Homeಕರ್ನಾಟಕನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

ನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

- Advertisement -
- Advertisement -

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರ ಹೆಸರಲ್ಲಿ ನಕಲಿ ಪೋಸ್ಟರ್‌‌ ಸೃಷ್ಟಿಸಿರುವ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ. ಚೇತನ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಕಲಿ ಪೋಸ್ಟರ್‌‌ ಫೋಟೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

‘ದಲಿತರು ಮುಸಲ್ಮಾನರ ನಡುವಿನ ಸಹೋದರತ್ವ ಸತ್ಯ ಆಗಿದ್ರೆ, ದಲಿತರು ಕತ್ತರಿಸಿದ ಮಾಂಸವನ್ನು ಮುಸಲ್ಮಾನರು ತಿನ್ನಲಿ: ನಟ’ ಎಂಬ ಶೀರ್ಷಿಕೆಯ ಪೋಸ್ಟರ್‌‌ನಲ್ಲಿ ಚೇತನ್ ಫೋಟೋ ಬಳಸಲಾಗಿದೆ. Nanugori.in( ಸರಿಯಾಗಿ ಗಮನಿಸಿ, ಅದು naanugauri.com ಅಲ್ಲ) ಇದ ಎಂದು ನಕಲಿ ಹೆಸರನ್ನು ಸೃಷ್ಟಿಸಿ, ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿದೆ.

ನಿಜವಾಗಿಯೂ ಈ ಥರದ ಒಂದು ವೆಬ್‌ಸೈಟ್‌ ಇದೆಯೇ ಎಂದು ಹುಡುಕಾಡಿದಾಗ, ಇದು ಕಿಡಿಗೇಡಿಗಳ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಅಲ್ಲದೇ ಹಲವಾರು ಓದುಗರು, ಈ ದುಷ್ಕೃತ್ಯವನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಟ ಚೇತನ್‌, “ದಲಿತರು ಮತ್ತು ಮುಸ್ಲಿಮರು ಒಂದು ವೇದಿಕೆಗೆ ಬರುತ್ತಿದ್ದಾರೆ. ಅದನ್ನು ಸಹಿಸಲಾಗದ ಮತೀಯ ಶಕ್ತಿಗಳು ಸುಳ್ಳು ಹರಡಿ ಸಮುದಾಯಗಳನ್ನು ಒಡೆಯಲು ಯತ್ನಿಸಿದ್ದಾರೆ. ಮುಸ್ಲಿಮರು ಹಾಗೂ ದಲಿತರ ನಡುವೆ ವೈಷಮ್ಯ ಬೆಳೆಸಲೆಂದು ಈ ಪೋಸ್ಟರ್‌ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದರು.

ದಲಿತರು ಮತ್ತು ಮುಸ್ಲಿಮರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ‘ನಾನುಗೌರಿ.ಕಾಂ’ ನಿರಂತರ ವರದಿ ಮಾಡುತ್ತಿದೆ. ಇದನ್ನು ಸಹಿಸದ ಮತೀಯ ಸಂಘಟನೆಗಳು ಈ ಕೃತ್ಯವನ್ನು ಎಸಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ.

“ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?” ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಮಾಡಲಾಗಿತ್ತು. ಹಬ್ಬದ ಸಂದರ್ಭದಲ್ಲಿ ದಲಿತರೇ ದನವನ್ನು ಕಡಿಯುತ್ತಾರೆ, ಅಥವಾ ಮುಸ್ಲಿಂ ವರ್ತಕರಿಂದ ಖರೀದಿಸುತ್ತಾರೆ ಎಂಬ ವಿಷಯದ ಕುರಿತು ಬೆಳಕು ಚೆಲ್ಲಲಾಗಿತ್ತು. ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ ಸೃಷ್ಟಿಸಿ ಮುಸ್ಲಿಂ ಸಮುದಾಯದ ಮೇಲೆ ಹೇರಲಾಗುತ್ತಿರುವ ಆರ್ಥಿಕ ನಿರ್ಬಂಧಗಳನ್ನು ಖಂಡಿಸಿ ಹಲವು ದಲಿತ ಯುವಕರು ‘ನಾನುಗೌರಿ.ಕಾಂ’ಗೆ ಹೇಳಿಕೆ ನೀಡಿದ್ದರು.

‘ದಲಿತರು ದನದ ಮಾಂಸವನ್ನು ಹಬ್ಬಗಳಲ್ಲಿ ತಿನ್ನುತ್ತಾರೆ. ಜಟ್ಕಾ ಕಟ್‌ನಲ್ಲಿ ದನದ ಮಾಂಸ ಸಿಗುತ್ತದೆಯೇ?’ ಎಂದು ದಲಿತರು ಪ್ರಶ್ನಿಸಿದ್ದರು. ಜೊತೆಗೆ ದಲಿತರು ಮಾಂಸದಂಗಡಿ ಇರಿಸಿದರೆ ಇತರ ಸವರ್ಣೀಯ ಹಿಂದೂ ಜಾತಿಗಳು ಅವರಲ್ಲಿ ವ್ಯಾಪಾರ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಕೆಲವು ಭಾಗಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ದಲಿತರೇ ದನವನ್ನು ಕೊಯ್ಯುತ್ತಾರೆ. ಆದರೆ ಅದು ವಾಣಿಜ್ಯ ಉದ್ದೇಶಗಳಿಗಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿತ್ತು. ಈ ವರದಿಯನ್ನು ಸಹಿಸಲಾಗದವರು ದಲಿತರು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. (ಪೂರ್ಣ ವರದಿಯನ್ನು ಇಲ್ಲಿ ಓದಬಹುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...