Homeಕರ್ನಾಟಕನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

ನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

- Advertisement -
- Advertisement -

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರ ಹೆಸರಲ್ಲಿ ನಕಲಿ ಪೋಸ್ಟರ್‌‌ ಸೃಷ್ಟಿಸಿರುವ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ. ಚೇತನ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಕಲಿ ಪೋಸ್ಟರ್‌‌ ಫೋಟೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

‘ದಲಿತರು ಮುಸಲ್ಮಾನರ ನಡುವಿನ ಸಹೋದರತ್ವ ಸತ್ಯ ಆಗಿದ್ರೆ, ದಲಿತರು ಕತ್ತರಿಸಿದ ಮಾಂಸವನ್ನು ಮುಸಲ್ಮಾನರು ತಿನ್ನಲಿ: ನಟ’ ಎಂಬ ಶೀರ್ಷಿಕೆಯ ಪೋಸ್ಟರ್‌‌ನಲ್ಲಿ ಚೇತನ್ ಫೋಟೋ ಬಳಸಲಾಗಿದೆ. Nanugori.in( ಸರಿಯಾಗಿ ಗಮನಿಸಿ, ಅದು naanugauri.com ಅಲ್ಲ) ಇದ ಎಂದು ನಕಲಿ ಹೆಸರನ್ನು ಸೃಷ್ಟಿಸಿ, ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿದೆ.

ನಿಜವಾಗಿಯೂ ಈ ಥರದ ಒಂದು ವೆಬ್‌ಸೈಟ್‌ ಇದೆಯೇ ಎಂದು ಹುಡುಕಾಡಿದಾಗ, ಇದು ಕಿಡಿಗೇಡಿಗಳ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಅಲ್ಲದೇ ಹಲವಾರು ಓದುಗರು, ಈ ದುಷ್ಕೃತ್ಯವನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಟ ಚೇತನ್‌, “ದಲಿತರು ಮತ್ತು ಮುಸ್ಲಿಮರು ಒಂದು ವೇದಿಕೆಗೆ ಬರುತ್ತಿದ್ದಾರೆ. ಅದನ್ನು ಸಹಿಸಲಾಗದ ಮತೀಯ ಶಕ್ತಿಗಳು ಸುಳ್ಳು ಹರಡಿ ಸಮುದಾಯಗಳನ್ನು ಒಡೆಯಲು ಯತ್ನಿಸಿದ್ದಾರೆ. ಮುಸ್ಲಿಮರು ಹಾಗೂ ದಲಿತರ ನಡುವೆ ವೈಷಮ್ಯ ಬೆಳೆಸಲೆಂದು ಈ ಪೋಸ್ಟರ್‌ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದರು.

ದಲಿತರು ಮತ್ತು ಮುಸ್ಲಿಮರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ‘ನಾನುಗೌರಿ.ಕಾಂ’ ನಿರಂತರ ವರದಿ ಮಾಡುತ್ತಿದೆ. ಇದನ್ನು ಸಹಿಸದ ಮತೀಯ ಸಂಘಟನೆಗಳು ಈ ಕೃತ್ಯವನ್ನು ಎಸಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ.

“ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?” ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಮಾಡಲಾಗಿತ್ತು. ಹಬ್ಬದ ಸಂದರ್ಭದಲ್ಲಿ ದಲಿತರೇ ದನವನ್ನು ಕಡಿಯುತ್ತಾರೆ, ಅಥವಾ ಮುಸ್ಲಿಂ ವರ್ತಕರಿಂದ ಖರೀದಿಸುತ್ತಾರೆ ಎಂಬ ವಿಷಯದ ಕುರಿತು ಬೆಳಕು ಚೆಲ್ಲಲಾಗಿತ್ತು. ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ ಸೃಷ್ಟಿಸಿ ಮುಸ್ಲಿಂ ಸಮುದಾಯದ ಮೇಲೆ ಹೇರಲಾಗುತ್ತಿರುವ ಆರ್ಥಿಕ ನಿರ್ಬಂಧಗಳನ್ನು ಖಂಡಿಸಿ ಹಲವು ದಲಿತ ಯುವಕರು ‘ನಾನುಗೌರಿ.ಕಾಂ’ಗೆ ಹೇಳಿಕೆ ನೀಡಿದ್ದರು.

‘ದಲಿತರು ದನದ ಮಾಂಸವನ್ನು ಹಬ್ಬಗಳಲ್ಲಿ ತಿನ್ನುತ್ತಾರೆ. ಜಟ್ಕಾ ಕಟ್‌ನಲ್ಲಿ ದನದ ಮಾಂಸ ಸಿಗುತ್ತದೆಯೇ?’ ಎಂದು ದಲಿತರು ಪ್ರಶ್ನಿಸಿದ್ದರು. ಜೊತೆಗೆ ದಲಿತರು ಮಾಂಸದಂಗಡಿ ಇರಿಸಿದರೆ ಇತರ ಸವರ್ಣೀಯ ಹಿಂದೂ ಜಾತಿಗಳು ಅವರಲ್ಲಿ ವ್ಯಾಪಾರ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಕೆಲವು ಭಾಗಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ದಲಿತರೇ ದನವನ್ನು ಕೊಯ್ಯುತ್ತಾರೆ. ಆದರೆ ಅದು ವಾಣಿಜ್ಯ ಉದ್ದೇಶಗಳಿಗಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿತ್ತು. ಈ ವರದಿಯನ್ನು ಸಹಿಸಲಾಗದವರು ದಲಿತರು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. (ಪೂರ್ಣ ವರದಿಯನ್ನು ಇಲ್ಲಿ ಓದಬಹುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...