HomeUncategorizedಮೋದಿಯ ಹೆಸರಿನಲ್ಲಿ ಮಹಾರಾಷ್ಟ್ರ ಚುನಾವಣೆ ಎದುರಿಸಲು ನಿರ್ಧರಿಸಿದ ಮಹಾಯುತಿ ಮೈತ್ರಿ!

ಮೋದಿಯ ಹೆಸರಿನಲ್ಲಿ ಮಹಾರಾಷ್ಟ್ರ ಚುನಾವಣೆ ಎದುರಿಸಲು ನಿರ್ಧರಿಸಿದ ಮಹಾಯುತಿ ಮೈತ್ರಿ!

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಯ ಪಕ್ಷಗಳಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಾಲಿ ಸಿಎಂ ಏಕನಾಥ್ ಶಿಂಧೆ ಆಗಲಿ ಅಥವಾ ಬೇರೆ ಯಾರನ್ನೂ ಮುಖ್ಯಮಂತ್ರಿಯಾಗಿ ಬಿಂಬಿಸುವುದಿಲ್ಲ ಎಂದು ತೀರ್ಮಾನಿಸಿದೆ. ಪ್ರಧಾನಿ ಹೆಸರಿನಲ್ಲಿ ಮಹಾರಾಷ್ಟ್ರ ಚುನಾವಣೆಯನ್ನು ಎದುರಿಸುವುದಾಗಿ ಮೈತ್ರಿಯು ನಿರ್ಧರಿಸಿದೆ. ಮೋದಿಯ ಹೆಸರಿನಲ್ಲಿ

ಮುಖ್ಯಮಂತ್ರಿ ಶಿಂಧೆ, ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ಹಿರಿಯ ನಾಯಕರನ್ನು ಭೇಟಿಯಾದಾಗ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಧಾನಿ ಮೋದಿ ಅವರ ಮುಖವನ್ನು ಚುನಾವಣೆಯಲ್ಲಿ ಮಹಾಯುತಿ ಪ್ರಮುಖವಾಗಿ ಜನರ ಮುಂದಿಡಲಿದೆ ಎಂದು ಮೂಲಗಳು ತಿಳಿಸಿವೆ.  “ಮೈತ್ರಿಯನ್ನು ಮುನ್ನಡೆಸುವ ನಾಯಕನನ್ನು ನಂತರ ನಿರ್ಧರಿಸಲಾಗುವುದು. ಚುನಾವಣಾ ಪೂರ್ವ ಅಥವಾ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ನೀಡಲು ಬಿಜೆಪಿ ನಿರಾಕರಿಸಿದೆ” ಎಂದು ಮೂಲವೊಂದು ತಿಳಿಸಿದೆ ಎಂದು TNIE ವರದಿ ಮಾಡಿದೆ. ಮೋದಿಯ ಹೆಸರಿನಲ್ಲಿ

“ಮಹಾಯುತಿಯು ಎಲ್ಲಾ ಮೂರು ಪಕ್ಷಗಳ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗಳನ್ನು ಎದುರಿಸಲಿದೆ. ಆದರೆ ಬಿಜೆಪಿ ಅಥವಾ ಶಿವಸೇನೆ ಅಥವಾ ಎನ್‌ಸಿಪಿಯಿಂದ ಯಾವುದೇ ಪ್ರಮುಖ ನಾಯಕ ಅಥವಾ ಯಾವುದೇ ನಿರ್ದಿಷ್ಟ ಮುಖವನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲಾಗುವುದಿಲ್ಲ” ಎಂದು ಮತ್ತೊಂದು ಮೂಲಗಳು ತಿಳಿಸಿವೆ.

ಶುಕ್ರವಾರ ನಡೆದ ಸಭೆಯಲ್ಲಿ ರಾಜ್ಯದ ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ 155-160 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಶಿಂಧೆ ನೇತೃತ್ವದ ಶಿವಸೇನೆ 80-85 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 50-55 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ದೆಹಲಿ ಸಭೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ ತಮ್ಮನ್ನು ಸಿಎಂ ಮುಖ ಎಂದು ಬಿಂಬಿಸಲು ಒತ್ತಾಯಿಸಿದರಾದರೂ, ಬಿಜೆಪಿ ನಾಯಕರು ಮತ್ತು ಅಜಿತ್ ಪವಾರ್ ಅದಕ್ಕೆ ಹಿಂಜರಿದರು ಎಂದು ವರದಿಯಾಗಿದೆ.

ಪ್ರಸ್ತುತ ಬಿಜೆಪಿ 105 ಶಾಸಕರನ್ನು ಹೊಂದಿದ್ದು, ಶಿಂಧೆ ಅವರ ಶಿವಸೇನೆ 56 ಮತ್ತು ಅಜಿತ್ ಪವಾರ್ ಅವರ ಪಕ್ಷವು 54 ಶಾಸಕರ ಬೆಂಬಲವನ್ನು ಹೊಂದಿದೆ. ಮಹಾಯುತಿಯ ಪ್ರಸ್ತುತ ಬಲದ ಪ್ರಕಾರ 210 ಸ್ಥಾನಗಳ ಬಗ್ಗೆ ಯಾವುದೇ ವಿವಾದವಿಲ್ಲ. ಉಳಿದ ಸ್ಥಾನಗಳನ್ನು ಮೈತ್ರಿಯಲ್ಲಿ ಹಂಚಿಕೆ ಮಾಡಲಾಗುತ್ತದೆ.

“ದೆಹಲಿ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ. ಕೆಲವೇ ಕೆಲವು ಅನಿಶ್ಚಿತ ಕ್ಷೇತ್ರಗಳಿವೆ. ಆದರೆ ಆಯಾ ಪಕ್ಷದ ನಾಯಕರು ಕ್ಷೇತ್ರಗಳ ವಿನಿಮಯ ಸೇರಿದಂತೆ ಹೊಂದಾಣಿಕೆ ಮಾಡಲು ಒಪ್ಪಿಕೊಂಡಿದ್ದಾರೆ. ಗೆಲ್ಲುವಿಕೆ, ಆಯಾ ಪಕ್ಷದ ಪ್ರಬಲ ಅಭ್ಯರ್ಥಿಯ ಉಪಸ್ಥಿತಿ ಆಧಾರದಲ್ಲಿ ಉಳಿದ ಸ್ಥಾನಗಳನ್ನು ನಿಯೋಜಿಸಲಾಗುತ್ತದೆ” ಎಂದು ಶಿವಸೇನೆಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಮತದಾಯ ನಡೆಯುತ್ತಿದ್ದು, ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...