HomeUncategorizedಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

ಏಕದಿನ ಪಂದ್ಯದಲ್ಲಿ ಆಟಗಾರ್ತಿ ಸ್ಮೃತಿ ಮಂಧಾನಾ 2 ಸಾವಿರ ರನ್ ಮೈಲುಗಲ್ಲು

- Advertisement -
- Advertisement -

ಕ್ರಿಕೆಟ್ ಏಕದಿನ ಪಂದ್ಯಗಳಲ್ಲಿ ಎರಡು ಸಾವಿರ ರನ್ ಗಳಿಸಿದ 2ನೇ ಅತಿ ವೇಗದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಟಾರ್ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ. ಟೀ ಇಂಡಿಯಾ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ವುಮೆನ್ ಆಗಿರುವ ಸ್ಮೃತಿ ಮಂಧಾನಾ ದಾಖಲೆ ಬರೆದಿದ್ದಾರೆ.

ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಎಡಗೈ ಬ್ಯಾಟ್ಸ್ ವುಮೆನ್ ಸ್ಮೃತಿ ಮಂಧಾನಾ ಸಾಧನೆ ಮಾಡಿದ್ದಾರೆ. ಸ್ಮೃತಿ ಅವರ ಸಾಧನೆಯ ಗುಚ್ಚಕ್ಕೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಅಲ್ಲದೇ ಆರು ವಿಕೆಟ್ ಗಳಿಂದ ಭಾರತ ತಂಡ, ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು. ವೆಸ್ಟ್ ಇಂಡೀಸ್ ತಂಡ ನೀಡಿದ್ದ 195 ರನ್ ಗಳ ಗುರಿ ಬೆನ್ನತ್ತಿದ್ದ ಭಾರತದ ವನಿತೆಯರ ತಂಡ ಸುಲಭವಾಗಿ ಜಯಗಳಿಸಿತು.

ಮಂದಾನಾ ಅವರೊಂದಿಗೆ ಜೆಮಿಮಾ ರೊಡ್ರಿಗಸ್ ಆರಂಭಿಕ ಜತೆಯಾಟ ಆಡುವ ಮೂಲಕ 141 ರನ್ ಕಲೆ ಹಾಕಿದರು. ಈ ವೇಳೆ ಮಂಧಾನಾ 74 ರನ್ ಕಲೆ ಹಾಕಿದರು. 51 ಏಕದಿನ ಪಂದ್ಯಗಳನ್ನು ಆಡಿರುವ 23 ವರ್ಷದ ಮಂಧಾನಾ 2000 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಬೆಲಿಂದಾ ಕ್ಲಾರ್ಕ್ ಹಾಗೂ ಮೆಗ್ ಲ್ಯಾನಿಂಗ್ ಅವರ ನಂತರದ ಸ್ಥಾನಕ್ಕೇರಿದ್ದಾರೆ. ಮಂದಾನಾ ಇದುವರೆಗೆ ನಾಲ್ಕು ಏಕದಿನ ಶತಕ ಮತ್ತು 17 ಅರ್ಧ ಶತಕ ಗಳಿಸಿದ್ದಾರೆ.

ಇನ್ನು 50 ಓವರ್ ಗಳಲ್ಲಿ ದಾಖಲೆ ರನ್ ಗಳಿಸಿದ ಏಕೈಕ ಭಾರತೀಯ ಕ್ರಿಕೆಟಿಗ ಶಿಖರ್ ಧವನ್. 48 ಏಕದಿನ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಆಸ್ಟ್ರೇಲಿಯಾದ ಬೆಲಿಂದಾ ಕ್ಲಾ‍ರ್ಕ್ 41 ಏಕದಿನ ಪಂದ್ಯಗಳಲ್ಲಿ 2000 ರನ್ ದಾಖಲಿಸಿದ್ದರು. ಈಗ ಸ್ಮೃತಿ ಮಂಧಾನಾ 51 ಏಕದಿನ ಪಂದ್ಯಗಳಲ್ಲಿ 43.08 ಸರಾಸರಿಯಲ್ಲಿ 2,025 ರನ್ ಗಳಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿದಿದ್ದಾರೆ.

ಕಾಲಿನ ಗಾಯದ ಸಮಸ್ಯೆಯಿಂದ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಸ್ಮೃತಿ ಮಂಧಾನಾ, ಎರಡನೇ ಪಂದ್ಯದಲ್ಲಿ ಆಡಿದ್ದರು. ಅಂತಿಮ ಪಂದ್ಯದಲ್ಲಿ ಉತ್ತಮ ಆಟ ಆಡಿರುವ ಮಂಧಾನಾ 63 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಬಾರಿಸುವ ಮೂಲಕ 74 ರನ್ ಕಲೆ ಹಾಕಿದರು. ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆಯುವ ಮೂಲಕ ದಾಖಲೆ ಬರೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...