Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

ಮೋದಿ ಆಡಳಿತದಲ್ಲಿ ಜನರ ಮೇಲಿನ ಹಲ್ಲೆ ಅಧಿಕವಾಗಿದೆ: ಎಚ್.ಎಸ್.ದೊರೆಸ್ವಾಮಿ

- Advertisement -
- Advertisement -

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂರುತ್ತಾರಾ…?

ಪ್ರದರ್ಶನ ಪಿತಾಮಹ ಮೋದಿಯವರು ಗಳಿಗೆಗೊಂದು ನಾಟಕ ಮಾಡುತ್ತಾರೆ, ಪ್ರಹಸನ ಮಾಡುತ್ತಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮೋದಿ ತಬ್ಬಿಕೊಂಡಿದ್ದೋ ತಬ್ಬಿಕೊಂಡಿದ್ದು. ಇಷ್ಟು cheap ಆಗಿ ಬಿಟ್ಟರೇ ಈ ಇಬ್ಬರೂ?

ಬ್ರಿಟನ್ನಿನ ಮಹಾರಾಣಿ ಯಾರದಾದರೂ ಕೈ ಕುಲುಕಬೇಕಾದರೆ ಕೈಗೆ ಕೈಚೀಲ ಹಾಕಿಕೊಳ್ಳುತ್ತಾರೆ. ಕೈ ಕುಲುಕುವವನಿಗೆ ಯಾವ ಚರ್ಮರೋಗ ಇದೆಯೋ ಎಂದು ಹೆದರಿಕೆ. ಮೋದಿ, ಟ್ರಂಪ್‍ಗಳಿಗೆ ಅದೆಷ್ಟು ಕಾಯಿಲೆ ಇದೆಯೋ? ಆದರೂ ಒಬ್ಬರನ್ನೊಬ್ಬರನ್ನು ತಬ್ಬಿಕೊಳ್ಳುವುದರಲ್ಲಿ ಅವರ ಅಟ್ಟಹಾಸವೆಷ್ಟು? ಸಭ್ಯತೆ ಮೀರಿ ನಡೆದುಕೊಳ್ಳುವುದು ಅವರಿಗೆ ಭೂಷಣವಲ್ಲ. ಟ್ರಂಪ್, ಮೋದಿಯವರನ್ನು ಭಾರತದ ರಾಷ್ಟ್ರಪಿತ ಮಾಡಿದ. ಗಾಂಧೀಜಿ ಸೋಗು ಹಾಕಿದ್ದು ರಾಷ್ಟ್ರಪಿತ, ಮೋದಿಯೇ ಅಸಲಿ ರಾಷ್ಟ್ರಪಿತ. ಗಾಂಧೀಜಿ ಹತ್ಯೆಯಾದ 72 ವರ್ಷಗಳ ಮೇಲೆ ಅಮೆರಿಕದ ಅಧ್ಯಕ್ಷರು ಮೋದಿಯವರನ್ನೇ ನಿಜವಾದ ರಾಷ್ಟ್ರಪಿತ ಮಾಡಿದ್ದಾರೆ. ನಕಲಿ ರಾಷ್ಟ್ರಪಿತ ಗಾಂಧೀಜಿಯನ್ನು ಬಯಲಿಗೆಳೆದು ಅಸಲಿ ಮೋದಿಯನ್ನು ರಾಷ್ಟ್ರಪಿತನ ಸ್ಥಾನದಲ್ಲಿ ಕೂಡಿಸಿದ ಟ್ರಂಪ್‍ಗೆ ಆರ್‍ಎಸ್‍ಎಸ್ ಕೃತಜ್ಞತೆಗಳನ್ನು ಅರ್ಪಿಸಬೇಕು. ಮುಂದೆ ಒಂದು ದಿನ ನಿಜವಾದ ರಾಮ ಮೋದಿಯೇ ಹೊರತು ಅಯೋಧ್ಯೆ ರಾಮನಲ್ಲ ಎನ್ನುವ ಕಾಲ ಬರಲೂಬಹುದು.

ಸೆಕ್ಷನ್ 370 ನ್ನು ಹಿಂಪಡೆದು ಕಾಶ್ಮೀರವನ್ನು ಒಡೆದು, ಪ್ರಜಾಪ್ರಭುತ್ವವನ್ನು ಕೊನೆಗಾಣಿಸಿ ಕಾಶ್ಮೀರವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳುವ ಮೋದಿ ಸರ್ಕಾರದ ವಿರುದ್ಧ 250 ಭಾರತೀಯ ಗಣ್ಯರು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಶಿಕ್ಷಣ ತಜ್ಞರು, ಪತ್ರಕರ್ತರು, ರಾಜಕೀಯ ನಾಯಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಕಾಶ್ಮೀರದ ಮೇಲೆ ಹೇರಿರುವ ನಿರ್ಬಂಧವನ್ನು ತೆರವುಗೊಳಿಸಬೇಕು. ಅಲ್ಲಿ ವಿಧಾನಸಭೆಯ ಚುನಾವಣೆ ನಡೆಸಬೇಕು. 370ನೇ ವಿಧಿಯನ್ನು ರದ್ದುಪಡಿಸುವ ವಿಚಾರದಲ್ಲಿ ಅಲ್ಲಿಯ ಪ್ರಜೆಗಳ ಅಭಿಪ್ರಾಯವನ್ನು ಪಡೆದೇ ಮುಂದುವರೆಯಬೇಕು. ಅಲ್ಲಿಯ ಗಣ್ಯರ ಅಭಿಪ್ರಾಯವನ್ನು ಪಡೆಯದೇ ನಿರ್ಧಾರಕ್ಕೆ ಬಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ. ಕಣಿವೆ ರಾಜ್ಯದಲ್ಲಿನ ನಾಯಕರನ್ನು ಗೃಹಬಂಧನದಲ್ಲಿಟ್ಟು, ಸುದ್ದಿ ಮಾಧ್ಯಮಗಳನ್ನು ಅಡಗಿಸಿಟ್ಟು, ಭಾರತದ ಇತರ ಭಾಗಗಳಿಗೆ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಹರಡದಂತೆ ತಡೆಗಟ್ಟಿರುವುದು ಸರಿಯಲ್ಲ ಎಂದೂ ಈ ಗಣ್ಯರು ಮೋದಿಯವರಿಗೆ ಬರೆದಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 45 ಜನ ಗಣ್ಯರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯಕ್ಕೆ ಹೋಗಿದ್ದನ್ನು ಖಂಡಿಸಿ ಚಲನಚಿತ್ರ ಪ್ರಮುಖರು, ಕಲಾವಿದರು, ಪತ್ರಿಕಾ ಪ್ರತಿನಿಧಿಗಳು ಮೊದಿಯವರಿಗೆ ಪತ್ರ ಬರೆದು ಮೋದಿಯವರ ಆಡಳಿತ ರೀತಿಯನ್ನ ಒಪ್ಪದವರ ಮೇಲೆ ರಾಜದ್ರೋಹ ಆಪಾದನೆ ಹೊರಿಸುವುದು ಎಷ್ಟು ಸರಿ? ಪ್ರಧಾನಮಂತ್ರಿಯನ್ನು ಪ್ರಶ್ನಿಸುವ ಹಕ್ಕು ಪ್ರಜೆಗಳಿಗೆ ಇಲ್ಲವೇ? ಎಂದು ನೂರಾರು ಗಣ್ಯರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ, ಆ 49 ಗಣ್ಯರ ಮೇಲೆ ಹಾಕಿದ್ದ ಮೊಕದ್ದಮೆಯನ್ನು ಹಿಂಪಡೆಯಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಗೆಲುವು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಆಡಳಿತ ನಡೆಸುವವರು ಸರ್ವಾಧಿಕಾರಿಗಳಂತೆ ದರ್ಪದಿಂದ ನಡೆಸಿಕೊಳ್ಳುವುದನ್ನು ಭಾರತೀಯ ಜನತೆ ಮತ್ತು ಭಾರತದ ವಿಚಾರವಂತ ಗಣ್ಯರು ನಿಸ್ಸಹಾಯಕರಂತೆ, ಮೂಕಪ್ರೇಕ್ಷಕರಂತೆ ನೋಡಿ, ಕೈಕಟ್ಟಿ ಕೂಡುವುದಿಲ್ಲ. ಬದಲಿಗೆ ಸರ್ಕಾರದ ಹುಚ್ಚಾಟಗಳನ್ನು ಪ್ರತಿಭಟಿಸುತ್ತಾರೆ. ಹಿಟ್ಲರ್‍ಗಿರಿ ಬೆಳೆಯಲು ಬಿಡುವುದಿಲ್ಲ ಎಂಬುದು ಮೇಲೆ ಹೇಳಿದ ಎರಡು ಪ್ರಕರಣಗಳಿಂದ ಸಾಬೀತಾಗಿದೆ.

ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಸಂಸ್ಥೆ‘Halt the hate’ ಎಂದು ಭಾರತ ಸರ್ಕಾರಕ್ಕೆ ತಿಳಿಸಿದೆ. ದ್ವೇಷಾಪರಾಧ, ಗುಂಪು ಹಲ್ಲೆಯಂತಹ ಕೃತ್ಯಗಳು 2017-18ರಲ್ಲಿ ಕಡಿಮೆ ಇದ್ದದ್ದು 2019ರ ಮೊದಲ ಆರು ತಿಂಗಳಲ್ಲಿ ಅತಿಹೆಚ್ಚು ಘಟನೆಗಳು ನಡೆದಿವೆ.

2015ರಲ್ಲಿ ದ್ವೇಷಾಪರಾಧಗಳು 51 ಇತ್ತು. 2016ರಲ್ಲಿ 240, 2017ರಲ್ಲಿ 212, 2018ರಲ್ಲಿ 210 ಕೃತ್ಯಗಳು ಸಂಭವಿಸಿದ್ದರೆ 2019ರ ಮೊದಲ ಆರು ತಿಂಗಳಲ್ಲೇ 180 ಕೃತ್ಯಗಳು ನಡೆದಿವೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಹೇಳಿ ಆಮ್ನೆಸ್ಟಿ ತನ್ನ ಕಳವಳ ವ್ಯಕ್ತಪಡಿಸಿದೆ. ನಡೆದಿರುವ ಒಟ್ಟು 180 ಪ್ರಕರಣಗಳಲ್ಲಿ ಧರ್ಮದ ಹೆಸರಿನಲ್ಲಿ 44 ಕೃತ್ಯಗಳು ನಡೆದಿವೆ. ಈ ಪೈಕಿ 40 ಪ್ರಕರಣಗಳು ಮುಸ್ಲಿಮರ ಮೇಲೆ, 4 ಕೃತ್ಯಗಳು ಕ್ರಿಶ್ಚಿಯನ್ನರ ಮೇಲೆ ನಡೆದಿವೆ. ಮೋದಿ ಇದುವರೆಗೂ ಈ ದುಷ್ಕೃತ್ಯ ನಡೆಯುತ್ತಿದ್ದರೂ ಒಮ್ಮೆಯೂ ಅದರ ಬಗೆಗೆ ಬಾಯಿ ಬಿಟ್ಟಿಲ್ಲ. ಮೋದಿಯ ಈ ದಿವ್ಯ ಮೌನವನ್ನು ದುಷ್ಕೃತ್ಯ ನಡೆಯುತ್ತಿರುವುದಕ್ಕೆ ಮೋದಿಯವರ ಸಮ್ಮತಿ ಇದೆಯೆಂದು ಅರ್ಥೈಸಬೇಕಾದಿತು.

ಇದಲ್ಲದೆ 2000 ದಿಂದ 2018ರ ನಡುವೆ ಭಾರತದಲ್ಲಿ ಕರ್ತವ್ಯನಿರತರಾಗಿದ್ದ 64 ಪತ್ರಕರ್ತರ ಹತ್ಯೆ ಆಗಿದೆ. ಪತ್ರಕರ್ತರ ವಿರುದ್ಧ ವಿವಿಧ ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ. 12 ರಾಜ್ಯಗಳಲ್ಲಿ 2000-2018ರ ಮಧ್ಯೆ ತಮ್ಮ ವಿಮರ್ಶಾತ್ಮಕ ಬರವಣಿಗೆಗಾಗಿ 21 ಪತ್ರಕರ್ತರ ಮೇಲೆ ಖಟ್ಲೆ ಹೂಡಲಾಗಿದೆ. 2017ರ ಸೆಪ್ಟಂಬರ್‌ 5 ರಂದು ತಮ್ಮ ಮನೆಗೆ ಪ್ರವೇಶ ಮಾಡುವಾಗಲೇ ‘ಗೌರಿ ಲಂಕೇಶ್’ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್‍ರನ್ನು ಹತ್ಯೆ ಮಾಡಲಾಯಿತು. ಹಾಗೂ 2018ರ ಜೂನ್14 ರಂದು ರೈಸಿಂಗ್ ಕಾಶ್ಮೀರದ ಸಂಪಾದಕರಾದ ಶುಜಾತ್ ಬುಕಾರಿಯವರ ಹತ್ಯೆಯಾಯಿತು. ಹಲ್ಲೆಗೊಳಗಾದ 65 ಪತ್ರಕರ್ತರ ವ್ಯಕ್ತಿ ವಿವರಗಳನ್ನು ‘Silencing Journalists’ ಎಂಬ ಪುಸ್ತಕದಲ್ಲಿ ದಾಖಲಿಸಲಾಗಿದೆ.

ಒಟ್ಟಿನಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ವರ್ಗದ ಜನರ ಮೇಲೂ ಹಲ್ಲೆ ಮಾಡುವುದು ಅಧಿಕಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....