Homeಕರ್ನಾಟಕನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

ನಟ ಚೇತನ್‌ ಹೆಸರಲ್ಲಿ ದಲಿತರು, ಮುಸ್ಲಿಮರ ನಡುವೆ ದ್ವೇಷ ಸೃಷ್ಟಿಸಲು ಯತ್ನಿಸಿದ ಕಿಡಿಗೇಡಿಗಳು

- Advertisement -
- Advertisement -

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರ ಹೆಸರಲ್ಲಿ ನಕಲಿ ಪೋಸ್ಟರ್‌‌ ಸೃಷ್ಟಿಸಿರುವ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಯತ್ನಿಸಿದ್ದಾರೆ. ಚೇತನ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನಕಲಿ ಪೋಸ್ಟರ್‌‌ ಫೋಟೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ.

‘ದಲಿತರು ಮುಸಲ್ಮಾನರ ನಡುವಿನ ಸಹೋದರತ್ವ ಸತ್ಯ ಆಗಿದ್ರೆ, ದಲಿತರು ಕತ್ತರಿಸಿದ ಮಾಂಸವನ್ನು ಮುಸಲ್ಮಾನರು ತಿನ್ನಲಿ: ನಟ’ ಎಂಬ ಶೀರ್ಷಿಕೆಯ ಪೋಸ್ಟರ್‌‌ನಲ್ಲಿ ಚೇತನ್ ಫೋಟೋ ಬಳಸಲಾಗಿದೆ. Nanugori.in( ಸರಿಯಾಗಿ ಗಮನಿಸಿ, ಅದು naanugauri.com ಅಲ್ಲ) ಇದ ಎಂದು ನಕಲಿ ಹೆಸರನ್ನು ಸೃಷ್ಟಿಸಿ, ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸಲಾಗಿದೆ.

ನಿಜವಾಗಿಯೂ ಈ ಥರದ ಒಂದು ವೆಬ್‌ಸೈಟ್‌ ಇದೆಯೇ ಎಂದು ಹುಡುಕಾಡಿದಾಗ, ಇದು ಕಿಡಿಗೇಡಿಗಳ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಅಲ್ಲದೇ ಹಲವಾರು ಓದುಗರು, ಈ ದುಷ್ಕೃತ್ಯವನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ನಟ ಚೇತನ್‌, “ದಲಿತರು ಮತ್ತು ಮುಸ್ಲಿಮರು ಒಂದು ವೇದಿಕೆಗೆ ಬರುತ್ತಿದ್ದಾರೆ. ಅದನ್ನು ಸಹಿಸಲಾಗದ ಮತೀಯ ಶಕ್ತಿಗಳು ಸುಳ್ಳು ಹರಡಿ ಸಮುದಾಯಗಳನ್ನು ಒಡೆಯಲು ಯತ್ನಿಸಿದ್ದಾರೆ. ಮುಸ್ಲಿಮರು ಹಾಗೂ ದಲಿತರ ನಡುವೆ ವೈಷಮ್ಯ ಬೆಳೆಸಲೆಂದು ಈ ಪೋಸ್ಟರ್‌ ಹರಿಬಿಟ್ಟಿದ್ದಾರೆ” ಎಂದು ತಿಳಿಸಿದರು.

ದಲಿತರು ಮತ್ತು ಮುಸ್ಲಿಮರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ‘ನಾನುಗೌರಿ.ಕಾಂ’ ನಿರಂತರ ವರದಿ ಮಾಡುತ್ತಿದೆ. ಇದನ್ನು ಸಹಿಸದ ಮತೀಯ ಸಂಘಟನೆಗಳು ಈ ಕೃತ್ಯವನ್ನು ಎಸಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ.

“ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?” ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿಯನ್ನು ಮಾಡಲಾಗಿತ್ತು. ಹಬ್ಬದ ಸಂದರ್ಭದಲ್ಲಿ ದಲಿತರೇ ದನವನ್ನು ಕಡಿಯುತ್ತಾರೆ, ಅಥವಾ ಮುಸ್ಲಿಂ ವರ್ತಕರಿಂದ ಖರೀದಿಸುತ್ತಾರೆ ಎಂಬ ವಿಷಯದ ಕುರಿತು ಬೆಳಕು ಚೆಲ್ಲಲಾಗಿತ್ತು. ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ ಸೃಷ್ಟಿಸಿ ಮುಸ್ಲಿಂ ಸಮುದಾಯದ ಮೇಲೆ ಹೇರಲಾಗುತ್ತಿರುವ ಆರ್ಥಿಕ ನಿರ್ಬಂಧಗಳನ್ನು ಖಂಡಿಸಿ ಹಲವು ದಲಿತ ಯುವಕರು ‘ನಾನುಗೌರಿ.ಕಾಂ’ಗೆ ಹೇಳಿಕೆ ನೀಡಿದ್ದರು.

‘ದಲಿತರು ದನದ ಮಾಂಸವನ್ನು ಹಬ್ಬಗಳಲ್ಲಿ ತಿನ್ನುತ್ತಾರೆ. ಜಟ್ಕಾ ಕಟ್‌ನಲ್ಲಿ ದನದ ಮಾಂಸ ಸಿಗುತ್ತದೆಯೇ?’ ಎಂದು ದಲಿತರು ಪ್ರಶ್ನಿಸಿದ್ದರು. ಜೊತೆಗೆ ದಲಿತರು ಮಾಂಸದಂಗಡಿ ಇರಿಸಿದರೆ ಇತರ ಸವರ್ಣೀಯ ಹಿಂದೂ ಜಾತಿಗಳು ಅವರಲ್ಲಿ ವ್ಯಾಪಾರ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದ ಕೆಲವು ಭಾಗಗಳಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ದಲಿತರೇ ದನವನ್ನು ಕೊಯ್ಯುತ್ತಾರೆ. ಆದರೆ ಅದು ವಾಣಿಜ್ಯ ಉದ್ದೇಶಗಳಿಗಲ್ಲ ಎಂಬುದು ವರದಿಯಿಂದ ಸ್ಪಷ್ಟವಾಗಿತ್ತು. ಈ ವರದಿಯನ್ನು ಸಹಿಸಲಾಗದವರು ದಲಿತರು ಮತ್ತು ಮುಸ್ಲಿಮರ ನಡುವೆ ದ್ವೇಷ ಹಬ್ಬಿಸಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. (ಪೂರ್ಣ ವರದಿಯನ್ನು ಇಲ್ಲಿ ಓದಬಹುದು)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಮತ್ತೆ ನಾಲಗೆ ಹರಿಬಿಟ್ಟ ಯತಿ ನರಸಿಂಗಾನಂದ; ಎಫ್‌ಐಆರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...