Homeಕರ್ನಾಟಕRSS, BJP ನಾಯಕರ ಹೆಸರೇಳಿಕೊಂಡು ವಂಚನೆ: ಯುವರಾಜ್ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಆದೇಶ

RSS, BJP ನಾಯಕರ ಹೆಸರೇಳಿಕೊಂಡು ವಂಚನೆ: ಯುವರಾಜ್ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಆದೇಶ

- Advertisement -
- Advertisement -

ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ಹೆಸರು ಹೇಳಿಕೊಂಡು ಹಲವಾರು ಜನರಿಗೆ ವಂಚನೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿರುವ, ಆರ್. ಯುವರಾಜ್ ಅಲಿಯಾಸ್ ಸಂಗನಬಸವ ಸೇವಾಲಾಲ್ ಸ್ವಾಮಿಗೆ ಸೇರಿರುವ ಸುಮಾರು 70 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ 67ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ.

ಆರೋಪಿ ಸ್ವಾಮಿ ವಿರುದ್ದ ಬೆಂಗಳೂರಿನಾದ್ಯಂತ ಸುಮಾರು 14 ವಂಚನೆ ಪ್ರಕರಣ ದಾಖಲಾಗಿದೆ. ಅವನನ್ನು ಡಿಸೆಂಬರ್ 17 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವರಿಗೆ ರಾಜ್ಯಸಭಾ ಸೀಟು ಕೊಡಿಸುತ್ತೇನೆಂದು 10 ಕೋಟಿ ರೂ. ಕೇಳಿದ್ದ ಸ್ವಾಮಿ ಮುಂಗಡವಾಗಿ 1 ಕೋಟಿ ರೂ. ಪಡೆದುಕೊಂಡಿದ್ದ. ಈ ಹಿನ್ನಲೆಯಲ್ಲಿ ಮೋಸ ಹೋಗಿದ್ದ ಉದ್ಯಮಿ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿಯನ್ನು ವಿಚಾರಣೆಗೊಳಪಡಿಸಿರುವ ಸಿಸಿಬಿ ಪೊಲೀಸರು, ಆರೋಪಿ ಮತ್ತು ಅವರ ಪತ್ನಿ ಎನ್‌.ಪ್ರೇಮಾ ಅವರ ಹೆಸರಿಗಿದ್ದ 26 ಆಸ್ತಿಗಳನ್ನು ಪಟ್ಟಿ ಮಾಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಚೀನಾ ದ್ವೇಷ: ಡ್ಯ್ರಾಗನ್ ಹಣ್ಣಿಗೆ ಬಿಜೆಪಿ ಕಚೇರಿಯ ಹೆಸರಿಟ್ಟ ಗುಜರಾತ್ ಸರ್ಕಾರ!

ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್. ಪಾಟೀಲ, ‘‘ಸಾರ್ವಜನಿಕರನ್ನು ವಂಚಿಸಿ ಗಳಿಸಿದ್ದ ಹಣದಲ್ಲೇ ಆರೋಪಿ, ಪತ್ನಿ ಹೆಸರಿನಲ್ಲಿ 70 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದನೆ ಮಾಡಿದ್ದಾರೆ. ಸಿಸಿಬಿ ಅಧಿಕಾರಿಗಳು ಈ ಸಂಬಂಧ ದಾಖಲೆ ಹಾಗೂ ಪುರಾವೆಗಳನ್ನು ಸಂಗ್ರಹಿಸಿದ್ದು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ಹೊರಡಿಸಿ, ವಂಚನೆಗೀಡಾದವರಿಗೆ ನ್ಯಾಯ ಒದಗಿಸಬೇಕು” ಎಂದು ಕೇಳಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಆರೋಪಿಗೆ ಸೇರಿದ್ದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯವು ಶುಕ್ರವಾರ ಮಧ್ಯಂತರ ಆದೇಶ ಹೊರಡಿಸಿದೆ.

‘‘ಸರ್ಕಾರದ ವಿವಿಧ ಮಂಡಳಿಗಳಲ್ಲಿ ಅಧ್ಯಕ್ಷ ಹುದ್ದೆ, ಸರ್ಕಾರದ ಇಲಾಖೆಗಳಲ್ಲಿ ಕೆಲಸ, ಪ್ರತಿಷ್ಠಿತ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟು ಹಾಗೂ ಸರ್ಕಾರದಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡಿದ್ದ ಆರೋಪಿ ಯುವರಾಜ್, ಕೋಟ್ಯಂತರ ರೂಪಾಯಿ ಪಡೆದಿದ್ದರು’’ ಎಂದು ಸಿಸಿಬಿ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ಆರೋಪಿಯು ಹಲವಾರು ಪ್ರಮುಖ ರಾಜಕಾರಣಿಗಳೊಂದಿಗೆ ಸಂಪರ್ಕ ಹೊಂದಿದ್ದು ರಾಜ್ಯ ಸರ್ಕಾರದ ಸಚಿವರೊಬ್ಬರ ಮನೆಯ ದೇವರ ಕೋಣೆಯನ್ನೇ ಬದಲಾವಣೆ ಮಾಡಿದ್ದ ಎಂದು ಹೇಳಲಾಗುತ್ತದೆ. ಸಿನಿಮಾ ನಿರ್ಮಾಪಕ ಸೇರಿದಂತೆ, ರಾಜ್ಯಪಾಲೆ ಹುದ್ದೆ ಕೊಡಿಸುತ್ತೇನೆ ಎಂದು ಮಾಜಿ ನ್ಯಾಯಾಧೀಶೆಯೊಬ್ಬರಿಂದ 8.8 ಕೋಟಿ ಪಡೆದುಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ‘ಗೋಲಿ ಮಾರೋ ಸಾಲೋಂಕೋ’ ಘೋಷಣೆ – ಬಿಜೆಪಿ ಮುಖಂಡ ಸೇರಿ 3 ಕಾರ್ಯಕರ್ತರ ಬಂಧನ

ತನಗೆ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರೊಂದಿಗೆ ಸಂಪರ್ಕ ಇದೆ ಎಂದು ಆರೋಪಿಯು ಜನರಿಗೆ ಮೋಸ ಮಾಡುತ್ತಿದ್ದ. ಈಗಾಗಲೇ ಸಚಿವರಾದ ಲಕ್ಷ್ಮಣ ಸವದಿ, ವಿ.ಸೋಮಣ್ಣ, ಕಾಂಗ್ರೆಸ್ ನಾಯಕ ಕೆ.ಚಿ ವೇಣುಗೋಪಾಲ್ ಜೊತೆ ಆರೋಪಿಯು ಫೋಟೋ ಕ್ಲಿಕ್ಕಿಸಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪಕ್ಷಾಂತರದ ‘ಮಹಿಮೆ’: ಬಂಗಾಳದ ಬಿಜೆಪಿ ಕಚೇರಿಗಳಲ್ಲಿ ಹೊಡೆದಾಟ, ಬೀದಿ ರಂಪಾಟ, ವಾಹನಗಳಿಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಂಚನೆ ಮಾಡಿರುವ ಯುವರಾಜ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಅದೇ ರೀತಿ ಇದರಲ್ಲಿ ಶಾಮೀಲು ಆದವರನ್ನು ಬಂಧಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...