Homeಕರ್ನಾಟಕನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

ನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

- Advertisement -
- Advertisement -

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರ ಹೆಸರಲ್ಲಿ ನಕಲಿ ಪೋಸ್ಟರ್‌‌ ಸೃಷ್ಟಿಸಿರುವ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ. ಚೇತನ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಕಲಿ ಪೋಸ್ಟರ್‌‌ ಫೋಟೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

‘ದಲಿತರು ಮುಸಲ್ಮಾನರ ನಡುವಿನ ಸಹೋದರತ್ವ ಸತ್ಯ ಆಗಿದ್ರೆ, ದಲಿತರು ಕತ್ತರಿಸಿದ ಮಾಂಸವನ್ನು ಮುಸಲ್ಮಾನರು ತಿನ್ನಲಿ: ನಟ’ ಎಂಬ ಶೀರ್ಷಿಕೆಯ ಪೋಸ್ಟರ್‌‌ನಲ್ಲಿ ಚೇತನ್ ಫೋಟೋ ಬಳಸಲಾಗಿದೆ. Nanugori.in( ಸರಿಯಾಗಿ ಗಮನಿಸಿ, ಅದು naanugauri.com ಅಲ್ಲ) ಇದ ಎಂದು ನಕಲಿ ಹೆಸರನ್ನು ಸೃಷ್ಟಿಸಿ, ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿದೆ.

ನಿಜವಾಗಿಯೂ ಈ ಥರದ ಒಂದು ವೆಬ್‌ಸೈಟ್‌ ಇದೆಯೇ ಎಂದು ಹುಡುಕಾಡಿದಾಗ, ಇದು ಕಿಡಿಗೇಡಿಗಳ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಅಲ್ಲದೇ ಹಲವಾರು ಓದುಗರು, ಈ ದುಷ್ಕೃತ್ಯವನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಟ ಚೇತನ್‌, “ದಲಿತರು ಮತ್ತು ಮುಸ್ಲಿಮರು ಒಂದು ವೇದಿಕೆಗೆ ಬರುತ್ತಿದ್ದಾರೆ. ಅದನ್ನು ಸಹಿಸಲಾಗದ ಮತೀಯ ಶಕ್ತಿಗಳು ಸುಳ್ಳು ಹರಡಿ ಸಮುದಾಯಗಳನ್ನು ಒಡೆಯಲು ಯತ್ನಿಸಿದ್ದಾರೆ. ಮುಸ್ಲಿಮರು ಹಾಗೂ ದಲಿತರ ನಡುವೆ ವೈಷಮ್ಯ ಬೆಳೆಸಲೆಂದು ಈ ಪೋಸ್ಟರ್‌ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದರು.

ದಲಿತರು ಮತ್ತು ಮುಸ್ಲಿಮರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ‘ನಾನುಗೌರಿ.ಕಾಂ’ ನಿರಂತರ ವರದಿ ಮಾಡುತ್ತಿದೆ. ಇದನ್ನು ಸಹಿಸದ ಮತೀಯ ಸಂಘಟನೆಗಳು ಈ ಕೃತ್ಯವನ್ನು ಎಸಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ.

“ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?” ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಮಾಡಲಾಗಿತ್ತು. ಹಬ್ಬದ ಸಂದರ್ಭದಲ್ಲಿ ದಲಿತರೇ ದನವನ್ನು ಕಡಿಯುತ್ತಾರೆ, ಅಥವಾ ಮುಸ್ಲಿಂ ವರ್ತಕರಿಂದ ಖರೀದಿಸುತ್ತಾರೆ ಎಂಬ ವಿಷಯದ ಕುರಿತು ಬೆಳಕು ಚೆಲ್ಲಲಾಗಿತ್ತು. ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ ಸೃಷ್ಟಿಸಿ ಮುಸ್ಲಿಂ ಸಮುದಾಯದ ಮೇಲೆ ಹೇರಲಾಗುತ್ತಿರುವ ಆರ್ಥಿಕ ನಿರ್ಬಂಧಗಳನ್ನು ಖಂಡಿಸಿ ಹಲವು ದಲಿತ ಯುವಕರು ‘ನಾನುಗೌರಿ.ಕಾಂ’ಗೆ ಹೇಳಿಕೆ ನೀಡಿದ್ದರು.

‘ದಲಿತರು ದನದ ಮಾಂಸವನ್ನು ಹಬ್ಬಗಳಲ್ಲಿ ತಿನ್ನುತ್ತಾರೆ. ಜಟ್ಕಾ ಕಟ್‌ನಲ್ಲಿ ದನದ ಮಾಂಸ ಸಿಗುತ್ತದೆಯೇ?’ ಎಂದು ದಲಿತರು ಪ್ರಶ್ನಿಸಿದ್ದರು. ಜೊತೆಗೆ ದಲಿತರು ಮಾಂಸದಂಗಡಿ ಇರಿಸಿದರೆ ಇತರ ಸವರ್ಣೀಯ ಹಿಂದೂ ಜಾತಿಗಳು ಅವರಲ್ಲಿ ವ್ಯಾಪಾರ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಕೆಲವು ಭಾಗಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ದಲಿತರೇ ದನವನ್ನು ಕೊಯ್ಯುತ್ತಾರೆ. ಆದರೆ ಅದು ವಾಣಿಜ್ಯ ಉದ್ದೇಶಗಳಿಗಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿತ್ತು. ಈ ವರದಿಯನ್ನು ಸಹಿಸಲಾಗದವರು ದಲಿತರು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. (ಪೂರ್ಣ ವರದಿಯನ್ನು ಇಲ್ಲಿ ಓದಬಹುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...