Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

ಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂರುತ್ತಾರಾ…?

ಪ್ರದರ್ಶನ ಪಿತಾಮಹ ಮೋದಿಯವರು ಗಳಿಗೆಗೊಂದು ನಾಟಕ ಮಾಡುತ್ತಾರೆ, ಪ್ರಹಸನ ಮಾಡುತ್ತಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೋದಿ ತಬ್ಬಿಕೊಂಡಿದ್ದೋ ತಬ್ಬಿಕೊಂಡಿದ್ದು. ಇಷ್ಟು cheap ಆಗಿ ಬಿಟ್ಟರೇ ಈ ಇಬ್ಬರೂ?

ಬ್ರಿಟನ್ನಿನ ಮಹಾರಾಣಿ ಯಾರದಾದರೂ ಕೈ ಕುಲುಕಬೇಕಾದರೆ ಕೈಗೆ ಕೈಚೀಲ ಹಾಕಿಕೊಳ್ಳುತ್ತಾರೆ. ಕೈ ಕುಲುಕುವವನಿಗೆ ಯಾವ ಚರ್ಮರೋಗ ಇದೆಯೋ ಎಂದು ಹೆದರಿಕೆ. ಮೋದಿ, ಟ್ರಂಪ್‍ಗಳಿಗೆ ಅದೆಷ್ಟು ಕಾಯಿಲೆ ಇದೆಯೋ? ಆದರೂ ಒಬ್ಬರನ್ನೊಬ್ಬರನ್ನು ತಬ್ಬಿಕೊಳ್ಳುವುದರಲ್ಲಿ ಅವರ ಅಟ್ಟಹಾಸವೆಷ್ಟು? ಸಭ್ಯತೆ ಮೀರಿ ನಡೆದುಕೊಳ್ಳುವುದು ಅವರಿಗೆ ಭೂಷಣವಲ್ಲ. ಟ್ರಂಪ್, ಮೋದಿಯವರನ್ನು ಭಾರತದ ರಾಷ್ಟ್ರಪಿತ ಮಾಡಿದ. ಗಾಂಧೀಜಿ ಸೋಗು ಹಾಕಿದ್ದು ರಾಷ್ಟ್ರಪಿತ, ಮೋದಿಯೇ ಅಸಲಿ ರಾಷ್ಟ್ರಪಿತ. ಗಾಂಧೀಜಿ ಹತ್ಯೆಯಾದ 72 ವರ್ಷಗಳ ಮೇಲೆ ಅಮೆರಿಕದ ಅಧ್ಯಕ್ಷರು ಮೋದಿಯವರನ್ನೇ ನಿಜವಾದ ರಾಷ್ಟ್ರಪಿತ ಮಾಡಿದ್ದಾರೆ. ನಕಲಿ ರಾಷ್ಟ್ರಪಿತ ಗಾಂಧೀಜಿಯನ್ನು ಬಯಲಿಗೆಳೆದು ಅಸಲಿ ಮೋದಿಯನ್ನು ರಾಷ್ಟ್ರಪಿತನ ಸ್ಥಾನದಲ್ಲಿ ಕೂಡಿಸಿದ ಟ್ರಂಪ್‍ಗೆ ಆರ್‍ಎಸ್‍ಎಸ್ ಕೃತಜ್ಞತೆಗಳನ್ನು ಅರ್ಪಿಸಬೇಕು. ಮುಂದೆ ಒಂದು ದಿನ ನಿಜವಾದ ರಾಮ ಮೋದಿಯೇ ಹೊರತು ಅಯೋಧ್ಯೆ ರಾಮನಲ್ಲ ಎನ್ನುವ ಕಾಲ ಬರಲೂಬಹುದು.

ಸೆಕ್ಷನ್ 370 ನ್ನು ಹಿಂಪಡೆದು ಕಾಶ್ಮೀರವನ್ನು ಒಡೆದು, ಪ್ರಜಾಪ್ರಭುತ್ವವನ್ನು ಕೊನೆಗಾಣಿಸಿ ಕಾಶ್ಮೀರವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳುವ ಮೋದಿ ಸರ್ಕಾರದ ವಿರುದ್ಧ 250 ಭಾರತೀಯ ಗಣ್ಯರು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಶಿಕ್ಷಣ ತಜ್ಞರು, ಪತ್ರಕರ್ತರು, ರಾಜಕೀಯ ನಾಯಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಕಾಶ್ಮೀರದ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸಬೇಕು. ಅಲ್ಲಿ ವಿಧಾನಸಭೆಯ ಚುನಾವಣೆ ನಡೆಸಬೇಕು. 370ನೇ ವಿಧಿಯನ್ನು ರದ್ದುಪಡಿಸುವ ವಿಚಾರದಲ್ಲಿ ಅಲ್ಲಿಯ ಪ್ರಜೆಗಳ ಅಭಿಪ್ರಾಯವನ್ನು ಪಡೆದೇ ಮುಂದುವರೆಯಬೇಕು. ಅಲ್ಲಿಯ ಗಣ್ಯರ ಅಭಿಪ್ರಾಯವನ್ನು ಪಡೆಯದೇ ನಿರ್ಧಾರಕ್ಕೆ ಬಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ. ಕಣಿವೆ ರಾಜ್ಯದಲ್ಲಿನ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸುದ್ದಿ ಮಾಧ್ಯಮಗಳನ್ನು ಅಡಗಿಸಿಟ್ಟು, ಭಾರತದ ಇತರ ಭಾಗಗಳಿಗೆ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಹರಡದಂತೆ ತಡೆಗಟ್ಟಿರುವುದು ಸರಿಯಲ್ಲ ಎಂದೂ ಈ ಗಣ್ಯರು ಮೋದಿಯವರಿಗೆ ಬರೆದಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 45 ಜನ ಗಣ್ಯರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯಕ್ಕೆ ಹೋಗಿದ್ದನ್ನು ಖಂಡಿಸಿ ಚಲನಚಿತ್ರ ಪ್ರಮುಖರು, ಕಲಾವಿದರು, ಪತ್ರಿಕಾ ಪ್ರತಿನಿಧಿಗಳು ಮೊದಿಯವರಿಗೆ ಪತ್ರ ಬರೆದು ಮೋದಿಯವರ ಆಡಳಿತ ರೀತಿಯನ್ನ ಒಪ್ಪದವರ ಮೇಲೆ ರಾಜದ್ರೋಹ ಆಪಾದನೆ ಹೊರಿಸುವುದು ಎಷ್ಟು ಸರಿ? ಪ್ರಧಾನಮಂತ್ರಿಯನ್ನು ಪ್ರಶ್ನಿಸುವ ಹಕ್ಕು ಪ್ರಜೆಗಳಿಗೆ ಇಲ್ಲವೇ? ಎಂದು ನೂರಾರು ಗಣ್ಯರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಆ 49 ಗಣ್ಯರ ಮೇಲೆ ಹಾಕಿದ್ದ ಮೊಕದ್ದಮೆಯನ್ನು ಹಿಂಪಡೆಯಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಗೆಲುವು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂಡುವುದಿಲ್ಲ. ಬದಲಿಗೆ ಸರ್ಕಾರದ ಹುಚ್ಚಾಟಗಳನ್ನು ಪ್ರತಿಭಟಿಸುತ್ತಾರೆ. ಹಿಟ್ಲರ್‍ಗಿರಿ ಬೆಳೆಯಲು ಬಿಡುವುದಿಲ್ಲ ಎಂಬುದು ಮೇಲೆ ಹೇಳಿದ ಎರಡು ಪ್ರಕರಣಗಳಿಂದ ಸಾಬೀತಾಗಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆ‘Halt the hate’ ಎಂದು ಭಾರತ ಸರ್ಕಾರಕ್ಕೆ ತಿಳಿಸಿದೆ. ದ್ವೇಷಾಪರಾಧ, ಗುಂಪು ಹಲ್ಲೆಯಂತಹ ಕೃತ್ಯಗಳು 2017-18ರಲ್ಲಿ ಕಡಿಮೆ ಇದ್ದದ್ದು 2019ರ ಮೊದಲ ಆರು ತಿಂಗಳಲ್ಲಿ ಅತಿಹೆಚ್ಚು ಘಟನೆಗಳು ನಡೆದಿವೆ.

2015ರಲ್ಲಿ ದ್ವೇಷಾಪರಾಧಗಳು 51 ಇತ್ತು. 2016ರಲ್ಲಿ 240, 2017ರಲ್ಲಿ 212, 2018ರಲ್ಲಿ 210 ಕೃತ್ಯಗಳು ಸಂಭವಿಸಿದ್ದರೆ 2019ರ ಮೊದಲ ಆರು ತಿಂಗಳಲ್ಲೇ 180 ಕೃತ್ಯಗಳು ನಡೆದಿವೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿ ಆಮ್ನೆಸ್ಟಿ ತನ್ನ ಕಳವಳ ವ್ಯಕ್ತಪಡಿಸಿದೆ. ನಡೆದಿರುವ ಒಟ್ಟು 180 ಪ್ರಕರಣಗಳಲ್ಲಿ ಧರ್ಮದ ಹೆಸರಿನಲ್ಲಿ 44 ಕೃತ್ಯಗಳು ನಡೆದಿವೆ. ಈ ಪೈಕಿ 40 ಪ್ರಕರಣಗಳು ಮುಸ್ಲಿಮರ ಮೇಲೆ, 4 ಕೃತ್ಯಗಳು ಕ್ರಿಶ್ಚಿಯನ್ನರ ಮೇಲೆ ನಡೆದಿವೆ. ಮೋದಿ ಇದುವರೆಗೂ ಈ ದುಷ್ಕೃತ್ಯ ನಡೆಯುತ್ತಿದ್ದರೂ ಒಮ್ಮೆಯೂ ಅದರ ಬಗೆಗೆ ಬಾಯಿ ಬಿಟ್ಟಿಲ್ಲ. ಮೋದಿಯ ಈ ದಿವ್ಯ ಮೌನವನ್ನು ದುಷ್ಕೃತ್ಯ ನಡೆಯುತ್ತಿರುವುದಕ್ಕೆ ಮೋದಿಯವರ ಸಮ್ಮತಿ ಇದೆಯೆಂದು ಅರ್ಥೈಸಬೇಕಾದಿತು.

ಇದಲ್ಲದೆ 2000 ದಿಂದ 2018ರ ನಡುವೆ ಭಾರತದಲ್ಲಿ ಕರ್ತವ್ಯನಿರತರಾಗಿದ್ದ 64 ಪತ್ರಕರ್ತರ ಹತ್ಯೆ ಆಗಿದೆ. ಪತ್ರಕರ್ತರ ವಿರುದ್ಧ ವಿವಿಧ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ. 12 ರಾಜ್ಯಗಳಲ್ಲಿ 2000-2018ರ ಮಧ್ಯೆ ತಮ್ಮ ವಿಮರ್ಶಾತ್ಮಕ ಬರವಣಿಗೆಗಾಗಿ 21 ಪತ್ರಕರ್ತರ ಮೇಲೆ ಖಟ್ಲೆ ಹೂಡಲಾಗಿದೆ. 2017ರ ಸೆಪ್ಟಂಬರ್‌ 5 ರಂದು ತಮ್ಮ ಮನೆಗೆ ಪ್ರವೇಶ ಮಾಡುವಾಗಲೇ ‘ಗೌರಿ ಲಂಕೇಶ್’ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಲಾಯಿತು. ಹಾಗೂ 2018ರ ಜೂನ್14 ರಂದು ರೈಸಿಂಗ್ ಕಾಶ್ಮೀರದ ಸಂಪಾದಕರಾದ ಶುಜಾತ್ ಬುಕಾರಿಯವರ ಹತ್ಯೆಯಾಯಿತು. ಹಲ್ಲೆಗೊಳಗಾದ 65 ಪತ್ರಕರ್ತರ ವ್ಯಕ್ತಿ ವಿವರಗಳನ್ನು ‘Silencing Journalists’ ಎಂಬ ಪುಸ್ತಕದಲ್ಲಿ ದಾಖಲಿಸಲಾಗಿದೆ.

ಒಟ್ಟಿನಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ವರ್ಗದ ಜನರ ಮೇಲೂ ಹಲ್ಲೆ ಮಾಡುವುದು ಅಧಿಕಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...