Homeಮುಖಪುಟಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

- Advertisement -
- Advertisement -

2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಗುಜರಾತ್‌ನ ಗಾಂಧಿನಗರ ಸೆಷನ್ಸ್ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

10 ವರ್ಷಗಳ ಹಿಂದೆ ಸೂರತ್ ಮೂಲದ ಮಹಿಳೆಯೊಬ್ಬರು ಅಹಮದಾಬಾದ್‌ನ ಮೊಟೆರಾದಲ್ಲಿರುವ ಅವರ ಆಶ್ರಮದಲ್ಲಿದ್ದಾಗ ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅಸಾರಾಂ ಬಾಪು ಅಪರಾಧಿ ಎಂದು ತೀರ್ಪು ನೀಡಿ ಜೈಲು ಪಾಲಾದ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ ಇದಾಗಿದೆ.

2018 ರಲ್ಲಿ ಪ್ರತ್ಯೇಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯವು ಸ್ವಯಂ-ಘೋಷಿತ ದೇವಮಾನವನನ್ನು ತಪ್ಪಿತಸ್ಥನೆಂದು ಘೋಷಿಸಿದ ಈಗಾಗಲೇ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ. 2013ರಲ್ಲಿ, ರಾಜಸ್ಥಾನದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಅಸಾರಾಮ್ ಬಾಪುವನ್ನು ಬಂಧಿಸಿದ ನಂತರ, ಇಬ್ಬರು ಸೂರತ್ ಮೂಲದ ಮಹಿಳೆಯರು ಸ್ವಯಂ ಘೋಷಿತ ದೇವಮಾನವ ಮತ್ತು ಅವರ ಮಗ ನಾರಾಯಣ ಸಾಯಿ ವಿರುದ್ಧ ಲೈಂಗಿಕ ಶೋಷಣೆಯ ಆರೋಪ ಮಾಡಿದರು.

ಇದನ್ನೂ ಓದಿ:  ಸ್ವಯಂಘೋಷಿತ ದೇವಮಾನವ ಅಸಾರಾಂ ವಿರುದ್ಧ ಮತ್ತೊಂದು ರೇಪ್ ಕೇಸ್; ಇಂದು ತೀರ್ಪು ಸಾಧ್ಯತೆ

1997 ಮತ್ತು 2006ರ ನಡುವೆ ಅಸಾರಾಂನ ಅಹಮದಾಬಾದ್ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ತನ್ನ ಅಕ್ಕನ ಮೇಲೆ ಅಸಾರಾಂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಂಗಿ ಆರೋಪಿಸಿದ್ದಳು.

2002 ಮತ್ತು 2005 ರ ನಡುವೆ ಸೂರತ್‌ನ ಜಹಾಂಗೀರ್‌ಪುರ ಪ್ರದೇಶದಲ್ಲಿ ಅಸಾರಾಂ ಅವರ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ಅಸಾರಾಂ ಪುತ್ರ ನಾರಾಯಣ ಸಾಯಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಮಗಿಯು ಆರೋಪಿಸಿದರು.

2019ರಲ್ಲಿ ತಂಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾರಾಯಣ ಸಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಏನಿದು ಪ್ರಕರಣ?
ಅಸಾರಾಂ ವಿರುದ್ಧ ಕೇಸು ದಾಖಲಿಸಿದ ಮಹಿಳೆಯು, ಹಲವು ವರ್ಷಗಳಿಂದ ವಿವಿಧ ಆಶ್ರಮಗಳಲ್ಲಿ ಸ್ವಯಂಘೋಷಿತ ದೇವಮಾನವನಿಂದ ತನ್ನ ಮೇಲೆ ಅತ್ಯಾಚಾರ ನಡೆದಿದೆ. ಅಲ್ಲಿ ನನ್ನನ್ನು ಬಂಧಿಯಾಗಿದ್ದರು ಎಂದು ಆರೋಪಿಸಿದ್ದರು. ಈ ಬಗ್ಗೆ 2013ರಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯಲ್ಲಿಒಟ್ಟು 68 ಜನರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಪ್ರಕರಣದ ತನಿಖಾಧಿಕಾರಿ ದಿವ್ಯಾ ರವಿಯಾ ಅವರಿಗೂ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರ ಮೇಲೆ ಆರೋಪ ಕೇಳಿಬಂದಿತ್ತು. ಸೋಮವಾರ ಗಾಂಧಿನಗರ ನ್ಯಾಯಾಲಯವು ಅತ್ಯಾಚಾರದ ಆರೋಪದಲ್ಲಿ ಅಸಾರಾಂನನ್ನು ದೋಷಿ ಎಂದು ಘೋಷಿಸಿತು ಮತ್ತು ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಿತು.

ಅಸಾರಾಂ ಅವರ ಪತ್ನಿ ಲಕ್ಷ್ಮಿ, ಮಗಳು ಭಾರತಿ ಮತ್ತು ನಾಲ್ವರು ಮಹಿಳಾ ಅನುಯಾಯಿಗಳಾದ ಧ್ರುವಬೆನ್, ನಿರ್ಮಲಾ, ಜಸ್ಸಿ ಮತ್ತು ಮೀರಾ ಕೂಡ ಆರೋಪಿಗಳಾಗಿದ್ದರು ಆದರೆ ಗಾಂಧಿನಗರ ನ್ಯಾಯಾಲಯವು  ಖುಲಾಸೆಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...