HomeUncategorizedಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

ಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

- Advertisement -
- Advertisement -

ಕ್ರಿಕೆಟ್ ಏಕದಿನ ಪಂದ್ಯಗಳಲ್ಲಿ ಎರಡು ಸಾವಿರ ರನ್ ಗಳಿಸಿದ 2ನೇ ಅತಿ ವೇಗದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಟಾರ್ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ. ಟೀ ಇಂಡಿಯಾ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ವುಮೆನ್ ಆಗಿರುವ ಸ್ಮೃತಿ ಮಂಧಾನಾ ದಾಖಲೆ ಬರೆದಿದ್ದಾರೆ.

ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಎಡಗೈ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಸಾಧನೆ ಮಾಡಿದ್ದಾರೆ. ಸ್ಮೃತಿ ಅವರ ಸಾಧನೆಯ ಗುಚ್ಚಕ್ಕೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಅಲ್ಲದೇ ಆರು ವಿಕೆಟ್ ಗಳಿಂದ ಭಾರತ ತಂಡ, ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ವೆಸ್ಟ್ ಇಂಡೀಸ್ ತಂಡ ನೀಡಿದ್ದ 195 ರನ್ ಗಳ ಗುರಿ ಬೆನ್ನತ್ತಿದ್ದ ಭಾರತದ ವನಿತೆಯರ ತಂಡ ಸುಲಭವಾಗಿ ಜಯಗಳಿಸಿತು.

ಮಂದಾನಾ ಅವರೊಂದಿಗೆ ಜೆಮಿಮಾ ರೊಡ್ರಿಗಸ್ ಆರಂಭಿಕ ಜತೆಯಾಟ ಆಡುವ ಮೂಲಕ 141 ರನ್ ಕಲೆ ಹಾಕಿದರು. ಈ ವೇಳೆ ಮಂಧಾನಾ 74 ರನ್ ಕಲೆ ಹಾಕಿದರು. 51 ಏಕದಿನ ಪಂದ್ಯಗಳನ್ನು ಆಡಿರುವ 23 ವರ್ಷದ ಮಂಧಾನಾ 2000 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಬೆಲಿಂದಾ ಕ್ಲಾರ್ಕ್ ಹಾಗೂ ಮೆಗ್ ಲ್ಯಾನಿಂಗ್ ಅವರ ನಂತರದ ಸ್ಥಾನಕ್ಕೇರಿದ್ದಾರೆ. ಮಂದಾನಾ ಇದುವರೆಗೆ ನಾಲ್ಕು ಏಕದಿನ ಶತಕ ಮತ್ತು 17 ಅರ್ಧ ಶತಕ ಗಳಿಸಿದ್ದಾರೆ.

ಇನ್ನು 50 ಓವರ್ ಗಳಲ್ಲಿ ದಾಖಲೆ ರನ್ ಗಳಿಸಿದ ಏಕೈಕ ಭಾರತೀಯ ಕ್ರಿಕೆಟಿಗ ಶಿಖರ್ ಧವನ್. 48 ಏಕದಿನ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಆಸ್ಟ್ರೇಲಿಯಾದ ಬೆಲಿಂದಾ ಕ್ಲಾ‍ರ್ಕ್ 41 ಏಕದಿನ ಪಂದ್ಯಗಳಲ್ಲಿ 2000 ರನ್ ದಾಖಲಿಸಿದ್ದರು. ಈಗ ಸ್ಮೃತಿ ಮಂಧಾನಾ 51 ಏಕದಿನ ಪಂದ್ಯಗಳಲ್ಲಿ 43.08 ಸರಾಸರಿಯಲ್ಲಿ 2,025 ರನ್ ಗಳಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಕಾಲಿನ ಗಾಯದ ಸಮಸ್ಯೆಯಿಂದ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಸ್ಮೃತಿ ಮಂಧಾನಾ, ಎರಡನೇ ಪಂದ್ಯದಲ್ಲಿ ಆಡಿದ್ದರು. ಅಂತಿಮ ಪಂದ್ಯದಲ್ಲಿ ಉತ್ತಮ ಆಟ ಆಡಿರುವ ಮಂಧಾನಾ 63 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಬಾರಿಸುವ ಮೂಲಕ 74 ರನ್ ಕಲೆ ಹಾಕಿದರು. ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆಯುವ ಮೂಲಕ ದಾಖಲೆ ಬರೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...