Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

ಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂರುತ್ತಾರಾ…?

ಪ್ರದರ್ಶನ ಪಿತಾಮಹ ಮೋದಿಯವರು ಗಳಿಗೆಗೊಂದು ನಾಟಕ ಮಾಡುತ್ತಾರೆ, ಪ್ರಹಸನ ಮಾಡುತ್ತಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೋದಿ ತಬ್ಬಿಕೊಂಡಿದ್ದೋ ತಬ್ಬಿಕೊಂಡಿದ್ದು. ಇಷ್ಟು cheap ಆಗಿ ಬಿಟ್ಟರೇ ಈ ಇಬ್ಬರೂ?

ಬ್ರಿಟನ್ನಿನ ಮಹಾರಾಣಿ ಯಾರದಾದರೂ ಕೈ ಕುಲುಕಬೇಕಾದರೆ ಕೈಗೆ ಕೈಚೀಲ ಹಾಕಿಕೊಳ್ಳುತ್ತಾರೆ. ಕೈ ಕುಲುಕುವವನಿಗೆ ಯಾವ ಚರ್ಮರೋಗ ಇದೆಯೋ ಎಂದು ಹೆದರಿಕೆ. ಮೋದಿ, ಟ್ರಂಪ್‍ಗಳಿಗೆ ಅದೆಷ್ಟು ಕಾಯಿಲೆ ಇದೆಯೋ? ಆದರೂ ಒಬ್ಬರನ್ನೊಬ್ಬರನ್ನು ತಬ್ಬಿಕೊಳ್ಳುವುದರಲ್ಲಿ ಅವರ ಅಟ್ಟಹಾಸವೆಷ್ಟು? ಸಭ್ಯತೆ ಮೀರಿ ನಡೆದುಕೊಳ್ಳುವುದು ಅವರಿಗೆ ಭೂಷಣವಲ್ಲ. ಟ್ರಂಪ್, ಮೋದಿಯವರನ್ನು ಭಾರತದ ರಾಷ್ಟ್ರಪಿತ ಮಾಡಿದ. ಗಾಂಧೀಜಿ ಸೋಗು ಹಾಕಿದ್ದು ರಾಷ್ಟ್ರಪಿತ, ಮೋದಿಯೇ ಅಸಲಿ ರಾಷ್ಟ್ರಪಿತ. ಗಾಂಧೀಜಿ ಹತ್ಯೆಯಾದ 72 ವರ್ಷಗಳ ಮೇಲೆ ಅಮೆರಿಕದ ಅಧ್ಯಕ್ಷರು ಮೋದಿಯವರನ್ನೇ ನಿಜವಾದ ರಾಷ್ಟ್ರಪಿತ ಮಾಡಿದ್ದಾರೆ. ನಕಲಿ ರಾಷ್ಟ್ರಪಿತ ಗಾಂಧೀಜಿಯನ್ನು ಬಯಲಿಗೆಳೆದು ಅಸಲಿ ಮೋದಿಯನ್ನು ರಾಷ್ಟ್ರಪಿತನ ಸ್ಥಾನದಲ್ಲಿ ಕೂಡಿಸಿದ ಟ್ರಂಪ್‍ಗೆ ಆರ್‍ಎಸ್‍ಎಸ್ ಕೃತಜ್ಞತೆಗಳನ್ನು ಅರ್ಪಿಸಬೇಕು. ಮುಂದೆ ಒಂದು ದಿನ ನಿಜವಾದ ರಾಮ ಮೋದಿಯೇ ಹೊರತು ಅಯೋಧ್ಯೆ ರಾಮನಲ್ಲ ಎನ್ನುವ ಕಾಲ ಬರಲೂಬಹುದು.

ಸೆಕ್ಷನ್ 370 ನ್ನು ಹಿಂಪಡೆದು ಕಾಶ್ಮೀರವನ್ನು ಒಡೆದು, ಪ್ರಜಾಪ್ರಭುತ್ವವನ್ನು ಕೊನೆಗಾಣಿಸಿ ಕಾಶ್ಮೀರವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳುವ ಮೋದಿ ಸರ್ಕಾರದ ವಿರುದ್ಧ 250 ಭಾರತೀಯ ಗಣ್ಯರು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಶಿಕ್ಷಣ ತಜ್ಞರು, ಪತ್ರಕರ್ತರು, ರಾಜಕೀಯ ನಾಯಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಕಾಶ್ಮೀರದ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸಬೇಕು. ಅಲ್ಲಿ ವಿಧಾನಸಭೆಯ ಚುನಾವಣೆ ನಡೆಸಬೇಕು. 370ನೇ ವಿಧಿಯನ್ನು ರದ್ದುಪಡಿಸುವ ವಿಚಾರದಲ್ಲಿ ಅಲ್ಲಿಯ ಪ್ರಜೆಗಳ ಅಭಿಪ್ರಾಯವನ್ನು ಪಡೆದೇ ಮುಂದುವರೆಯಬೇಕು. ಅಲ್ಲಿಯ ಗಣ್ಯರ ಅಭಿಪ್ರಾಯವನ್ನು ಪಡೆಯದೇ ನಿರ್ಧಾರಕ್ಕೆ ಬಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ. ಕಣಿವೆ ರಾಜ್ಯದಲ್ಲಿನ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸುದ್ದಿ ಮಾಧ್ಯಮಗಳನ್ನು ಅಡಗಿಸಿಟ್ಟು, ಭಾರತದ ಇತರ ಭಾಗಗಳಿಗೆ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಹರಡದಂತೆ ತಡೆಗಟ್ಟಿರುವುದು ಸರಿಯಲ್ಲ ಎಂದೂ ಈ ಗಣ್ಯರು ಮೋದಿಯವರಿಗೆ ಬರೆದಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 45 ಜನ ಗಣ್ಯರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯಕ್ಕೆ ಹೋಗಿದ್ದನ್ನು ಖಂಡಿಸಿ ಚಲನಚಿತ್ರ ಪ್ರಮುಖರು, ಕಲಾವಿದರು, ಪತ್ರಿಕಾ ಪ್ರತಿನಿಧಿಗಳು ಮೊದಿಯವರಿಗೆ ಪತ್ರ ಬರೆದು ಮೋದಿಯವರ ಆಡಳಿತ ರೀತಿಯನ್ನ ಒಪ್ಪದವರ ಮೇಲೆ ರಾಜದ್ರೋಹ ಆಪಾದನೆ ಹೊರಿಸುವುದು ಎಷ್ಟು ಸರಿ? ಪ್ರಧಾನಮಂತ್ರಿಯನ್ನು ಪ್ರಶ್ನಿಸುವ ಹಕ್ಕು ಪ್ರಜೆಗಳಿಗೆ ಇಲ್ಲವೇ? ಎಂದು ನೂರಾರು ಗಣ್ಯರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಆ 49 ಗಣ್ಯರ ಮೇಲೆ ಹಾಕಿದ್ದ ಮೊಕದ್ದಮೆಯನ್ನು ಹಿಂಪಡೆಯಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಗೆಲುವು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂಡುವುದಿಲ್ಲ. ಬದಲಿಗೆ ಸರ್ಕಾರದ ಹುಚ್ಚಾಟಗಳನ್ನು ಪ್ರತಿಭಟಿಸುತ್ತಾರೆ. ಹಿಟ್ಲರ್‍ಗಿರಿ ಬೆಳೆಯಲು ಬಿಡುವುದಿಲ್ಲ ಎಂಬುದು ಮೇಲೆ ಹೇಳಿದ ಎರಡು ಪ್ರಕರಣಗಳಿಂದ ಸಾಬೀತಾಗಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆ‘Halt the hate’ ಎಂದು ಭಾರತ ಸರ್ಕಾರಕ್ಕೆ ತಿಳಿಸಿದೆ. ದ್ವೇಷಾಪರಾಧ, ಗುಂಪು ಹಲ್ಲೆಯಂತಹ ಕೃತ್ಯಗಳು 2017-18ರಲ್ಲಿ ಕಡಿಮೆ ಇದ್ದದ್ದು 2019ರ ಮೊದಲ ಆರು ತಿಂಗಳಲ್ಲಿ ಅತಿಹೆಚ್ಚು ಘಟನೆಗಳು ನಡೆದಿವೆ.

2015ರಲ್ಲಿ ದ್ವೇಷಾಪರಾಧಗಳು 51 ಇತ್ತು. 2016ರಲ್ಲಿ 240, 2017ರಲ್ಲಿ 212, 2018ರಲ್ಲಿ 210 ಕೃತ್ಯಗಳು ಸಂಭವಿಸಿದ್ದರೆ 2019ರ ಮೊದಲ ಆರು ತಿಂಗಳಲ್ಲೇ 180 ಕೃತ್ಯಗಳು ನಡೆದಿವೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿ ಆಮ್ನೆಸ್ಟಿ ತನ್ನ ಕಳವಳ ವ್ಯಕ್ತಪಡಿಸಿದೆ. ನಡೆದಿರುವ ಒಟ್ಟು 180 ಪ್ರಕರಣಗಳಲ್ಲಿ ಧರ್ಮದ ಹೆಸರಿನಲ್ಲಿ 44 ಕೃತ್ಯಗಳು ನಡೆದಿವೆ. ಈ ಪೈಕಿ 40 ಪ್ರಕರಣಗಳು ಮುಸ್ಲಿಮರ ಮೇಲೆ, 4 ಕೃತ್ಯಗಳು ಕ್ರಿಶ್ಚಿಯನ್ನರ ಮೇಲೆ ನಡೆದಿವೆ. ಮೋದಿ ಇದುವರೆಗೂ ಈ ದುಷ್ಕೃತ್ಯ ನಡೆಯುತ್ತಿದ್ದರೂ ಒಮ್ಮೆಯೂ ಅದರ ಬಗೆಗೆ ಬಾಯಿ ಬಿಟ್ಟಿಲ್ಲ. ಮೋದಿಯ ಈ ದಿವ್ಯ ಮೌನವನ್ನು ದುಷ್ಕೃತ್ಯ ನಡೆಯುತ್ತಿರುವುದಕ್ಕೆ ಮೋದಿಯವರ ಸಮ್ಮತಿ ಇದೆಯೆಂದು ಅರ್ಥೈಸಬೇಕಾದಿತು.

ಇದಲ್ಲದೆ 2000 ದಿಂದ 2018ರ ನಡುವೆ ಭಾರತದಲ್ಲಿ ಕರ್ತವ್ಯನಿರತರಾಗಿದ್ದ 64 ಪತ್ರಕರ್ತರ ಹತ್ಯೆ ಆಗಿದೆ. ಪತ್ರಕರ್ತರ ವಿರುದ್ಧ ವಿವಿಧ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ. 12 ರಾಜ್ಯಗಳಲ್ಲಿ 2000-2018ರ ಮಧ್ಯೆ ತಮ್ಮ ವಿಮರ್ಶಾತ್ಮಕ ಬರವಣಿಗೆಗಾಗಿ 21 ಪತ್ರಕರ್ತರ ಮೇಲೆ ಖಟ್ಲೆ ಹೂಡಲಾಗಿದೆ. 2017ರ ಸೆಪ್ಟಂಬರ್‌ 5 ರಂದು ತಮ್ಮ ಮನೆಗೆ ಪ್ರವೇಶ ಮಾಡುವಾಗಲೇ ‘ಗೌರಿ ಲಂಕೇಶ್’ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಲಾಯಿತು. ಹಾಗೂ 2018ರ ಜೂನ್14 ರಂದು ರೈಸಿಂಗ್ ಕಾಶ್ಮೀರದ ಸಂಪಾದಕರಾದ ಶುಜಾತ್ ಬುಕಾರಿಯವರ ಹತ್ಯೆಯಾಯಿತು. ಹಲ್ಲೆಗೊಳಗಾದ 65 ಪತ್ರಕರ್ತರ ವ್ಯಕ್ತಿ ವಿವರಗಳನ್ನು ‘Silencing Journalists’ ಎಂಬ ಪುಸ್ತಕದಲ್ಲಿ ದಾಖಲಿಸಲಾಗಿದೆ.

ಒಟ್ಟಿನಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ವರ್ಗದ ಜನರ ಮೇಲೂ ಹಲ್ಲೆ ಮಾಡುವುದು ಅಧಿಕಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...