HomeUncategorizedಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

ಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

- Advertisement -
- Advertisement -

ಕ್ರಿಕೆಟ್ ಏಕದಿನ ಪಂದ್ಯಗಳಲ್ಲಿ ಎರಡು ಸಾವಿರ ರನ್ ಗಳಿಸಿದ 2ನೇ ಅತಿ ವೇಗದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಟಾರ್ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ. ಟೀ ಇಂಡಿಯಾ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ವುಮೆನ್ ಆಗಿರುವ ಸ್ಮೃತಿ ಮಂಧಾನಾ ದಾಖಲೆ ಬರೆದಿದ್ದಾರೆ.

ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಎಡಗೈ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಸಾಧನೆ ಮಾಡಿದ್ದಾರೆ. ಸ್ಮೃತಿ ಅವರ ಸಾಧನೆಯ ಗುಚ್ಚಕ್ಕೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಅಲ್ಲದೇ ಆರು ವಿಕೆಟ್ ಗಳಿಂದ ಭಾರತ ತಂಡ, ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ವೆಸ್ಟ್ ಇಂಡೀಸ್ ತಂಡ ನೀಡಿದ್ದ 195 ರನ್ ಗಳ ಗುರಿ ಬೆನ್ನತ್ತಿದ್ದ ಭಾರತದ ವನಿತೆಯರ ತಂಡ ಸುಲಭವಾಗಿ ಜಯಗಳಿಸಿತು.

ಮಂದಾನಾ ಅವರೊಂದಿಗೆ ಜೆಮಿಮಾ ರೊಡ್ರಿಗಸ್ ಆರಂಭಿಕ ಜತೆಯಾಟ ಆಡುವ ಮೂಲಕ 141 ರನ್ ಕಲೆ ಹಾಕಿದರು. ಈ ವೇಳೆ ಮಂಧಾನಾ 74 ರನ್ ಕಲೆ ಹಾಕಿದರು. 51 ಏಕದಿನ ಪಂದ್ಯಗಳನ್ನು ಆಡಿರುವ 23 ವರ್ಷದ ಮಂಧಾನಾ 2000 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಬೆಲಿಂದಾ ಕ್ಲಾರ್ಕ್ ಹಾಗೂ ಮೆಗ್ ಲ್ಯಾನಿಂಗ್ ಅವರ ನಂತರದ ಸ್ಥಾನಕ್ಕೇರಿದ್ದಾರೆ. ಮಂದಾನಾ ಇದುವರೆಗೆ ನಾಲ್ಕು ಏಕದಿನ ಶತಕ ಮತ್ತು 17 ಅರ್ಧ ಶತಕ ಗಳಿಸಿದ್ದಾರೆ.

ಇನ್ನು 50 ಓವರ್ ಗಳಲ್ಲಿ ದಾಖಲೆ ರನ್ ಗಳಿಸಿದ ಏಕೈಕ ಭಾರತೀಯ ಕ್ರಿಕೆಟಿಗ ಶಿಖರ್ ಧವನ್. 48 ಏಕದಿನ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಆಸ್ಟ್ರೇಲಿಯಾದ ಬೆಲಿಂದಾ ಕ್ಲಾ‍ರ್ಕ್ 41 ಏಕದಿನ ಪಂದ್ಯಗಳಲ್ಲಿ 2000 ರನ್ ದಾಖಲಿಸಿದ್ದರು. ಈಗ ಸ್ಮೃತಿ ಮಂಧಾನಾ 51 ಏಕದಿನ ಪಂದ್ಯಗಳಲ್ಲಿ 43.08 ಸರಾಸರಿಯಲ್ಲಿ 2,025 ರನ್ ಗಳಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಕಾಲಿನ ಗಾಯದ ಸಮಸ್ಯೆಯಿಂದ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಸ್ಮೃತಿ ಮಂಧಾನಾ, ಎರಡನೇ ಪಂದ್ಯದಲ್ಲಿ ಆಡಿದ್ದರು. ಅಂತಿಮ ಪಂದ್ಯದಲ್ಲಿ ಉತ್ತಮ ಆಟ ಆಡಿರುವ ಮಂಧಾನಾ 63 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಬಾರಿಸುವ ಮೂಲಕ 74 ರನ್ ಕಲೆ ಹಾಕಿದರು. ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆಯುವ ಮೂಲಕ ದಾಖಲೆ ಬರೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...