Homeಕರ್ನಾಟಕನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

ನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

- Advertisement -
- Advertisement -

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರ ಹೆಸರಲ್ಲಿ ನಕಲಿ ಪೋಸ್ಟರ್‌‌ ಸೃಷ್ಟಿಸಿರುವ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ. ಚೇತನ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಕಲಿ ಪೋಸ್ಟರ್‌‌ ಫೋಟೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

‘ದಲಿತರು ಮುಸಲ್ಮಾನರ ನಡುವಿನ ಸಹೋದರತ್ವ ಸತ್ಯ ಆಗಿದ್ರೆ, ದಲಿತರು ಕತ್ತರಿಸಿದ ಮಾಂಸವನ್ನು ಮುಸಲ್ಮಾನರು ತಿನ್ನಲಿ: ನಟ’ ಎಂಬ ಶೀರ್ಷಿಕೆಯ ಪೋಸ್ಟರ್‌‌ನಲ್ಲಿ ಚೇತನ್ ಫೋಟೋ ಬಳಸಲಾಗಿದೆ. Nanugori.in( ಸರಿಯಾಗಿ ಗಮನಿಸಿ, ಅದು naanugauri.com ಅಲ್ಲ) ಇದ ಎಂದು ನಕಲಿ ಹೆಸರನ್ನು ಸೃಷ್ಟಿಸಿ, ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿದೆ.

ನಿಜವಾಗಿಯೂ ಈ ಥರದ ಒಂದು ವೆಬ್‌ಸೈಟ್‌ ಇದೆಯೇ ಎಂದು ಹುಡುಕಾಡಿದಾಗ, ಇದು ಕಿಡಿಗೇಡಿಗಳ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಅಲ್ಲದೇ ಹಲವಾರು ಓದುಗರು, ಈ ದುಷ್ಕೃತ್ಯವನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಟ ಚೇತನ್‌, “ದಲಿತರು ಮತ್ತು ಮುಸ್ಲಿಮರು ಒಂದು ವೇದಿಕೆಗೆ ಬರುತ್ತಿದ್ದಾರೆ. ಅದನ್ನು ಸಹಿಸಲಾಗದ ಮತೀಯ ಶಕ್ತಿಗಳು ಸುಳ್ಳು ಹರಡಿ ಸಮುದಾಯಗಳನ್ನು ಒಡೆಯಲು ಯತ್ನಿಸಿದ್ದಾರೆ. ಮುಸ್ಲಿಮರು ಹಾಗೂ ದಲಿತರ ನಡುವೆ ವೈಷಮ್ಯ ಬೆಳೆಸಲೆಂದು ಈ ಪೋಸ್ಟರ್‌ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದರು.

ದಲಿತರು ಮತ್ತು ಮುಸ್ಲಿಮರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ‘ನಾನುಗೌರಿ.ಕಾಂ’ ನಿರಂತರ ವರದಿ ಮಾಡುತ್ತಿದೆ. ಇದನ್ನು ಸಹಿಸದ ಮತೀಯ ಸಂಘಟನೆಗಳು ಈ ಕೃತ್ಯವನ್ನು ಎಸಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ.

“ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?” ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಮಾಡಲಾಗಿತ್ತು. ಹಬ್ಬದ ಸಂದರ್ಭದಲ್ಲಿ ದಲಿತರೇ ದನವನ್ನು ಕಡಿಯುತ್ತಾರೆ, ಅಥವಾ ಮುಸ್ಲಿಂ ವರ್ತಕರಿಂದ ಖರೀದಿಸುತ್ತಾರೆ ಎಂಬ ವಿಷಯದ ಕುರಿತು ಬೆಳಕು ಚೆಲ್ಲಲಾಗಿತ್ತು. ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ ಸೃಷ್ಟಿಸಿ ಮುಸ್ಲಿಂ ಸಮುದಾಯದ ಮೇಲೆ ಹೇರಲಾಗುತ್ತಿರುವ ಆರ್ಥಿಕ ನಿರ್ಬಂಧಗಳನ್ನು ಖಂಡಿಸಿ ಹಲವು ದಲಿತ ಯುವಕರು ‘ನಾನುಗೌರಿ.ಕಾಂ’ಗೆ ಹೇಳಿಕೆ ನೀಡಿದ್ದರು.

‘ದಲಿತರು ದನದ ಮಾಂಸವನ್ನು ಹಬ್ಬಗಳಲ್ಲಿ ತಿನ್ನುತ್ತಾರೆ. ಜಟ್ಕಾ ಕಟ್‌ನಲ್ಲಿ ದನದ ಮಾಂಸ ಸಿಗುತ್ತದೆಯೇ?’ ಎಂದು ದಲಿತರು ಪ್ರಶ್ನಿಸಿದ್ದರು. ಜೊತೆಗೆ ದಲಿತರು ಮಾಂಸದಂಗಡಿ ಇರಿಸಿದರೆ ಇತರ ಸವರ್ಣೀಯ ಹಿಂದೂ ಜಾತಿಗಳು ಅವರಲ್ಲಿ ವ್ಯಾಪಾರ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಕೆಲವು ಭಾಗಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ದಲಿತರೇ ದನವನ್ನು ಕೊಯ್ಯುತ್ತಾರೆ. ಆದರೆ ಅದು ವಾಣಿಜ್ಯ ಉದ್ದೇಶಗಳಿಗಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿತ್ತು. ಈ ವರದಿಯನ್ನು ಸಹಿಸಲಾಗದವರು ದಲಿತರು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. (ಪೂರ್ಣ ವರದಿಯನ್ನು ಇಲ್ಲಿ ಓದಬಹುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...