡೆದಿವೆ. ಈ ಪೈಕಿ 40 ಪ್ರಕರಣಗಳು ಮುಸ್ಲಿಮರ ಮೇಲೆ, 4 ಕೃತ್ಯಗಳು ಕ್ರಿಶ್ಚಿಯನ್ನರ ಮೇಲೆ ನಡೆದಿವೆ. ಮೋದಿ ಇದುವರೆಗೂ ಈ ದುಷ್ಕೃತ್ಯ ನಡೆಯುತ್ತಿದ್ದರೂ ಒಮ್ಮೆಯೂ ಅದರ ಬಗೆಗೆ ಬಾಯಿ ಬಿಟ್ಟಿಲ್ಲ. ಮೋದಿಯ ಈ ದಿವ್ಯ ಮೌನವನ್ನು ದುಷ್ಕೃತ್ಯ ನಡೆಯುತ್ತಿರುವುದಕ್ಕೆ ಮೋದಿಯವರ ಸಮ್ಮತಿ ಇದೆಯೆಂದು ಅರ್ಥೈಸಬೇಕಾದಿತು.

ಇದಲ್ಲದೆ 2000 ದಿಂದ 2018ರ ನಡುವೆ ಭಾರತದಲ್ಲಿ ಕರ್ತವ್ಯನಿರತರಾಗಿದ್ದ 64 ಪತ್ರಕರ್ತರ ಹತ್ಯೆ ಆಗಿದೆ. ಪತ್ರಕರ್ತರ ವಿರುದ್ಧ ವಿವಿಧ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ. 12 ರಾಜ್ಯಗಳಲ್ಲಿ 2000-2018ರ ಮಧ್ಯೆ ತಮ್ಮ ವಿಮರ್ಶಾತ್ಮಕ ಬರವಣಿಗೆಗಾಗಿ 21 ಪತ್ರಕರ್ತರ ಮೇಲೆ ಖಟ್ಲೆ ಹೂಡಲಾಗಿದೆ. 2017ರ ಸೆಪ್ಟಂಬರ್‌ 5 ರಂದು ತಮ್ಮ ಮನೆಗೆ ಪ್ರವೇಶ ಮಾಡುವಾಗಲೇ ‘ಗೌರಿ ಲಂಕೇಶ್’ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಲಾಯಿತು. ಹಾಗೂ 2018ರ ಜೂನ್14 ರಂದು ರೈಸಿಂಗ್ ಕಾಶ್ಮೀರದ ಸಂಪಾದಕರಾದ ಶುಜಾತ್ ಬುಕಾರಿಯವರ ಹತ್ಯೆಯಾಯಿತು. ಹಲ್ಲೆಗೊಳಗಾದ 65 ಪತ್ರಕರ್ತರ ವ್ಯಕ್ತಿ ವಿವರಗಳನ್ನು ‘Silencing Journalists’ ಎಂಬ ಪುಸ್ತಕದಲ್ಲಿ ದಾಖಲಿಸಲಾಗಿದೆ.

ಒಟ್ಟಿನಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ವರ್ಗದ ಜನರ ಮೇಲೂ ಹಲ್ಲೆ ಮಾಡುವುದು ಅಧಿಕಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...